ಮನರಂಜನೆ

ಚೆರ್ರಿ’ ಅಲ್ಲ ‘ಚೇಸರ್‍’: ಹೊಸ ಚಿತ್ರದೊಂದಿಗೆ ಬಂದ ಸುಮಂತ್‍ ಶೈಲೇಂದ್ರ

‘ಗೋವಿಂದ ಗೋವಿಂದ’ ನಂತರ ಸುಮಂತ್‍ ಶೈಲೇಂದ್ರ ಅಭಿನಯದ ಯಾವೊಂದು ಚಿತ್ರವೂ ಬಿಡುಗಡೆಯಾಗಿರಲಿಲ್ಲ. ಈಗ ಮೂರು ವರ್ಷಗಳ ನಂತರ ಸುಮಂತ್‍ ಹೊಸ ಚಿತ್ರದೊಂದಿಗೆ ಬಂದಿದ್ದಾರೆ. ಅದೇ ‘ಚೇಸರ್‍’.

ಈ ತರಹದ ಯಾವ ಚಿತ್ರದಲ್ಲೂ ಸುಮಂತ್‍ ನಟಿಸುತ್ತಿರುವ ಸುದ್ದಿ ಇರಲಿಲ್ಲವಲ್ಲ ಎಂದು ಕೆಲವರಿಗೆ ಆಶ್ಚರ್ಯವಾಗಬಹುದು. ಕೆಲವು ವರ್ಷಗಳ ಹಿಂದೆ ಪ್ರಾರಂಭವಾದ ಸುಮಂತ್‍ ಅಭಿನಯದ ಚಿತ್ರವು, ಇದೀಗ ‘ಚೇಸರ್‍’ ಹೆಸರಿನಲ್ಲಿ ಬಿಡುಗಡೆಯಾಗುತ್ತಿದೆ. ಚಿತ್ರವು ಸದ್ಯದಲ್ಲೇ ಬಿಡುಗಡೆಯಾಗುತ್ತಿದ್ದು, ಅದಕ್ಕೂ ಮೊದಲು ಇತ್ತೀಚೆಗೆ ಚಿತ್ರದ ಟೀಸರ್‍ ಬಿಡುಗಡೆಯಾಗಿದೆ. ಧ್ರುವ ಸರ್ಜಾ ಟೀಸರ್‍ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

ಈ ಚಿತ್ರವನ್ನು ಉಪೇಂದ್ರ ಅಭಿನಯದ ‘ಬುದ್ದಿವಂತ ೨’ ಚಿತ್ರದ ಖ್ಯಾತಿಯ ಎಂ. ಜಯ್ಯರಾಮಃ ಕಥೆ ಬರೆದು ನಿರ್ದೇಶನ ಮಾಡಿದ್ದಾರೆ.‌ ‘ನನ್ನ ಸ್ನೇಹಿತನ ಪ್ರೇಮ ವಿವಾಹಕ್ಕೆ ಸಾಕ್ಷಿ ಹಾಕಲು ಸಬ್ ರಿಜಿಸ್ಟರ್ ಕಚೇರಿಗೆ ಹೋಗಿದಾಗ ಅಲ್ಲಿ ನನಗೆ ಅವರು ಹೇಳಿದ ಕಥೆಯೇ ಈಗ ‘ಚೇಸರ್’ ರೂಪದಲ್ಲಿ ಹೊರಬಂದಿದೆ. ಈ ಕಥೆಯನ್ನು ಮೆಚ್ಚಿ ಸಿನಿಮಾ‌‌ ನಿರ್ಮಾಣ ಮಾಡಿದ‌ ಮಾಲತಿ‌ ಶೇಖರ್ ಅವರಿಗೆ ಹಾಗೂ ಚಿತ್ರ‌ ಉತ್ತಮವಾಗಿ ಬರಲು ಸಹಕಾರ ನೀಡಿದ ಇಡೀ ತಂಡಕ್ಕೆ ಧನ್ಯವಾದ’ ಎಂದರು.

ಸುಮಂತ್‍ ಶೈಲೇಂದ್ರ ಮಾತನಾಡಿ, ‘ಮೂರು ವರ್ಷಗಳ ನಂತರ ನನ್ನ ಅಭಿನಯದ ಚಿತ್ರ ತೆರೆಗೆ ಬರಲು ಸಜ್ಜಾಗುತ್ತಿದೆ. ‘ಚೇಸರ್’ ಅಂದ ಕೂಡಲೇ ಬರೀ ಚೇಸಿಂಗ್ ಮಾತ್ರ ಇಲ್ಲ. ನೋಡುಗನಿಗೆ ಬೇಕಾದ ಎಲ್ಲಾ ಅಂಶಗಳು ನಮ್ಮ ಚಿತ್ರದಲ್ಲಿದೆ’ ಎಂದು ನಾಯಕ ಸುಮಂತ್ ಶೈಲೇಂದ್ರ ತಿಳಿಸಿದರು.

‘ಚೇಸರ್‍’ ಚಿತ್ರವನ್ನು ಮಾಲತಿ ಶೇಖರ್ ಶಿವಮೊಗ್ಗ ನಿರ್ಮಿಸುತ್ತಿದ್ದು, ಸುಮಂತ್ ಶೈಲೇಂದ್ರಗೆ ನಾಯಕಿಯಾಗಿ ರಕ್ಷ ಮೆನನ್ ನಟಿಸಿದ್ದಾರೆ. ಮಿಕ್ಕಂತೆ ರವಿಶಂಕರ್, ರಂಗಾಯಣ ರಘು, ಸಾಧು ಕೋಕಿಲ, ಚಿಕ್ಕಣ್ಣ, ಕುರಿ ಪ್ರತಾಪ್, ಸುಚೇಂದ್ರ ಪ್ರಸಾದ್, ‘ಕಡಿಪುಡಿ’ ಚಂದ್ರು ಮುಂತಾದವರು ನಟಿಸಿದ್ದಾರೆ. ‘ಚೇಸರ್‍’ ಚಿತ್ರಕ್ಕೆ ಕೆ.ಎಸ್‍. ಚಂದ್ರಶೇಖರ್‍ ಛಾಯಾಗ್ರಹಣ, ಅರ್ಜುನ್‍ ಜನ್ಯ ಸಂಗೀತವಿದೆ.

ಆಂದೋಲನ ಡೆಸ್ಕ್

Recent Posts

ಚಿನ್ನ ಕಳ್ಳ ಸಾಗಾಣಿಕೆ ಪತ್ತೆ : 2.89 ಕೋಟಿ ರೂ. ಮೌಲ್ಯದ ಚಿನ್ನ ವಶ

ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್‌ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್‌ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…

10 mins ago

ಗಣರಾಜ್ಯೋತ್ಸವ : ಕರ್ನಾಟಕದ ಸ್ತಬ್ಧಚಿತ್ರಕ್ಕಿಲ್ಲ ಅವಕಾಶ

ಭುಗಿಲೆದ್ದ ಆಕ್ರೋಶ; ಬಿಜೆಪಿ -ಕಾಂಗ್ರೆಸ್ ಆರೋಪ-ಪ್ರತ್ಯಾರೋಪ ಬೆಂಗಳೂರು : ದೇಶದ 77ನೇ ಗಣರಾಜ್ಯೋತ್ಸವ ಸಂಭ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ. ಆದರೆ, ಈ…

19 mins ago

ಮೈಷುಗರ್ ಕಾರ್ಖಾನೆ ಖಾಸಗಿಯವರಿಗೆ ವಹಿಸಲ್ಲ : ಸಿ.ಡಿ.ಗಂಗಾಧರ ಸ್ಪಷ್ಟನೆ

ಮಂಡ್ಯ : ಮೈಷುಗರ್ ಕಾರ್ಖಾನೆಯನ್ನು ಯಾವುದೇ ಕಾರಣಕ್ಕೂ ಖಾಸಗಿಯವರಿಗೆ ವಹಿಸುವ ಪ್ರಶ್ನೆಯೇ ಇಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ…

27 mins ago

ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಸ್ಥಗಿತ : ಕಾರಣ ಬಿಚ್ಚಿಟ್ಟ ಸಂಸದ ಯದುವೀರ್‌

ಮೈಸೂರು : ಮೈಸೂರು-ಕುಶಾಲನಗರ ರೈಲ್ವೆ ಯೋಜನೆ ಸ್ಥಗಿತವಾಗಿದೆ, ಯೋಜನೆಗೆ ಅಗತ್ಯವಿರುವ ಭೂಮಿಯನ್ನು ರಾಜ್ಯ ಸರ್ಕಾರ ಹಸ್ತಾಂತರ ಮಾಡಿಲ್ಲ. ಈ ಬಗ್ಗೆ…

44 mins ago

ಶಾರ್ಟ್‌ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಟಿವಿ ; ದಾಖಲಾತಿಗಳು ಭಸ್ಮ

ಹನೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಟಿವಿ ಸೇರಿದಂತೆ ಅತ್ಯಮೂಲ್ಯ ದಾಖಲಾತಿಗಳು ಸುಟ್ಟು ಕರಕಲಾದ ಘಟನೆ ಹನೂರು ತಾಲೂಕಿನ ಬಂಡಳ್ಳಿಯಲ್ಲಿ…

1 hour ago

ಹನೂರು| ರಾಜ್ಯ ಸರ್ಕಾರದ ವಿರುದ್ಧ ಅಂಡೆ ಕುರುಬನದೊಡ್ಡಿ ಗ್ರಾಮಸ್ಥರಿಂದ ಪ್ರತಿಭಟನೆ

ಮಹಾದೇಶ್‌ ಎಂ ಗೌಡ  ಹನೂರು: ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಂಡೆ ಕುರುಬನ ದೊಡ್ಡಿ ಗ್ರಾಮದ ಡಾಂಬರು ರಸ್ತೆ ಅಭಿವೃದ್ಧಿಗೆ…

2 hours ago