ಮನರಂಜನೆ

‘ನಿದ್ರಾದೇವಿ ಬಾ…’ ಎಂದು ಹಾಡಿ ಮಗನನ್ನು ಮಲಗಿಸಿದ ಸುಧಾರಾಣಿ …

ಕನ್ನಡದಲ್ಲಿ ತಾಯಿ-ಮಗನ ಬಾಂಧವ್ಯ ಸಾರುವ ಹಲವು ಹಾಡುಗಳು ಬಂದಿವೆ. ಈ ಸಾಲಿಗೆ ಇದೀಗ ‘ನಿದ್ರಾದೇವಿ Next Door’ ಚಿತ್ರದ ‘ನಿದ್ರಾದೇವಿ ಬಾ …’ ಎಂಬ ಹಾಡು ಸಹ ಸೇರಿಕೊಂಡಿದೆ.

ಸುರಮ್ ಮೂವೀಸ್ ಲಾಂಛನದಲ್ಲಿ ಜಯರಾಮ ದೇವಸಮುದ್ರ ನಿರ್ಮಿಸಿರುವ, ಸುರಾಗ್ ನಿರ್ದೇಶನದ ‘ನಿದ್ರಾದೇವಿ next door’ ಚಿತ್ರವು ಸೆಪ್ಟೆಂಬರ್‍ 12ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಪ್ರವೀರ್ ಹಾಗೂ ರಿಷಿಕಾ ನಾಯಕ – ನಾಯಕಿಯಾಗಿ ನಟಿಸಿರುವ ಈ ಚಿತ್ರಕ್ಕಾಗಿ ಪವನ್ ಭಟ್ ಬರೆದಿರುವ ‘ನಿದ್ರಾದೇವಿ ಬಾ …’ ಎಂಬ ಶೀರ್ಷಿಕೆ ಗೀತೆ ಇತ್ತೀಚೆಗೆ ಬಿಡುಗಡೆಯಾಯಿತು. ನಕುಲ ಅಭಯಂಕರ್ ಸಂಗೀತ ನೀಡಿರುವ ಈ ಹಾಡನ್ನು ಶ್ರೀಲಕ್ಷ್ಮೀ ಬೆಳ್ಮಣ್ಣು ಹಾಡಿದ್ದಾರೆ. ತಾಯಿ – ಮಗನ ಬಾಂಧವ್ಯದ ಈ ಹಾಡಿನಲ್ಲಿ ಹಿರಿಯ ನಟಿ ಸುಧಾರಾಣಿ ಹಾಗೂ ಮಾಸ್ಟರ್ ಸುಜಯ್ ಅಭಿನಯಿಸಿದ್ದಾರೆ.

‘ನಿದ್ರಾದೇವಿ Next Door’ ಚಿತ್ರಕ್ಕೆ ವಿಷ್ಣುವರ್ಧನ್‍ ಅಭಿನಯದ ಜನಪ್ರಿಯ ‘ಜೋ ಜೋ ಲಾಲಿ …’ ಬರುವ ‘ನಿದ್ರಾದೇವಿ ಬಾ …’ ಎಂಬ ಪದಗಳು ಸ್ಫೂರ್ತಿಯಂತೆ. ಈ ಚಿತ್ರದ ಕುರಿತು ಮಾತನಾಡುವ ನಿರ್ದೇಶಕ ಸುರಾಗ್, ‘ಸಾಮಾನ್ಯವಾಗಿ ತಂದೆಗೆ ಮಗಳ ಮೇಲೆ, ತಾಯಿಗೆ ಮಗನ ಮೇಲೆ ಪ್ರೀತಿ ಜಾಸ್ತಿ ‌ಎಂಬುವುದು ವಾಡಿಕೆ. ನಮ್ಮ ಚಿತ್ರದಲ್ಲಿ ತಾಯಿ – ಮಗನ ಬಾಂಧವ್ಯ ಸಾರುವ ಹಾಡಿದೆ. ಈ ಹಾಡಿಗೆ ವಿಷ್ಣುವರ್ಧನ್‍ ಅವರ ಚಿತ್ರದ ಹಾಡುಗಳು ಸ್ಫೂರ್ತಿ’ ಎಂದರು.

ಸುಧಾರಾಣಿ ಮಾತನಾಡಿ, ‘ನಿರ್ದೇಶಕ ಸುರಾಗ್ ಅವರು ಈ ಚಿತ್ರದ ಕಥೆ ಹೇಳಿದಾಗ ಪಾತ್ರ ಇಷ್ಟವಾಯಿತು. ಕೆಲವರು ಕಥೆ ಹೇಳಬೇಕಾದರೆ ಆ ಪಾತ್ರ ಒಂದು ರೀತಿ ಇರುತ್ತದೆ, ತೆರೆಯ ಮೇಲೆ ಬಂದಾಗ ಬೇರೆ ರೀತಿಯೇ ಇರುತ್ತದೆ. ಆದರೆ, ಸುರಾಗ್ ಅವರು ಕಥೆ ಹೇಳಿದ ಹಾಗೆಯೇ ಪಾತ್ರವನ್ನು ತೆರೆಯ ಮೇಲೆ ತಂದಿದ್ದಾರೆ. ತಾಯಿ – ಮಗನ ಬಾಂಧವ್ಯದ ಹಾಡು ತುಂಬಾ ಚೆನ್ನಾಗಿದೆ. ಚಿತ್ರ ಭರ್ಜರಿ ಯಶಸ್ಸು ಕಾಣಲಿ’ ಎಂದು ಹಾರೈಸಿದರು.

‘ನಿದ್ರಾದೇವಿ next door’ ಚಿತ್ರದಲ್ಲಿ ‘ಬಿಗ್ ಬಾಸ್’ ಖ್ಯಾತಿಯ ಶೈನ್ ಶೆಟ್ಟಿ, ಶ್ರುತಿ ಹರಿಹರನ್, ಹಿರಿಯ ನಟ ಕೆ.ಎಸ್.ಶ್ರೀಧರ್, ಸುಧಾರಾಣಿ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

13 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

13 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

14 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

15 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

20 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

20 hours ago