ಮನರಂಜನೆ

ಚೆರ್ರಿ’ ಅಲ್ಲ ‘ಚೇಸರ್‍’: ಹೊಸ ಚಿತ್ರದೊಂದಿಗೆ ಬಂದ ಸುಮಂತ್‍ ಶೈಲೇಂದ್ರ

‘ಗೋವಿಂದ ಗೋವಿಂದ’ ನಂತರ ಸುಮಂತ್‍ ಶೈಲೇಂದ್ರ ಅಭಿನಯದ ಯಾವೊಂದು ಚಿತ್ರವೂ ಬಿಡುಗಡೆಯಾಗಿರಲಿಲ್ಲ. ಈಗ ಮೂರು ವರ್ಷಗಳ ನಂತರ ಸುಮಂತ್‍ ಹೊಸ ಚಿತ್ರದೊಂದಿಗೆ ಬಂದಿದ್ದಾರೆ. ಅದೇ ‘ಚೇಸರ್‍’.

ಈ ತರಹದ ಯಾವ ಚಿತ್ರದಲ್ಲೂ ಸುಮಂತ್‍ ನಟಿಸುತ್ತಿರುವ ಸುದ್ದಿ ಇರಲಿಲ್ಲವಲ್ಲ ಎಂದು ಕೆಲವರಿಗೆ ಆಶ್ಚರ್ಯವಾಗಬಹುದು. ಕೆಲವು ವರ್ಷಗಳ ಹಿಂದೆ ಪ್ರಾರಂಭವಾದ ಸುಮಂತ್‍ ಅಭಿನಯದ ಚಿತ್ರವು, ಇದೀಗ ‘ಚೇಸರ್‍’ ಹೆಸರಿನಲ್ಲಿ ಬಿಡುಗಡೆಯಾಗುತ್ತಿದೆ. ಚಿತ್ರವು ಸದ್ಯದಲ್ಲೇ ಬಿಡುಗಡೆಯಾಗುತ್ತಿದ್ದು, ಅದಕ್ಕೂ ಮೊದಲು ಇತ್ತೀಚೆಗೆ ಚಿತ್ರದ ಟೀಸರ್‍ ಬಿಡುಗಡೆಯಾಗಿದೆ. ಧ್ರುವ ಸರ್ಜಾ ಟೀಸರ್‍ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

ಈ ಚಿತ್ರವನ್ನು ಉಪೇಂದ್ರ ಅಭಿನಯದ ‘ಬುದ್ದಿವಂತ ೨’ ಚಿತ್ರದ ಖ್ಯಾತಿಯ ಎಂ. ಜಯ್ಯರಾಮಃ ಕಥೆ ಬರೆದು ನಿರ್ದೇಶನ ಮಾಡಿದ್ದಾರೆ.‌ ‘ನನ್ನ ಸ್ನೇಹಿತನ ಪ್ರೇಮ ವಿವಾಹಕ್ಕೆ ಸಾಕ್ಷಿ ಹಾಕಲು ಸಬ್ ರಿಜಿಸ್ಟರ್ ಕಚೇರಿಗೆ ಹೋಗಿದಾಗ ಅಲ್ಲಿ ನನಗೆ ಅವರು ಹೇಳಿದ ಕಥೆಯೇ ಈಗ ‘ಚೇಸರ್’ ರೂಪದಲ್ಲಿ ಹೊರಬಂದಿದೆ. ಈ ಕಥೆಯನ್ನು ಮೆಚ್ಚಿ ಸಿನಿಮಾ‌‌ ನಿರ್ಮಾಣ ಮಾಡಿದ‌ ಮಾಲತಿ‌ ಶೇಖರ್ ಅವರಿಗೆ ಹಾಗೂ ಚಿತ್ರ‌ ಉತ್ತಮವಾಗಿ ಬರಲು ಸಹಕಾರ ನೀಡಿದ ಇಡೀ ತಂಡಕ್ಕೆ ಧನ್ಯವಾದ’ ಎಂದರು.

ಸುಮಂತ್‍ ಶೈಲೇಂದ್ರ ಮಾತನಾಡಿ, ‘ಮೂರು ವರ್ಷಗಳ ನಂತರ ನನ್ನ ಅಭಿನಯದ ಚಿತ್ರ ತೆರೆಗೆ ಬರಲು ಸಜ್ಜಾಗುತ್ತಿದೆ. ‘ಚೇಸರ್’ ಅಂದ ಕೂಡಲೇ ಬರೀ ಚೇಸಿಂಗ್ ಮಾತ್ರ ಇಲ್ಲ. ನೋಡುಗನಿಗೆ ಬೇಕಾದ ಎಲ್ಲಾ ಅಂಶಗಳು ನಮ್ಮ ಚಿತ್ರದಲ್ಲಿದೆ’ ಎಂದು ನಾಯಕ ಸುಮಂತ್ ಶೈಲೇಂದ್ರ ತಿಳಿಸಿದರು.

‘ಚೇಸರ್‍’ ಚಿತ್ರವನ್ನು ಮಾಲತಿ ಶೇಖರ್ ಶಿವಮೊಗ್ಗ ನಿರ್ಮಿಸುತ್ತಿದ್ದು, ಸುಮಂತ್ ಶೈಲೇಂದ್ರಗೆ ನಾಯಕಿಯಾಗಿ ರಕ್ಷ ಮೆನನ್ ನಟಿಸಿದ್ದಾರೆ. ಮಿಕ್ಕಂತೆ ರವಿಶಂಕರ್, ರಂಗಾಯಣ ರಘು, ಸಾಧು ಕೋಕಿಲ, ಚಿಕ್ಕಣ್ಣ, ಕುರಿ ಪ್ರತಾಪ್, ಸುಚೇಂದ್ರ ಪ್ರಸಾದ್, ‘ಕಡಿಪುಡಿ’ ಚಂದ್ರು ಮುಂತಾದವರು ನಟಿಸಿದ್ದಾರೆ. ‘ಚೇಸರ್‍’ ಚಿತ್ರಕ್ಕೆ ಕೆ.ಎಸ್‍. ಚಂದ್ರಶೇಖರ್‍ ಛಾಯಾಗ್ರಹಣ, ಅರ್ಜುನ್‍ ಜನ್ಯ ಸಂಗೀತವಿದೆ.

ಆಂದೋಲನ ಡೆಸ್ಕ್

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

3 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

5 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

6 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

6 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

9 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

10 hours ago