ಮನರಂಜನೆ

‘ಸಿಂಪಲ್’ ಸುನಿ ‘ಗತವೈಭವ’ಕ್ಕೆ ಸುದೀಪ್ ಬೆಂಬಲ …

‘ಸಿಂಪಲ್’ ಸುನಿ ನಿರ್ದೇಶನದ ಹೊಸ ಚಿತ್ರ ‘ಗತವೈಭವ’ ಇದೇ ನವೆಂಬರ್ 14ರಂದು ಬಿಡುಗಡೆಯಾಗುತ್ತಿದೆ. ಇಲ್ಲಿಯವರೆಗೂ ಟೀಸರ್ ಮತ್ತು ಹಾಡುಗಳಿಂದಲೇ ಕುತೂಹಲ ಮೂಡಿಸಿದ್ದ ಸುನಿ, ಇದೀಗ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದ್ದಾರೆ. ಈ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದ್ದು, ನಟ ಸುದೀಪ್‍ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ‘ಕನ್ನಡ ಚಿತ್ರರಂಗದ ಬೆಸ್ಟ್ ನಿರ್ದೇಶಕರಲ್ಲಿ ಸುನಿ ಕೂಡ ಒಬ್ಬರು. ಅವರ ಜೊತೆಗೆ ಕೆಲಸ ಮಾಡುವ ಅವಕಾಶ ನನಗಿನ್ನೂ ಸಿಕ್ಕಿಲ್ಲ. ಒಂದಲ್ಲಾ ಒಂದು ದಿನ ಅವರ ಜೊತ ಕೆಲಸ ಮಾಡಬಹುದು. ಚಿತ್ರದ ಹೀರೋ ದುಷ್ಯಂತ್, ನಾಯಕಿ ಆಶಿಕಾ ರಂಗನಾಥ್ ಎಲ್ಲರೂ ಚೆನ್ನಾಗಿ ಕಾಣುತ್ತಿದ್ದಾರೆ. ಈ ಚಿತ್ರದ ಹೀರೋ ದುಷ್ಯಂತ್ ಅವರಿಗೆ ನಾನು ಟಿಪ್ಸ್ ಕೊಡುವುದು ಏನಿಲ್ಲ. ಅವರು ತುಂಬಾ ಚೆನ್ನಾಗಿ ಮಾತನಾಡಿದ್ದು ನೋಡಿದೆ. ನಾನು ಅವರಿಂದ ಕಲಿಯಬೇಕು. ದುಷ್ಯಂತ್‍ ಹೇಗೆ 10 ನಿಮಿಷಗಳ ಕಾಲ ಅಷ್ಟೊಂದು ಅಚ್ಚುಕಟ್ಟಾಗಿ ಎಲ್ಲರನ್ನ ತಮ್ಮ ಮಾತಿನಿಂದ ಹಿಡಿದಿಟ್ಟುಕೊಂಡರು ಅಂತ ಯೋಚಿಸುತ್ತಿದ್ದೆ. ಆಮೇಲೆ ಗೊತ್ತಾಯ್ತು ದುಷ್ಯಂತ್ ಅವರು ರಾಜಕಾರಣಿ ಮಗ ಅಂತ’ ಎಂದು ಹೇಳಿದರು.

ಇದನ್ನು ಓದಿ: ನವೆಂಬರ್.14ರಂದು ತೆರೆಮೇಲೆ ಫ್ಯಾಂಟಸಿ ‘ಗತವೈಭವ’

‘ಗತವೈಭವ’ ಚಿತ್ರದಲ್ಲಿ ಹೊಸ ಹೀರೋ ದುಷ್ಯಂತ್ ಜೊತೆಗೆ ಆಶಿಕಾ ರಂಗನಾಥ್ ನಾಯಕಿಯಾಗಿ ನಟಿಸಿದ್ದಾರೆ. ‘ಗತವೈಭವ’ ಸಾಕಷ್ಟು ರೀತಿಯಲ್ಲಿ ಸ್ಪೆಷಲ್ ಚಿತ್ರ ಎನ್ನುವ ಆಶಿಕಾ ತಾನು ಅತಿ ಹೆಚ್ಚು ದಿನಗಳ ಕಾಲ ಶೂಟ್ ಮಾಡಿದ ಸಿನಿಮಾ ಎನ್ನುತ್ತಾರೆ. ನಾಲ್ಕು ಸಿನಿಮಾ ನೋಡುವ ಅನುಭವ ಆಗುತ್ತದೆ ಎಂದ ಅವರು, ನಾಲ್ಕು ಕಥೆ, ನಾಲ್ಕು ಪಾತ್ರಗಳು ಚಿತ್ರದ ಹೈಲೈಟ್‍ ಎಂದರು. ಇನ್ನು, ದುಷ್ಯಂತ್‍ ಎಂಟು ವರ್ಷಗಳ ಪ್ರಯತ್ನದ ಬಳಿಕ ನಟನಾಗಿ ಪ್ರೇಕ್ಷಕರ ಮುಂದೆ ಬಂದು ನಿಂತಿರುವುದಾಗಿ ಹೇಳಿಕೊಂಡರು.

ಮಿಕ್ಕಂತೆ ಚಿತ್ರದಲ್ಲಿ ಸುಧಾ ಬೆಳವಾಡಿ, ಕಿಶನ್ ಬಿಳಗಲಿ, ಕೃಷ್ಣ ಹೆಬ್ಬಾಳೆ, ಕೃಷ್ಣ ಜೋರಾಪುರ್ ಮುಂತಾದವರು ನಟಿಸಿದ್ದಾರೆ. ಈ ಚಿತ್ರಕ್ಕೆ ಜೂಡಾ ಸ್ಯಾಂಡಿ ಸಂಗೀತ ಸಂಯೋಜಿಸಿದ್ದು, ವಿಲೀಯಂ ಡೇವಿಡ್ ಛಾಯಾಗ್ರಹಣ ಮಾಡಿದ್ದಾರೆ. ಸೇರ್ವೇಗಾರ ಸಿಲ್ವರ್ ಸ್ಕ್ರೀನ್ಸ್ ಮತ್ತು ಸುನಿ ಸಿನಿಮಾಸ್ ಸಂಸ್ಥೆಯಡಿ ದೀಪಕ್ ಹಾಗೂ ಸಿಂಪಲ್ ಸುನಿ ಚಿತ್ರ ನಿರ್ಮಾಣ ಮಾಡ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

29 mins ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

1 hour ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

2 hours ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

2 hours ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…

2 hours ago

ವಿಕಸಿತ ಭಾರತಕ್ಕೆ ಕೈಜೋಡಿಸಿ : ದೇಶವಾಸಿಗಳಿಗೆ ಪ್ರಧಾನಿ ಮೋದಿ ಕರೆ

ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…

5 hours ago