ಮನರಂಜನೆ

ಎರಡೇ ಪಾತ್ರಗಳ ಸುತ್ತ ಸುಧಾರಾಣಿ ಅವರ ‘ಘೋಸ್ಟ್’ …

1978 ರಲ್ಲಿ ಬಿಡುಗಡೆಯಾದ ವಿಷ್ಣುವರ್ಧನ್‍ ಅಭಿನಯದ ‘ಕಿಲಾಡಿ ಕಿಟ್ಟು’ ಚಿತ್ರದ ಮೂಲಕ ಬಾಲನಟಿಯಾಗಿ ಕನ್ನಡ ಚಿತ್ರರಂಗಕ್ಕೆ ಬಂದ ಸುಧಾರಾಣಿ, ನಂತರ 1986ರಲ್ಲಿ ಬಿಡುಗಡೆಯಾದ ಶಿವರಾಜಕುಮಾರ್ ಅಭಿನಯದ ‘ಆನಂದ್‍’ ಚಿತ್ರದ ಮೂಲಕ ನಾಯಕಿಯಾದರು. ನಂತರದ ವರ್ಷಗಳಲ್ಲಿ ಹಲವು ಚಿತ್ರಗಳಲ್ಲಿ, ಹಲವು ಜನಪ್ರಿಯ ನಟರ ಜೊತೆಗೆ ನಟಿಸಿದ ಸುಧಾರಾಣಿ, ಇದೀಗ ನಿರ್ಮಾಪಕಿಯಾಗಿದ್ದಾರೆ.

ಸುಧಾರಾಣಿ ಸದ್ದಿಲ್ಲದೆ ‘ಘೋಸ್ಟ್ – ದಿ ದೆವ್ವ’ ಎಂಬ ಕಿರುಚಿತ್ರವನ್ನು ನಿರ್ಮಿಸುವುದರ ಜೊತೆಗೆ ಅದರಲ್ಲಿ ಪ್ರಮುಖ ಪಾತ್ರದಲ್ಲೂ ಕಾಣಿಸಿಕೊಂಡಿದ್ದಾರೆ. ಸುಧಾರಾಣಿ ಸದ್ಯ ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ‘ಶ್ರೀರಸ್ತು ಶುಭಮಸ್ತು’ ಧಾರಾವಾಹಿಯಲ್ಲಿ ನಟಿಸುತ್ತಿದ್ದು, ಆ ಧಾರಾವಾಹಿ ಹಿಂದಿರುವ ತಂಡವೇ, ಇಲ್ಲೂ ಕೆಲಸ ಮಾಡಿರುವುದು ವಿಶೇಷ.

ಈ ಕಿರುಚಿತ್ರ ನಿರ್ಮಿಸುತ್ತಿರುವ ಕುರಿತು ಮಾತನಾಡಿರುವ ಸುಧಾರಾಣಿ, ‘ಜಗತ್ತಿನಲ್ಲಿ ಒಳ್ಳೆಯದು ಹೇಗಿದೆಯೋ ಹಾಗೆ ಕೆಟ್ಟದ್ದು ಇದೆ. ದೇವರು ಇದ್ದಾನೆ. ದೆವ್ವವು ಇದೆ. ಇದೆಲ್ಲವೂ ನಮ್ಮ ನಮ್ಮ ಕಲ್ಪನೆಗೆ ಬಿಟ್ಟದ್ದು. ಈ ವಿಚಾರದ ಮೇಲೆ ಬಂದಂತಹ ಒಂದು ಎಳೆಯನ್ನಿಟ್ಟುಕೊಂಡು ಕಿರು ಚಿತ್ರ ಮಾಡಲಾಗಿದೆ. ‘ಶ್ರೀರಸ್ತು ಶುಭಮಸ್ತು’ ಧಾರಾವಾಹಿಯ ನಿರ್ದೇಶಕರು ಈ ಕಥೆ ಹೇಳಿದಾಗ ಬಹಳ ಇಷ್ಟವಾಯಿತು. ನಿರ್ಮಾಣದ ಮೊದಲ ಹೆಜ್ಜೆಯಾಗಿ ಈ ಕಿರುಚಿತ್ರ ನಿರ್ಮಾಣ ಮಾಡಿದ್ದೇನೆ. ಜೊತೆಗೆ ಪ್ರಮುಖ ಪಾತ್ರದಲ್ಲೂ ಕಾಣಿಸಿಕೊಂಡಿದ್ದೇನೆ’ ಎಂದರು.

ಈ ಚಿತ್ರದಲ್ಲಿ ನಟಿಸುವುದರ ಜೊತೆಗೆ, ಕಿರುಚಿತ್ರವನ್ನು ನಿರ್ದೇಶಿಸಿರುವ ಸುದೇಶ್‍ ಕೆ. ರಾವ್ ಮಾತನಾಡಿ, ‘ನಾನು ಇದುವರೆಗೂ ಹಲವು ಧಾರಾವಾಹಿಗಳಲ್ಲಿ ನಟಿಸುವುದರ ಜೊತೆಗೆ ನಿರ್ದೇಶನವನ್ನೂ ಮಾಡಿದ್ದೆ. ‘ಘೋಸ್ಟ್’ ಒಂದು ವಿಶೇಷ ಕಥೆಯಾಗಿ ನಿಲ್ಲುತ್ತದೆ. ಪ್ರಪಂಚದಲ್ಲಿ ಇರುವುದೆಲ್ಲವೂ ಪಾಸಿಟಿವ್. ನಾವೇ ಎಲ್ಲದರಲ್ಲೂ ನೆಗೆಟಿವ್ ಹುಡುಕಿ, ನಮ್ಮ ತಲೆ ಮತ್ತು ಮನಸ್ಸನ್ನು ಕೆಡಿಸಿಕೊಳ್ಳುತ್ತೇವೆ‌. ಅಂತಹ ಎಲ್ಲರಿಗೂ ಈ ಶಾರ್ಟ್ ಫಿಲ್ಮ್ ಪರಿಹಾರ ನೀಡಬಹುದು’ ಎಂದು ಹೇಳಿದರು.

‘ಘೋಸ್ಟ್’ ಕಿರುಚಿತ್ರಕ್ಕೆ ‘ದಿ ದೆವ್ವ’ ಎಂಬ ಅಡಿಬರಹವಿದೆ‌.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

5 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

5 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

5 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

5 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

5 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

5 hours ago