ಮಂಡ್ಯ: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ದರ್ಶನ್ ಬಂಧನವಾಗಿ 20 ದಿನಗಳು ಕಳೆದಿದ್ದರೂ ಅವರ ಪರಮಾಪ್ತ, ಮದರ್ ಇಂಡಿಯಾ ಎಂದೇ ಕರೆಯಲ್ಪಡುವ ಸುಮಲತಾ ಅಂಬರೀಶ್ ಈವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಇದು ದರ್ಶನ್ ಅಭಿಮಾನಿಗಳಿಗೆ ನುಂಗಲಾರದ ಬಿಸಿ ತುಪ್ಪವಾಗಿತ್ತು. ಸುಮಲತಾ ನಡೆಗೆ ಪರ ವಿರೋಧಗಳು ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಇದೀಗ ಅವರ ಟ್ವೀಟ್ ಒಂದು ಸಖತ್ ವೈರಲ್ ಆಗಿದೆ.
ಮಾಜಿ ಸಂಸದೆ ಸುಮಲತಾ ಅವರು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಭಗವದ್ಗೀತೆ ಶ್ಲೋಕವೊಂದನ್ನು ತಮ್ಮ ಸ್ಟೋರಿಯಲ್ಲಿ ಹಂಚಿಕೊಂಡಿದ್ದಾರೆ. ಅದರಲ್ಲಿ ” ಉತ್ತಮ ಸಮಯಗಳು ಬರುವ ಮುನ್ನ ಸಾಕಷ್ಟು ಕಷ್ಟಗಳು ಬರುತ್ತವೆ. ಆದರೆ ನಾವು ನಂಬಿಕೆಯನ್ನು ಕಳೆದುಕೊಳ್ಳಬಾರದು ಎಂದು ಪೋಸ್ಟ್ ಮಾಡಿದ್ದಾರೆ.
ದರ್ಶನ್ ಸುಮಲತಾರ ಎಲ್ಲಾ ಸಮಯದಲ್ಲೂ ಜತೆಯಾಗಿ ಕೆಲಸ ನಿರ್ವಹಿಸಿದ್ದಾರೆ. ಸುಮಲತಾ ಅವರನ್ನು ಮದರ್ ಇಂಡಿಯಾ ಎಂದೇ ಕೂಗುತ್ತಿದ್ದ ನಟ, ಮಂಡ್ಯ ಲೋಕ ಚುನಾವಣೆಯಲ್ಲಿ ಹೆಚ್ಚಾಗಿ ಗುರುತಿಸಿಕೊಂಡಿದ್ದರು. ಇತ್ತ ಸುಮಲತಾ ಕೂಡಾ ದರ್ಶನ್ರನ್ನು ತಮ್ಮ ಮೊದಲ ಮಗ ಎಂದೇ ಕರೆಯುತ್ತಿದ್ದರು.
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…