sudha raani
1978 ರಲ್ಲಿ ಬಿಡುಗಡೆಯಾದ ವಿಷ್ಣುವರ್ಧನ್ ಅಭಿನಯದ ‘ಕಿಲಾಡಿ ಕಿಟ್ಟು’ ಚಿತ್ರದ ಮೂಲಕ ಬಾಲನಟಿಯಾಗಿ ಕನ್ನಡ ಚಿತ್ರರಂಗಕ್ಕೆ ಬಂದ ಸುಧಾರಾಣಿ, ನಂತರ 1986ರಲ್ಲಿ ಬಿಡುಗಡೆಯಾದ ಶಿವರಾಜಕುಮಾರ್ ಅಭಿನಯದ ‘ಆನಂದ್’ ಚಿತ್ರದ ಮೂಲಕ ನಾಯಕಿಯಾದರು. ನಂತರದ ವರ್ಷಗಳಲ್ಲಿ ಹಲವು ಚಿತ್ರಗಳಲ್ಲಿ, ಹಲವು ಜನಪ್ರಿಯ ನಟರ ಜೊತೆಗೆ ನಟಿಸಿದ ಸುಧಾರಾಣಿ, ಇದೀಗ ನಿರ್ಮಾಪಕಿಯಾಗಿದ್ದಾರೆ.
ಸುಧಾರಾಣಿ ಸದ್ದಿಲ್ಲದೆ ‘ಘೋಸ್ಟ್ – ದಿ ದೆವ್ವ’ ಎಂಬ ಕಿರುಚಿತ್ರವನ್ನು ನಿರ್ಮಿಸುವುದರ ಜೊತೆಗೆ ಅದರಲ್ಲಿ ಪ್ರಮುಖ ಪಾತ್ರದಲ್ಲೂ ಕಾಣಿಸಿಕೊಂಡಿದ್ದಾರೆ. ಸುಧಾರಾಣಿ ಸದ್ಯ ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ‘ಶ್ರೀರಸ್ತು ಶುಭಮಸ್ತು’ ಧಾರಾವಾಹಿಯಲ್ಲಿ ನಟಿಸುತ್ತಿದ್ದು, ಆ ಧಾರಾವಾಹಿ ಹಿಂದಿರುವ ತಂಡವೇ, ಇಲ್ಲೂ ಕೆಲಸ ಮಾಡಿರುವುದು ವಿಶೇಷ.
ಈ ಕಿರುಚಿತ್ರ ನಿರ್ಮಿಸುತ್ತಿರುವ ಕುರಿತು ಮಾತನಾಡಿರುವ ಸುಧಾರಾಣಿ, ‘ಜಗತ್ತಿನಲ್ಲಿ ಒಳ್ಳೆಯದು ಹೇಗಿದೆಯೋ ಹಾಗೆ ಕೆಟ್ಟದ್ದು ಇದೆ. ದೇವರು ಇದ್ದಾನೆ. ದೆವ್ವವು ಇದೆ. ಇದೆಲ್ಲವೂ ನಮ್ಮ ನಮ್ಮ ಕಲ್ಪನೆಗೆ ಬಿಟ್ಟದ್ದು. ಈ ವಿಚಾರದ ಮೇಲೆ ಬಂದಂತಹ ಒಂದು ಎಳೆಯನ್ನಿಟ್ಟುಕೊಂಡು ಕಿರು ಚಿತ್ರ ಮಾಡಲಾಗಿದೆ. ‘ಶ್ರೀರಸ್ತು ಶುಭಮಸ್ತು’ ಧಾರಾವಾಹಿಯ ನಿರ್ದೇಶಕರು ಈ ಕಥೆ ಹೇಳಿದಾಗ ಬಹಳ ಇಷ್ಟವಾಯಿತು. ನಿರ್ಮಾಣದ ಮೊದಲ ಹೆಜ್ಜೆಯಾಗಿ ಈ ಕಿರುಚಿತ್ರ ನಿರ್ಮಾಣ ಮಾಡಿದ್ದೇನೆ. ಜೊತೆಗೆ ಪ್ರಮುಖ ಪಾತ್ರದಲ್ಲೂ ಕಾಣಿಸಿಕೊಂಡಿದ್ದೇನೆ’ ಎಂದರು.
ಈ ಚಿತ್ರದಲ್ಲಿ ನಟಿಸುವುದರ ಜೊತೆಗೆ, ಕಿರುಚಿತ್ರವನ್ನು ನಿರ್ದೇಶಿಸಿರುವ ಸುದೇಶ್ ಕೆ. ರಾವ್ ಮಾತನಾಡಿ, ‘ನಾನು ಇದುವರೆಗೂ ಹಲವು ಧಾರಾವಾಹಿಗಳಲ್ಲಿ ನಟಿಸುವುದರ ಜೊತೆಗೆ ನಿರ್ದೇಶನವನ್ನೂ ಮಾಡಿದ್ದೆ. ‘ಘೋಸ್ಟ್’ ಒಂದು ವಿಶೇಷ ಕಥೆಯಾಗಿ ನಿಲ್ಲುತ್ತದೆ. ಪ್ರಪಂಚದಲ್ಲಿ ಇರುವುದೆಲ್ಲವೂ ಪಾಸಿಟಿವ್. ನಾವೇ ಎಲ್ಲದರಲ್ಲೂ ನೆಗೆಟಿವ್ ಹುಡುಕಿ, ನಮ್ಮ ತಲೆ ಮತ್ತು ಮನಸ್ಸನ್ನು ಕೆಡಿಸಿಕೊಳ್ಳುತ್ತೇವೆ. ಅಂತಹ ಎಲ್ಲರಿಗೂ ಈ ಶಾರ್ಟ್ ಫಿಲ್ಮ್ ಪರಿಹಾರ ನೀಡಬಹುದು’ ಎಂದು ಹೇಳಿದರು.
‘ಘೋಸ್ಟ್’ ಕಿರುಚಿತ್ರಕ್ಕೆ ‘ದಿ ದೆವ್ವ’ ಎಂಬ ಅಡಿಬರಹವಿದೆ.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…