ಮನರಂಜನೆ

ಪೊಲೀಸ್‍ ಪಾತ್ರದಲ್ಲಿ ಸುಧಾರಾಣಿ; ‘ಚೌಕಿದಾರ್’ ಚಿತ್ರಕ್ಕೆ ಎಂಟ್ರಿ

‘ಚೈತ್ರದ ಪ್ರೇಮಾಂಜಲಿ’ ಖ್ಯಾತಿಯ ಶ್ವೇತಾ, 20 ವರ್ಷಗಳ ವಿರಾಮದ ನಂತರ ಚಂದ್ರಶೇಖರ್‍ ಬಂಡಿಯಪ್ಪ ನಿರ್ದೇಶನದ ‘ಚೌಕಿದಾರ್‍’ ಚಿತ್ರದಲ್ಲಿ ಶ್ವೇತಾ ನಟಿಸುತ್ತಿದ್ದಾರೆ ಎಂಬು ಸುದ್ದಿಯೊಂದು ಕೇಳಿಬಂದಿತ್ತು. ಈಗ ಈ ಚಿತ್ರಕ್ಕೆ ಮತ್ತೊಬ್ಬ ಹಿರಿಯ ನಟಿ ಸುಧಾರಾಣಿ ಎಂಟ್ರಿಯಾಗಿದೆ.

ಹೌದು, ‘ಚೌಕಿದಾರ್‍’ ಚಿತ್ರದಲ್ಲೊಂದು ಪ್ರಮುಖ ಪಾತ್ರದಲ್ಲಿ ಸುಧಾರಾಣಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರದಲ್ಲಿ ಅವರು ಟ್ರಾಫಿಕ್‍ ಇನ್‍ಸ್ಪೆಕ್ಟರ್‍ ಆಗಿ ನಟಿಸುತ್ತಿದ್ದಾರೆ. ಪೊಲೀಸ್‍ ಪಾತ್ರದಲ್ಲಿ ಸುಧಾರಾಣಿ ಅವರು ಕಾಣಿಸಿಕೊಳ್ಳುತ್ತಿರುವುದು ಇದು ಮೊದಲೇನಲ್ಲ. ಈ ಹಿಂದೆ, ಜಗ್ಗೇಶ್‍ ನಿರ್ದೇಶನದ ’ಗುರು’ ಚಿತ್ರದಲ್ಲೂ ಪೊಲೀಸ್‍ ಇನ್‍ಸ್ಪೆಕ್ಟರ್‍ ಆಗಿ ನಟಿಸಿದ್ದರು. ಈಗ ಟ್ರಾಫಿಕ್‍ ಇನ್‍ಸ್ಪೆಕ್ಟರ್ ಆಗಿ ಬಂದಿದ್ದಾರೆ ಅಷ್ಟೇ.

ಈ ಚಿತ್ರದ ಕುರಿತು ಮಾತನಾಡುವ ನಿರ್ದೇಶಕ ಚಂದ್ರಶೇಖರ್‍ ಬಂಡಿಯಪ್ಪ, ‘ಇದೊಂದು ಕೌಟುಂಬಿಕ ಚಿತರ. ರೇಶ್ಮೆ ಹಿನ್ನೆಲೆಯಲ್ಲಿ ಚಿತ್ರದ ಕಥೆ ಸಾಗುತ್ತದೆ. ಇದು ಯಾವ ನೈಜ ಘಟನೆಯನ್ನು ಆಧರಿಸಿಲ್ಲದಿದ್ದರೂ, ನಾಯಕ, ನಾಯಕಿ ಮತ್ತು ನಾಯಕನ ಅಪ್ಪನ ಪಾತ್ರಗಳನ್ನು ನೋಡಿರೆ, ಇವರು ಎಲ್ಲಾ ಕುಟುಂಬಗಳಲ್ಲೂ ಕಾಣಿಸುತ್ತಾರೆ. ಇದೇ ಮೊದಲ ಬಾರಿಗೆ ಪೃಥ್ವಿ ಮಾಸ್‍ ಪಾತ್ರ ಮಾಡುತ್ತಿದ್ದಾರೆ. ಇವತ್ತಿನ ತಲೆಮಾರಿನವರ ಕಥೆ ಇದಾಗಿದ್ದು, ಅವರಿಗೆ ಬಹಳ ಇಷ್ಟವಾಗುತ್ತದೆ ಎಂಬ ನಂಬಿಕೆ ನನಗಿದೆ’ ಎಂದಿದ್ದರು.

ಇದುವರೆಗೂ ಪ್ರೇಮಕಥೆಗಳಲ್ಲೇ ಹೆಚ್ಚಾಗಿ ಅಭಿನಯಿಸಿದ್ದ ಪೃಥ್ವಿ ಅಂಬಾರ್, ‘ಚೌಕಿದಾರ್’ ಚಿತ್ರದಲ್ಲಿ ಮಾಸ್‍ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅದಕ್ಕಾಗಿ ಸಾಕಷ್ಟು ತಯಾರಿಯನ್ನೂ ಮಾಡಿಕೊಂಡಿದ್ದಾರಂತೆ. ಪೃಥ್ವಿಗೆ ನಾಯಕಿಯಾಗಿ ಧನ್ಯಾ ರಾಮ್‍ಕುಮಾರ್‍ ಅಭಿನಯಿಸುತ್ತಿದ್ದಾರೆ. ಇದು ಪೃಥ್ವಿ ಮತ್ತು ಧನ್ಯಾ, ನಾಯಕ-ನಾಯಕಿಯಾಗಿ ನಟಿಸುತ್ತಿರುವ ಮೊದಲ ಚಿತ್ರ. ಪೃಥ್ವಿ ತಂದೆಯಾಗಿ ಸಾಯಿಕುಮಾರ್‍ ನಟಿಸಿದರೆ, ತಾಯಿಯ ಪಾತ್ರದಲ್ಲಿ ಶ್ವೇತಾ ನಟಿಸುತ್ತಿರುವ ಸುದ್ದಿ ಇದೆ. ಇನ್ನು, ವಿಲನ್‍ ಪಾತ್ರದಲ್ಲಿ ಧರ್ಮ ನಟಿಸುತ್ತಿದ್ದಾರೆ.

‘ಚೌಕಿದಾರ್‍’ ಚಿತ್ರವನ್ನು ಕಲ್ಲಹಳ್ಳಿ ಚಂದ್ರಶೇಖರ್, VS ಎಂಟರ್ ಟೈನ್ಮೆಂಟ್ ಮೂಲಕ ನಿರ್ಮಾಣ ಮಾಡುತ್ತಿದ್ದಾರೆ. ಸಚಿನ್ ಬಸ್ರೂರು ಸಂಗೀತ ಸಂಯೋಜಿಸುತ್ತಿದ್ದಾರೆ. ಸಿದ್ದು ಕಂಚನಹಳ್ಳಿ ಛಾಯಾಗ್ರಹಣ ಈ ಚಿತ್ರಕ್ಕಿದೆ. ಈ ಚಿತ್ರ ಕನ್ನಡ, ತೆಲುಗು, ತಮಿಳು, ಹಿಂದಿ ಮತ್ತು ಮಲಯಾಳಂ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.

andolana

Recent Posts

ಉತ್ತರ ಪ್ರದೇಶ: ಕಟ್ಟಡದಲ್ಲಿ ಅಗ್ನಿ ಅವಘಡ: 15 ವಿದ್ಯಾರ್ಥಿಗಳು ಸಾವು

ಲಖನೌ: ಉತ್ತರ ಪ್ರದೇಶದ ಅಲಿಗಂಜ್‌ನಲ್ಲಿರುವ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡವೊಂದರಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದ್ದು, ಕನಿಷ್ಠ 15 ವಿದ್ಯಾರ್ಥಿಗಳು…

3 hours ago

ಕಾಂಗೋದಲ್ಲಿ ಎಬೋಲಾ ಅಟ್ಟಹಾಸ: 1000 ಗಡಿ ದಾಟಿದ ಸೋಂಕಿತರ ಸಂಖ್ಯೆ

ಕೀನ್ಯಾ: ಕಾಂಗೋದಲ್ಲಿ ಎಬೋಲಾ ವೈರಸ್‌ನ ಅಟ್ಟಹಾಸ ಮುಂದುವರಿದಿದ್ದು, ದೇಶದಲ್ಲಿ ದೃಢಪಟ್ಟ ಒಟ್ಟು ಪ್ರಕರಣಗಳ ಸಂಖ್ಯೆ 1003ಕ್ಕೆ ಏರಿಕೆಯಾಗಿದೆ ಎಂದು ಸರ್ಕಾರ…

5 hours ago

ಗಾಣಾಳು ಜಲಪಾತದಲ್ಲಿ ಈಜಲು ಹೋದ ಯುವಕ ಸಾವು

ಹಲಗೂರು: ಇಲ್ಲಿಗೆ ಸಮೀಪದ ಗಾಣಾಳು ಜಲಪಾತದಲ್ಲಿ ಈಜಲು ಇಳಿದಿದ್ದ ಯುವಕನೊಬ್ಬ ನೀರಿನಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ.…

5 hours ago

ರಾಜ್ಯದಲ್ಲಿ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

6 hours ago

ಶೀಘ್ರದಲ್ಲೇ ಬಸ್‌ ಪ್ರಯಾಣ ದರ ಹೆಚ್ಚಳ?

ಬೆಂಗಳೂರು: ದಿನದಿಂದ ದಿನಕ್ಕೆ ಸಾರಿಗೆ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಾರಣ ಶೀಘ್ರದಲ್ಲೇ ರಾಜ್ಯ ಸರ್ಕಾರ ಬಸ್ ಪ್ರಯಾಣ…

6 hours ago

ಎರಡೇ ವರ್ಷಕ್ಕೆ ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌ ರಾಜೀನಾಮೆ

ಲಂಡನ್:‌ ನಿರೀಕ್ಷೆಯಂತೆ ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆಡಳಿತಾರೂಢ ಲೇಬರ್‌ ಪಕ್ಷದೊಳಗೆ…

7 hours ago