‘ಗೋವಿಂದ ಗೋವಿಂದ’ ನಂತರ ಸುಮಂತ್ ಶೈಲೇಂದ್ರ ಅಭಿನಯದ ಯಾವೊಂದು ಚಿತ್ರವೂ ಬಿಡುಗಡೆಯಾಗಿರಲಿಲ್ಲ. ಈಗ ಮೂರು ವರ್ಷಗಳ ನಂತರ ಸುಮಂತ್ ಹೊಸ ಚಿತ್ರದೊಂದಿಗೆ ಬಂದಿದ್ದಾರೆ. ಅದೇ ‘ಚೇಸರ್’.
ಈ ತರಹದ ಯಾವ ಚಿತ್ರದಲ್ಲೂ ಸುಮಂತ್ ನಟಿಸುತ್ತಿರುವ ಸುದ್ದಿ ಇರಲಿಲ್ಲವಲ್ಲ ಎಂದು ಕೆಲವರಿಗೆ ಆಶ್ಚರ್ಯವಾಗಬಹುದು. ಕೆಲವು ವರ್ಷಗಳ ಹಿಂದೆ ಪ್ರಾರಂಭವಾದ ಸುಮಂತ್ ಅಭಿನಯದ ಚಿತ್ರವು, ಇದೀಗ ‘ಚೇಸರ್’ ಹೆಸರಿನಲ್ಲಿ ಬಿಡುಗಡೆಯಾಗುತ್ತಿದೆ. ಚಿತ್ರವು ಸದ್ಯದಲ್ಲೇ ಬಿಡುಗಡೆಯಾಗುತ್ತಿದ್ದು, ಅದಕ್ಕೂ ಮೊದಲು ಇತ್ತೀಚೆಗೆ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಧ್ರುವ ಸರ್ಜಾ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.
ಈ ಚಿತ್ರವನ್ನು ಉಪೇಂದ್ರ ಅಭಿನಯದ ‘ಬುದ್ದಿವಂತ ೨’ ಚಿತ್ರದ ಖ್ಯಾತಿಯ ಎಂ. ಜಯ್ಯರಾಮಃ ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ‘ನನ್ನ ಸ್ನೇಹಿತನ ಪ್ರೇಮ ವಿವಾಹಕ್ಕೆ ಸಾಕ್ಷಿ ಹಾಕಲು ಸಬ್ ರಿಜಿಸ್ಟರ್ ಕಚೇರಿಗೆ ಹೋಗಿದಾಗ ಅಲ್ಲಿ ನನಗೆ ಅವರು ಹೇಳಿದ ಕಥೆಯೇ ಈಗ ‘ಚೇಸರ್’ ರೂಪದಲ್ಲಿ ಹೊರಬಂದಿದೆ. ಈ ಕಥೆಯನ್ನು ಮೆಚ್ಚಿ ಸಿನಿಮಾ ನಿರ್ಮಾಣ ಮಾಡಿದ ಮಾಲತಿ ಶೇಖರ್ ಅವರಿಗೆ ಹಾಗೂ ಚಿತ್ರ ಉತ್ತಮವಾಗಿ ಬರಲು ಸಹಕಾರ ನೀಡಿದ ಇಡೀ ತಂಡಕ್ಕೆ ಧನ್ಯವಾದ’ ಎಂದರು.
ಸುಮಂತ್ ಶೈಲೇಂದ್ರ ಮಾತನಾಡಿ, ‘ಮೂರು ವರ್ಷಗಳ ನಂತರ ನನ್ನ ಅಭಿನಯದ ಚಿತ್ರ ತೆರೆಗೆ ಬರಲು ಸಜ್ಜಾಗುತ್ತಿದೆ. ‘ಚೇಸರ್’ ಅಂದ ಕೂಡಲೇ ಬರೀ ಚೇಸಿಂಗ್ ಮಾತ್ರ ಇಲ್ಲ. ನೋಡುಗನಿಗೆ ಬೇಕಾದ ಎಲ್ಲಾ ಅಂಶಗಳು ನಮ್ಮ ಚಿತ್ರದಲ್ಲಿದೆ’ ಎಂದು ನಾಯಕ ಸುಮಂತ್ ಶೈಲೇಂದ್ರ ತಿಳಿಸಿದರು.
‘ಚೇಸರ್’ ಚಿತ್ರವನ್ನು ಮಾಲತಿ ಶೇಖರ್ ಶಿವಮೊಗ್ಗ ನಿರ್ಮಿಸುತ್ತಿದ್ದು, ಸುಮಂತ್ ಶೈಲೇಂದ್ರಗೆ ನಾಯಕಿಯಾಗಿ ರಕ್ಷ ಮೆನನ್ ನಟಿಸಿದ್ದಾರೆ. ಮಿಕ್ಕಂತೆ ರವಿಶಂಕರ್, ರಂಗಾಯಣ ರಘು, ಸಾಧು ಕೋಕಿಲ, ಚಿಕ್ಕಣ್ಣ, ಕುರಿ ಪ್ರತಾಪ್, ಸುಚೇಂದ್ರ ಪ್ರಸಾದ್, ‘ಕಡಿಪುಡಿ’ ಚಂದ್ರು ಮುಂತಾದವರು ನಟಿಸಿದ್ದಾರೆ. ‘ಚೇಸರ್’ ಚಿತ್ರಕ್ಕೆ ಕೆ.ಎಸ್. ಚಂದ್ರಶೇಖರ್ ಛಾಯಾಗ್ರಹಣ, ಅರ್ಜುನ್ ಜನ್ಯ ಸಂಗೀತವಿದೆ.
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…
ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…
ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಭಕ್ತರು ನೀಡಿದ ಸಾವಿರಾರು ಕೋಟಿ ರೂಪಾಯಿ ದೇಣಿಗೆ ಹಣ, ಆಭರಣಗಳ ಕಳ್ಳತನ ಪ್ರಕರಣ ರಾಮಭಕ್ತರ ವಿಶ್ವಾಸವನ್ನು…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರಿನ ಶ್ರೀರಾಂಪುರದ ಉದ್ಯಾನದಲ್ಲಿರುವ ಶೌಚಾಲಯದ ದುಸ್ಥಿತಿ ಮೈಸೂರು: ಜನರ ಲಕ್ಷಾಂತರ ರೂ. ತೆರಿಗೆ ಹಣವನ್ನು ವ್ಯಯಿಸಿ ಕಟ್ಟಿಸಿರುವ…