sudha raani
1978 ರಲ್ಲಿ ಬಿಡುಗಡೆಯಾದ ವಿಷ್ಣುವರ್ಧನ್ ಅಭಿನಯದ ‘ಕಿಲಾಡಿ ಕಿಟ್ಟು’ ಚಿತ್ರದ ಮೂಲಕ ಬಾಲನಟಿಯಾಗಿ ಕನ್ನಡ ಚಿತ್ರರಂಗಕ್ಕೆ ಬಂದ ಸುಧಾರಾಣಿ, ನಂತರ 1986ರಲ್ಲಿ ಬಿಡುಗಡೆಯಾದ ಶಿವರಾಜಕುಮಾರ್ ಅಭಿನಯದ ‘ಆನಂದ್’ ಚಿತ್ರದ ಮೂಲಕ ನಾಯಕಿಯಾದರು. ನಂತರದ ವರ್ಷಗಳಲ್ಲಿ ಹಲವು ಚಿತ್ರಗಳಲ್ಲಿ, ಹಲವು ಜನಪ್ರಿಯ ನಟರ ಜೊತೆಗೆ ನಟಿಸಿದ ಸುಧಾರಾಣಿ, ಇದೀಗ ನಿರ್ಮಾಪಕಿಯಾಗಿದ್ದಾರೆ.
ಸುಧಾರಾಣಿ ಸದ್ದಿಲ್ಲದೆ ‘ಘೋಸ್ಟ್ – ದಿ ದೆವ್ವ’ ಎಂಬ ಕಿರುಚಿತ್ರವನ್ನು ನಿರ್ಮಿಸುವುದರ ಜೊತೆಗೆ ಅದರಲ್ಲಿ ಪ್ರಮುಖ ಪಾತ್ರದಲ್ಲೂ ಕಾಣಿಸಿಕೊಂಡಿದ್ದಾರೆ. ಸುಧಾರಾಣಿ ಸದ್ಯ ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ‘ಶ್ರೀರಸ್ತು ಶುಭಮಸ್ತು’ ಧಾರಾವಾಹಿಯಲ್ಲಿ ನಟಿಸುತ್ತಿದ್ದು, ಆ ಧಾರಾವಾಹಿ ಹಿಂದಿರುವ ತಂಡವೇ, ಇಲ್ಲೂ ಕೆಲಸ ಮಾಡಿರುವುದು ವಿಶೇಷ.
ಈ ಕಿರುಚಿತ್ರ ನಿರ್ಮಿಸುತ್ತಿರುವ ಕುರಿತು ಮಾತನಾಡಿರುವ ಸುಧಾರಾಣಿ, ‘ಜಗತ್ತಿನಲ್ಲಿ ಒಳ್ಳೆಯದು ಹೇಗಿದೆಯೋ ಹಾಗೆ ಕೆಟ್ಟದ್ದು ಇದೆ. ದೇವರು ಇದ್ದಾನೆ. ದೆವ್ವವು ಇದೆ. ಇದೆಲ್ಲವೂ ನಮ್ಮ ನಮ್ಮ ಕಲ್ಪನೆಗೆ ಬಿಟ್ಟದ್ದು. ಈ ವಿಚಾರದ ಮೇಲೆ ಬಂದಂತಹ ಒಂದು ಎಳೆಯನ್ನಿಟ್ಟುಕೊಂಡು ಕಿರು ಚಿತ್ರ ಮಾಡಲಾಗಿದೆ. ‘ಶ್ರೀರಸ್ತು ಶುಭಮಸ್ತು’ ಧಾರಾವಾಹಿಯ ನಿರ್ದೇಶಕರು ಈ ಕಥೆ ಹೇಳಿದಾಗ ಬಹಳ ಇಷ್ಟವಾಯಿತು. ನಿರ್ಮಾಣದ ಮೊದಲ ಹೆಜ್ಜೆಯಾಗಿ ಈ ಕಿರುಚಿತ್ರ ನಿರ್ಮಾಣ ಮಾಡಿದ್ದೇನೆ. ಜೊತೆಗೆ ಪ್ರಮುಖ ಪಾತ್ರದಲ್ಲೂ ಕಾಣಿಸಿಕೊಂಡಿದ್ದೇನೆ’ ಎಂದರು.
ಈ ಚಿತ್ರದಲ್ಲಿ ನಟಿಸುವುದರ ಜೊತೆಗೆ, ಕಿರುಚಿತ್ರವನ್ನು ನಿರ್ದೇಶಿಸಿರುವ ಸುದೇಶ್ ಕೆ. ರಾವ್ ಮಾತನಾಡಿ, ‘ನಾನು ಇದುವರೆಗೂ ಹಲವು ಧಾರಾವಾಹಿಗಳಲ್ಲಿ ನಟಿಸುವುದರ ಜೊತೆಗೆ ನಿರ್ದೇಶನವನ್ನೂ ಮಾಡಿದ್ದೆ. ‘ಘೋಸ್ಟ್’ ಒಂದು ವಿಶೇಷ ಕಥೆಯಾಗಿ ನಿಲ್ಲುತ್ತದೆ. ಪ್ರಪಂಚದಲ್ಲಿ ಇರುವುದೆಲ್ಲವೂ ಪಾಸಿಟಿವ್. ನಾವೇ ಎಲ್ಲದರಲ್ಲೂ ನೆಗೆಟಿವ್ ಹುಡುಕಿ, ನಮ್ಮ ತಲೆ ಮತ್ತು ಮನಸ್ಸನ್ನು ಕೆಡಿಸಿಕೊಳ್ಳುತ್ತೇವೆ. ಅಂತಹ ಎಲ್ಲರಿಗೂ ಈ ಶಾರ್ಟ್ ಫಿಲ್ಮ್ ಪರಿಹಾರ ನೀಡಬಹುದು’ ಎಂದು ಹೇಳಿದರು.
‘ಘೋಸ್ಟ್’ ಕಿರುಚಿತ್ರಕ್ಕೆ ‘ದಿ ದೆವ್ವ’ ಎಂಬ ಅಡಿಬರಹವಿದೆ.
ಗುಂಡ್ಲುಪೇಟೆ: ಪಂಚ ಗ್ಯಾರಂಟಿಗಳ ಘೋಷಣೆಯೊಂದಿಗೆ ಅಧಿಕಾರಕ್ಕೇರಿದ ಕಾಂಗ್ರೆಸ್ ಸರ್ಕಾರದಿಂದ ರಾಜ್ಯದ ಅಭಿವೃದ್ಧಿ ಸಂಪೂರ್ಣವಾಗಿ ಕುಸಿದಿದೆ. ಈ ನಡುವೆ ಗ್ಯಾರಂಟಿಗಳಿಂದ ಸರ್ಕಾರಕ್ಕೆ…
ಇಸ್ರೇಲ್: ಭಾರತ ಮತ್ತು ಇಸ್ರೇಲ್ ನಡುವಿನ ಕಾರ್ಯತಂತ್ರದ ಸಂಬಂಧಗಳನ್ನು ಬಲಪಡಿಸುವಲ್ಲಿ ಅಸಾಧಾರಣ ಕೊಡುಗೆಗಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬುಧವಾರ…
ಉದಯಪುರ: ಉದಯಪುರದ ಅರಮನೆಯಲ್ಲಿ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಅವರು ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಂದು ಬೆಳಿಗ್ಗೆ…
ಮೈಸೂರು: ಪಟ್ಟಣದ ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಈ ಬಗ್ಗೆ…
ಬಜೆಟ್ ಪೂರ್ವ ಸಭೆಯಲ್ಲಿ ಪ್ರಸ್ತಾಪಗೊಂಡ ಹಸಿರು ಗೋಡೆ ಯೋಜನೆ ರಾಜ್ಯದ ಪರಿಸರ ರಕ್ಷಣೆಗೆ ಆಪದ್ಬಾಂಧವನಂತಿದೆ. ಉತ್ತರ ಕರ್ನಾಟಕದಲ್ಲಿ ಮರುಭೂಮೀಕರಣ ತಡೆಗಟ್ಟಲು…
ದೇಶಕ್ಕೇ ಮಾದರಿಯಾಗಿರುವ ಮೈಸೂರನ್ನು ನಿರ್ಮಿಸಿದ ಮೈಸೂರು ಸಂಸ್ಥಾನದ ಮಹಾರಾಜರುಗಳು ಅನುಸರಿಸಿದ ಯೋಜನೆಗಳ ಮಾದರಿಯಲ್ಲೇ, ಗ್ರೇಟರ್ ಮೈಸೂರನ್ನು ನಿರ್ಮಾಣ ಮಾಡಬೇಕು ಎಂದು…