ಮಂಡ್ಯ: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ದರ್ಶನ್ ಬಂಧನವಾಗಿ 20 ದಿನಗಳು ಕಳೆದಿದ್ದರೂ ಅವರ ಪರಮಾಪ್ತ, ಮದರ್ ಇಂಡಿಯಾ ಎಂದೇ ಕರೆಯಲ್ಪಡುವ ಸುಮಲತಾ ಅಂಬರೀಶ್ ಈವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಇದು ದರ್ಶನ್ ಅಭಿಮಾನಿಗಳಿಗೆ ನುಂಗಲಾರದ ಬಿಸಿ ತುಪ್ಪವಾಗಿತ್ತು. ಸುಮಲತಾ ನಡೆಗೆ ಪರ ವಿರೋಧಗಳು ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಇದೀಗ ಅವರ ಟ್ವೀಟ್ ಒಂದು ಸಖತ್ ವೈರಲ್ ಆಗಿದೆ.
ಮಾಜಿ ಸಂಸದೆ ಸುಮಲತಾ ಅವರು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಭಗವದ್ಗೀತೆ ಶ್ಲೋಕವೊಂದನ್ನು ತಮ್ಮ ಸ್ಟೋರಿಯಲ್ಲಿ ಹಂಚಿಕೊಂಡಿದ್ದಾರೆ. ಅದರಲ್ಲಿ ” ಉತ್ತಮ ಸಮಯಗಳು ಬರುವ ಮುನ್ನ ಸಾಕಷ್ಟು ಕಷ್ಟಗಳು ಬರುತ್ತವೆ. ಆದರೆ ನಾವು ನಂಬಿಕೆಯನ್ನು ಕಳೆದುಕೊಳ್ಳಬಾರದು ಎಂದು ಪೋಸ್ಟ್ ಮಾಡಿದ್ದಾರೆ.
ದರ್ಶನ್ ಸುಮಲತಾರ ಎಲ್ಲಾ ಸಮಯದಲ್ಲೂ ಜತೆಯಾಗಿ ಕೆಲಸ ನಿರ್ವಹಿಸಿದ್ದಾರೆ. ಸುಮಲತಾ ಅವರನ್ನು ಮದರ್ ಇಂಡಿಯಾ ಎಂದೇ ಕೂಗುತ್ತಿದ್ದ ನಟ, ಮಂಡ್ಯ ಲೋಕ ಚುನಾವಣೆಯಲ್ಲಿ ಹೆಚ್ಚಾಗಿ ಗುರುತಿಸಿಕೊಂಡಿದ್ದರು. ಇತ್ತ ಸುಮಲತಾ ಕೂಡಾ ದರ್ಶನ್ರನ್ನು ತಮ್ಮ ಮೊದಲ ಮಗ ಎಂದೇ ಕರೆಯುತ್ತಿದ್ದರು.
ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…
ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…
ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…
ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…
ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…