ಮನರಂಜನೆ

‘ನಿದ್ರಾದೇವಿ ಬಾ…’ ಎಂದು ಹಾಡಿ ಮಗನನ್ನು ಮಲಗಿಸಿದ ಸುಧಾರಾಣಿ …

ಕನ್ನಡದಲ್ಲಿ ತಾಯಿ-ಮಗನ ಬಾಂಧವ್ಯ ಸಾರುವ ಹಲವು ಹಾಡುಗಳು ಬಂದಿವೆ. ಈ ಸಾಲಿಗೆ ಇದೀಗ ‘ನಿದ್ರಾದೇವಿ Next Door’ ಚಿತ್ರದ ‘ನಿದ್ರಾದೇವಿ ಬಾ …’ ಎಂಬ ಹಾಡು ಸಹ ಸೇರಿಕೊಂಡಿದೆ.

ಸುರಮ್ ಮೂವೀಸ್ ಲಾಂಛನದಲ್ಲಿ ಜಯರಾಮ ದೇವಸಮುದ್ರ ನಿರ್ಮಿಸಿರುವ, ಸುರಾಗ್ ನಿರ್ದೇಶನದ ‘ನಿದ್ರಾದೇವಿ next door’ ಚಿತ್ರವು ಸೆಪ್ಟೆಂಬರ್‍ 12ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಪ್ರವೀರ್ ಹಾಗೂ ರಿಷಿಕಾ ನಾಯಕ – ನಾಯಕಿಯಾಗಿ ನಟಿಸಿರುವ ಈ ಚಿತ್ರಕ್ಕಾಗಿ ಪವನ್ ಭಟ್ ಬರೆದಿರುವ ‘ನಿದ್ರಾದೇವಿ ಬಾ …’ ಎಂಬ ಶೀರ್ಷಿಕೆ ಗೀತೆ ಇತ್ತೀಚೆಗೆ ಬಿಡುಗಡೆಯಾಯಿತು. ನಕುಲ ಅಭಯಂಕರ್ ಸಂಗೀತ ನೀಡಿರುವ ಈ ಹಾಡನ್ನು ಶ್ರೀಲಕ್ಷ್ಮೀ ಬೆಳ್ಮಣ್ಣು ಹಾಡಿದ್ದಾರೆ. ತಾಯಿ – ಮಗನ ಬಾಂಧವ್ಯದ ಈ ಹಾಡಿನಲ್ಲಿ ಹಿರಿಯ ನಟಿ ಸುಧಾರಾಣಿ ಹಾಗೂ ಮಾಸ್ಟರ್ ಸುಜಯ್ ಅಭಿನಯಿಸಿದ್ದಾರೆ.

‘ನಿದ್ರಾದೇವಿ Next Door’ ಚಿತ್ರಕ್ಕೆ ವಿಷ್ಣುವರ್ಧನ್‍ ಅಭಿನಯದ ಜನಪ್ರಿಯ ‘ಜೋ ಜೋ ಲಾಲಿ …’ ಬರುವ ‘ನಿದ್ರಾದೇವಿ ಬಾ …’ ಎಂಬ ಪದಗಳು ಸ್ಫೂರ್ತಿಯಂತೆ. ಈ ಚಿತ್ರದ ಕುರಿತು ಮಾತನಾಡುವ ನಿರ್ದೇಶಕ ಸುರಾಗ್, ‘ಸಾಮಾನ್ಯವಾಗಿ ತಂದೆಗೆ ಮಗಳ ಮೇಲೆ, ತಾಯಿಗೆ ಮಗನ ಮೇಲೆ ಪ್ರೀತಿ ಜಾಸ್ತಿ ‌ಎಂಬುವುದು ವಾಡಿಕೆ. ನಮ್ಮ ಚಿತ್ರದಲ್ಲಿ ತಾಯಿ – ಮಗನ ಬಾಂಧವ್ಯ ಸಾರುವ ಹಾಡಿದೆ. ಈ ಹಾಡಿಗೆ ವಿಷ್ಣುವರ್ಧನ್‍ ಅವರ ಚಿತ್ರದ ಹಾಡುಗಳು ಸ್ಫೂರ್ತಿ’ ಎಂದರು.

ಸುಧಾರಾಣಿ ಮಾತನಾಡಿ, ‘ನಿರ್ದೇಶಕ ಸುರಾಗ್ ಅವರು ಈ ಚಿತ್ರದ ಕಥೆ ಹೇಳಿದಾಗ ಪಾತ್ರ ಇಷ್ಟವಾಯಿತು. ಕೆಲವರು ಕಥೆ ಹೇಳಬೇಕಾದರೆ ಆ ಪಾತ್ರ ಒಂದು ರೀತಿ ಇರುತ್ತದೆ, ತೆರೆಯ ಮೇಲೆ ಬಂದಾಗ ಬೇರೆ ರೀತಿಯೇ ಇರುತ್ತದೆ. ಆದರೆ, ಸುರಾಗ್ ಅವರು ಕಥೆ ಹೇಳಿದ ಹಾಗೆಯೇ ಪಾತ್ರವನ್ನು ತೆರೆಯ ಮೇಲೆ ತಂದಿದ್ದಾರೆ. ತಾಯಿ – ಮಗನ ಬಾಂಧವ್ಯದ ಹಾಡು ತುಂಬಾ ಚೆನ್ನಾಗಿದೆ. ಚಿತ್ರ ಭರ್ಜರಿ ಯಶಸ್ಸು ಕಾಣಲಿ’ ಎಂದು ಹಾರೈಸಿದರು.

‘ನಿದ್ರಾದೇವಿ next door’ ಚಿತ್ರದಲ್ಲಿ ‘ಬಿಗ್ ಬಾಸ್’ ಖ್ಯಾತಿಯ ಶೈನ್ ಶೆಟ್ಟಿ, ಶ್ರುತಿ ಹರಿಹರನ್, ಹಿರಿಯ ನಟ ಕೆ.ಎಸ್.ಶ್ರೀಧರ್, ಸುಧಾರಾಣಿ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ನೈಜ ಕೃಷಿಗೆ ಪ್ರೋತ್ಸಾಹ : ಸಚಿವ.ಎನ್.ಚಲುವರಾಯಸ್ವಾಮಿ

ಬೆಂಗಳೂರು : ರಾಜ್ಯದಲ್ಲಿ ಶೇ 75% ರಷ್ಟು ಸಣ್ಣ ಮತ್ತು ಅತೀ ಸಣ್ಣ ರೈತರಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು…

24 mins ago

ಮಹದೇಶ್ವರ ಬೆಟ್ಟ | ಪಾದಾಯಾತ್ರೆಗೆ ತಾತ್ಕಲಿಕ ನಿರ್ಬಂಧ

ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಾಯಾತ್ರೆ ತೆರಳುವುದಕ್ಕೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಈ ನಿರ್ಬಂಧ…

52 mins ago

ಮುಡುಕುತೊರೆ ಜಾತ್ರೆ : ಪೋಸ್ಟರ್ ಬಿಡುಗಡೆಗೊಳಿಸಿದ ಸಚಿವ ಎಚ್‌ಸಿಎಂ

ಮೈಸೂರು : ಮುಡುಕುತೊರೆ ಭ್ರಮರಾಂಬ ಸಮೇತ ಶ್ರೀ ಮಲ್ಲಿಕಾರ್ಜುನಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಧಾರ್ಮಿಕ ಮತ್ತು ದತ್ತಿ ಇಲಾಖೆ ಹಾಗೂ…

1 hour ago

ಗುರಿ ಇಟ್ಟುಕೊಂಡು ನಿರಂತರ ಓದಿ : ಪಿಯುಸಿ ವಿದ್ಯಾರ್ಥಿಗಳಿಗೆ ನಿಶಾಂತ್‌ ಸಲಹೆ

ಹನೂರು : ಪ್ರತಿಯೊಬ್ಬ ವಿದ್ಯಾರ್ಥಿಗೂ ದ್ವಿತೀಯ ಪಿಯುಸಿ ಒಂದು ಪ್ರಮುಖ ಘಟವಾಗಿದ್ದು, ವಿದ್ಯಾರ್ಥಿಗಳು ತಮ್ಮ ಜೀವನವನ್ನು ರೂಪಿಸಿಕೊಳ್ಳುವಲ್ಲಿ ಒಂದು ಗುರಿ…

2 hours ago

ಉತ್ತರ ಪ್ರದೇಶದಲ್ಲಿ ಭಾರತೀಯ ವಾಯುಪಡೆಯ ವಿಮಾನ ಪತನ: ಇಬ್ಬರು ಪೈಲಟ್‌ಗಳು ಬಚಾವ್‌

ಉತ್ತರ ಪ್ರದೇಶ: ಇಲ್ಲಿನ ಪ್ರಯಾಗ್‌ರಾಜ್‌ನಲ್ಲಿ ತರಬೇತಿ ಹಾರಾಟ ನಡೆಸುತ್ತಿದ್ದಾಗ ಭಾರತೀಯ ವಾಯುಪಡೆಯ ಮೈಕ್ರೋಲೈಟ್‌ ವಿಮಾನವೊಂದು ಅಪಘಾತಕ್ಕೀಡಾಗಿದೆ. ವಿಮಾನದಲ್ಲಿದ್ದ ಇಬ್ಬರೂ ಪೈಲಟ್‌ಗಳನ್ನು…

3 hours ago

ನೈಸರ್ಗಿಕ ಕೃಷಿ ಪದ್ಧತಿ ಎಲ್ಲರ ಪಾಲಿಗೆ ಜೀವನೋಪಾಯವಾಗಲಿ: ಡಾ. ಶರಣ ಪ್ರಕಾಶ್‌ ಪಾಟೀಲ್

ಬೆಂಗಳೂರು: ಕರ್ನಾಟಕದಲ್ಲಿ ಜೀವನೋಪಾಯಕ್ಕೆ ಅದರಲ್ಲೂ ಮಹಿಳೆಯರ ಜೀವನೋಪಾಯಕ್ಕೆ ಹೆಚ್ಚು ಆದ್ಯತೆ ನೀಡಲಾಗುತ್ತಿದೆ. ಇದರ ಜೊತೆಗೆ ನೃಸರ್ಗಿಕ ಕೃಷಿ ಪದ್ಧತಿಯ ಬಗ್ಗೆ…

3 hours ago