ಮನರಂಜನೆ

‘ನಿದ್ರಾದೇವಿ ಬಾ…’ ಎಂದು ಹಾಡಿ ಮಗನನ್ನು ಮಲಗಿಸಿದ ಸುಧಾರಾಣಿ …

ಕನ್ನಡದಲ್ಲಿ ತಾಯಿ-ಮಗನ ಬಾಂಧವ್ಯ ಸಾರುವ ಹಲವು ಹಾಡುಗಳು ಬಂದಿವೆ. ಈ ಸಾಲಿಗೆ ಇದೀಗ ‘ನಿದ್ರಾದೇವಿ Next Door’ ಚಿತ್ರದ ‘ನಿದ್ರಾದೇವಿ ಬಾ …’ ಎಂಬ ಹಾಡು ಸಹ ಸೇರಿಕೊಂಡಿದೆ.

ಸುರಮ್ ಮೂವೀಸ್ ಲಾಂಛನದಲ್ಲಿ ಜಯರಾಮ ದೇವಸಮುದ್ರ ನಿರ್ಮಿಸಿರುವ, ಸುರಾಗ್ ನಿರ್ದೇಶನದ ‘ನಿದ್ರಾದೇವಿ next door’ ಚಿತ್ರವು ಸೆಪ್ಟೆಂಬರ್‍ 12ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಪ್ರವೀರ್ ಹಾಗೂ ರಿಷಿಕಾ ನಾಯಕ – ನಾಯಕಿಯಾಗಿ ನಟಿಸಿರುವ ಈ ಚಿತ್ರಕ್ಕಾಗಿ ಪವನ್ ಭಟ್ ಬರೆದಿರುವ ‘ನಿದ್ರಾದೇವಿ ಬಾ …’ ಎಂಬ ಶೀರ್ಷಿಕೆ ಗೀತೆ ಇತ್ತೀಚೆಗೆ ಬಿಡುಗಡೆಯಾಯಿತು. ನಕುಲ ಅಭಯಂಕರ್ ಸಂಗೀತ ನೀಡಿರುವ ಈ ಹಾಡನ್ನು ಶ್ರೀಲಕ್ಷ್ಮೀ ಬೆಳ್ಮಣ್ಣು ಹಾಡಿದ್ದಾರೆ. ತಾಯಿ – ಮಗನ ಬಾಂಧವ್ಯದ ಈ ಹಾಡಿನಲ್ಲಿ ಹಿರಿಯ ನಟಿ ಸುಧಾರಾಣಿ ಹಾಗೂ ಮಾಸ್ಟರ್ ಸುಜಯ್ ಅಭಿನಯಿಸಿದ್ದಾರೆ.

‘ನಿದ್ರಾದೇವಿ Next Door’ ಚಿತ್ರಕ್ಕೆ ವಿಷ್ಣುವರ್ಧನ್‍ ಅಭಿನಯದ ಜನಪ್ರಿಯ ‘ಜೋ ಜೋ ಲಾಲಿ …’ ಬರುವ ‘ನಿದ್ರಾದೇವಿ ಬಾ …’ ಎಂಬ ಪದಗಳು ಸ್ಫೂರ್ತಿಯಂತೆ. ಈ ಚಿತ್ರದ ಕುರಿತು ಮಾತನಾಡುವ ನಿರ್ದೇಶಕ ಸುರಾಗ್, ‘ಸಾಮಾನ್ಯವಾಗಿ ತಂದೆಗೆ ಮಗಳ ಮೇಲೆ, ತಾಯಿಗೆ ಮಗನ ಮೇಲೆ ಪ್ರೀತಿ ಜಾಸ್ತಿ ‌ಎಂಬುವುದು ವಾಡಿಕೆ. ನಮ್ಮ ಚಿತ್ರದಲ್ಲಿ ತಾಯಿ – ಮಗನ ಬಾಂಧವ್ಯ ಸಾರುವ ಹಾಡಿದೆ. ಈ ಹಾಡಿಗೆ ವಿಷ್ಣುವರ್ಧನ್‍ ಅವರ ಚಿತ್ರದ ಹಾಡುಗಳು ಸ್ಫೂರ್ತಿ’ ಎಂದರು.

ಸುಧಾರಾಣಿ ಮಾತನಾಡಿ, ‘ನಿರ್ದೇಶಕ ಸುರಾಗ್ ಅವರು ಈ ಚಿತ್ರದ ಕಥೆ ಹೇಳಿದಾಗ ಪಾತ್ರ ಇಷ್ಟವಾಯಿತು. ಕೆಲವರು ಕಥೆ ಹೇಳಬೇಕಾದರೆ ಆ ಪಾತ್ರ ಒಂದು ರೀತಿ ಇರುತ್ತದೆ, ತೆರೆಯ ಮೇಲೆ ಬಂದಾಗ ಬೇರೆ ರೀತಿಯೇ ಇರುತ್ತದೆ. ಆದರೆ, ಸುರಾಗ್ ಅವರು ಕಥೆ ಹೇಳಿದ ಹಾಗೆಯೇ ಪಾತ್ರವನ್ನು ತೆರೆಯ ಮೇಲೆ ತಂದಿದ್ದಾರೆ. ತಾಯಿ – ಮಗನ ಬಾಂಧವ್ಯದ ಹಾಡು ತುಂಬಾ ಚೆನ್ನಾಗಿದೆ. ಚಿತ್ರ ಭರ್ಜರಿ ಯಶಸ್ಸು ಕಾಣಲಿ’ ಎಂದು ಹಾರೈಸಿದರು.

‘ನಿದ್ರಾದೇವಿ next door’ ಚಿತ್ರದಲ್ಲಿ ‘ಬಿಗ್ ಬಾಸ್’ ಖ್ಯಾತಿಯ ಶೈನ್ ಶೆಟ್ಟಿ, ಶ್ರುತಿ ಹರಿಹರನ್, ಹಿರಿಯ ನಟ ಕೆ.ಎಸ್.ಶ್ರೀಧರ್, ಸುಧಾರಾಣಿ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಾಂದಲಪಟ್ಟಿಯಲ್ಲಿ ಮುಂದುವರಿದ ರಸ್ತೆ ದುರಸ್ತಿ ಕಾರ್ಯ

ಬೃಹತ್ ಯಂತ್ರ ಬಳಸದೆ ಕೆಲಸ; ಇನ್ನೂ 10-15 ದಿನ ಪ್ರವಾಸಿಗರ ಪ್ರವೇಶಕ್ಕಿಲ್ಲ ಅವಕಾಶ ನವೀನ್ ಡಿಸೋಜ ಮಡಿಕೇರಿ : ಕೊಡಗಿನ…

8 mins ago

ಜಿಲ್ಲೆಯಲ್ಲಿ ಜಾನುವಾರುಗಳ ಮೇವು-ನೀರಿಗಿಲ್ಲ ಬರ!

ಮುಂದಿನ 34 ವಾರಗಳಿಗೆ ಆಗುವಷ್ಟು ಮೇವು ದಾಸ್ತಾನು; ಸದ್ಯಕ್ಕೆ ಕುಡಿಯುವ ನೀರಿನ ಸಮಸ್ಯೆಯೂ ದೂರ ಕೆ.ಬಿ.ರಮೇಶ ನಾಯಕ ಮೈಸೂರು :…

27 mins ago

ಆರ್.ಟಿ.ವಿಠಲಮೂರ್ತಿ ಅವರ ಬೆಂಗಳೂರು ಡೈರಿ ; ಸಂಪುಟ ಪುನರಚನೆಗೆ ಸಜ್ಜಾದ ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟ ಪುನರಚನೆಗೆ ತಯಾರಿ ಆರಂಭಿಸಿದ್ದಾರೆ. ಬಜೆಟ್ ಅಧಿವೇಶನ ಮುಗಿದ ನಂತರ ದಿಲ್ಲಿಗೆ ತೆರಳಲಿರುವ ಸಿದ್ದರಾಮಯ್ಯ ಅವರು ಕಾಂಗ್ರೆಸ್…

41 mins ago

ಮಾಗುಡಿಲು ಗ್ರಾಮಕ್ಕೆ ಸಂಜೆಯ ನಂತರ ಬಸ್‌ ಇಲ್ಲದೆ ತೊಂದರೆ

ಸರಗೂರು ಕಡೆಯಿಂದ ಗ್ರಾಮಕ್ಕೆ ಸೇತುವೆ ನಿರ್ಮಿಸುವಂತೆ ಗ್ರಾಮಸ್ಥರ ಆಗ್ರಹ ದಾಸೇಗೌಡ ಸರಗೂರು : ತಾಲ್ಲೂಕಿನ ಮಾಗುಡಿಲು ಗ್ರಾಮದಲ್ಲಿ ಪ್ರತಿದಿನ ಕೆಎಸ್ಆರ್‌ಟಿಸಿ…

1 hour ago

ಬಾವಿ ನೀರಿಗಾಗಿ ಅನಸೂಯ ಅವಿಸ್ಮರಣೀಯ ಹೋರಾಟ

ಆನಂದ್ ತೇಲ್ತುಂಬ್ಡೆ ಅಮ್ಮನೂ ಹೋರಾಟಗಾರರು! ವಿ.ಎಲ್.ನರಸಿಂಹಮೂರ್ತಿ ಹೆಸರಾಂತ ಚಿಂತಕ, ಮಾನವ ಮಾನವ ಹಕ್ಕುಗಳ 'ಹೋರಾಟ ಗಾರ ಡಾ.ಆನಂದ್ ತೇಲ್ತುಂಬ್ಡೆಯವರ ತಾಯಿ…

3 hours ago

ಆಂದೋಲನ ಸಂಪಾದಕೀಯ | ರೈಲ್ವೆ ಇಲಾಖೆಗೆ ಕನ್ನಡ, ಕನ್ನಡಿಗರ ಬಗ್ಗೆ ತಾತ್ಸಾರ ಸಲ್ಲದು

ರೈಲ್ವೆ ಇಲಾಖೆಯಲ್ಲಿ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ ಎಂಬುದು ಇಂದು ನಿನ್ನೆಯ ಆರೋಪವಲ್ಲ. ಮೊದಲಿನಿಂದಲೂ ಈ ಆರೋಪ ಇದೆ. ರೈಲ್ವೆಯಲ್ಲಿ ಸ್ಥಳೀಯರಿಗೆ ಉದ್ಯೋಗದಲ್ಲಿ…

3 hours ago