ಮನರಂಜನೆ

‘ಕೋರ’ನಾದ ಸುನಾಮಿ ಕಿಟ್ಟಿ; ಮೊದಲು ಕನ್ನಡದಲ್ಲಿ, ನಂತರ ತೆಲುಗು, ತಮಿಳಿನಲ್ಲಿ

ಹೀರೋ ಆಗಬೇಕೆಂಬ ಸುನಾಮಿ ಕಿಟ್ಟಿಯ ಕನಸು ಕೊನೆಗೂ ನಾಳೆ (ಏಪ್ರಿಲ್ 18) ನನಸಾಗುತ್ತಿದೆ. ಸುಮಾರು ಒಂದು ದಶಕದ ಹಿಂದೆಯೇ ಸುನಾಮಿ ಕಿಟ್ಟಿ ಹೀರೋ ಆಗುತ್ತಾರೆ ಎಂಬ ಸುದ್ದಿ ಕೇಳಿ ಬಂದಿತ್ತು. ಒಂದೆರಡು ಪ್ರಯತ್ನಗಳೂ ಆಗಿ, ಈಗ ‘ಕೋರ’ ಮೂಲಕ ಕಿಟ್ಟಿ ಹೀರೋ ಆಗುತ್ತಿದ್ದಾರೆ.

ರತ್ನಮ್ಮ‌ ಮೂವೀಸ್ ಲಾಂಛನದಲ್ಲಿ ಪಿ.ಮೂರ್ತಿ ನಿರ್ಮಿಸಿರುವ, ‘ಒರಟ’ ಶ್ರೀ ನಿರ್ದೇಶನದ ‘ಕೋರ’ ಚಿತ್ರದ ಪ್ರೀ-ರಿಲೀಸ್ ಇವೆಂಟ್ ಇತ್ತೀಚೆಗೆ ನೆರವೇರಿತು. ‘ಒರಟ’ ಪ್ರಶಾಂತ್, ‘ಬಿಗ್ ಬಾಸ್’ ಖ್ಯಾತಿಯ ತನಿಶಾ ಕುಪ್ಪಂಡ, ರಜತ್, ‘ಸಲಗ’ ಸೂರಿ ಮುಂತಾದವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಚಿತ್ರತಂಡಕ್ಕೆ ಶುಭ ಕೋರಿದರು.

ಮೊದಲು ಮಾತನಾಡಿದ ನಿರ್ಮಾಪಕ ಪಿ. ಮೂರ್ತಿ, ‘ಕೊರಗಜ್ಜನ ಆಶೀರ್ವಾದದಿಂದ, ನಮ್ಮ ತಾಯಿಯವರ ಹೆಸರಿನಲ್ಲಿ ರತ್ನಮ್ಮ ಮೂವೀಸ್ ಮೂಲಕ ಈ ಚಿತ್ರವನ್ನು ನಿರ್ಮಾಣ ಮಾಡಿದ್ದೇನೆ. ನಿರ್ದೇಶಕ ಶ್ರೀ ಹಾಗೂ ಇಡೀ ತಂಡದ ಶ್ರಮದಿಂದ ಈ ಚಿತ್ರ ತುಂಬಾ ಚೆನ್ನಾಗಿ ಬಂದಿದೆ. ಫ್ಯಾಮಿಲಿ ಸೆಂಟಿಮೆಂಟ್, ಆಕ್ಷನ್, ಥ್ರಿಲ್ಲರ್ ಹೀಗೆ ಹಲವು ಜಾನರ್ ಚಿತ್ರಗಳು ಸಾಕಷ್ಟು ಬಂದಿದೆ. ಆದರೆ, ನಮ್ಮ ‘ಕೋರ’ ವಿಭಿನ್ನ ಕಥಾಹಂದರ ಹೊಂದಿರುವ ಚಿತ್ರ. ಇದು ಕಾಡಿನಲ್ಲೇ ನಡೆಯುವ ಕಥೆ. ನಾನು ಸಹ ಈ ಚಿತ್ರದ ಪ್ರಮುಖ ಪಾತ್ರದಲ್ಲಿ ನಟಿಸಿದ್ದೇನೆ. ಚಿತ್ರ ಮೊದಲು ಕನ್ನಡದಲ್ಲಿ ಬಿಡುಗಡೆ ಆಗಿ, ನಂತರದ ವಾರಗಳಲ್ಲಿ ತೆಲುಗು ಹಾಗೂ ತಮಿಳು ಭಾಷೆಗಳಲ್ಲೂ ಬಿಡುಗಡೆ ಆಗಲಿದೆ’ ಎಂದರು.

‘ಕೋರ’ ಸುಮಾರು 40 ವರ್ಷಗಳ ಹಿಂದಿನ ಕಾಲಘಟ್ಟದ ಕಥೆಯಂತೆ. ಕಾಡಿನಲ್ಲೇ ಹೆಚ್ಚು ನಡೆಯುವ ಕಥೆಯಂತೆ. ಕಾಡಿನ ಜನ ತಮ್ಮ ಅಸ್ತಿತ್ವಕ್ಕಾಗಿ ಹೋರಾಡುವ ಕಥೆ. ಚಿತ್ರದಲ್ಲಿ ಸುನಾಮಿ ಕಿಟ್ಟಿ ಜೊತೆಗೆ ಚರಿಷ್ಮಾ, ಮುನಿ, ಸೌಜನ್ಯ, ಯತಿರಾಜ್‍, ‘ಕಾಕ್ರೋಚ್‍’ ಸುಧಿ, ಎಂ.ಕೆ.ಮಠ, ನೀನಾಸಂ ಅಶ್ವಥ್ ಮುಂತಾದವರು ನಟಿಸಿದ್ದಾರೆ. ನಿರ್ಮಾಪಕ ಮೂರ್ತಿ ಚಿತ್ರದಲ್ಲಿ ವಿಲನ್‍ ಆಗಿ ಕಾಣಿಸಿಕೊಂಡಿದ್ದಾರೆ.

 

ರಿಯಾಲಿಟಿ ಶೋಗಳಲ್ಲಿ ಭಾಗವಹಿಸುತ್ತಿದ್ದ ನಾನು ಈ ಚಿತ್ರದ ಮೂಲಕ ಹೀರೋ ಆಗಿದ್ದೇನೆ ಎಂದ ಕಿಟ್ಟಿ, ‘ಈ ಚಿತ್ರದ ಮೂಲಕ ನಾಯಕನನ್ನಾಗಿ ಮಾಡಿದ ನಿರ್ಮಾಪಕ ಪಿ.ಮೂರ್ತಿ ಅವರಿಗೆ ಹಾಗೂ ನನಗೆ ಅಭಿನಯ ಹೇಳಿಕೊಟ್ಟು ಚಿತ್ರದಲ್ಲಿ ನಟಿಸಲು ಸಿದ್ದತೆ ಮಾಡಿಸಿದ ನಿರ್ದೇಶಕ ಶ್ರೀ ಅವರಿಗೆ ಧನ್ಯವಾದ. ನಮ್ಮ ತಂಡದ ಶ್ರಮದಿಂದ ‘ಕೋರ’ ಒಂದೊಳ್ಳೆಯ ಚಿತ್ರವಾಗಿ ಬರುತ್ತಿದೆ’ ಎಂದರು.

‘ಕೋರ’ ಚಿತ್ರಕ್ಕೆ ಹೇಮಂತ್ ಕುಮಾರ್ ಸಂಗೀತ, ಸೆಲ್ವಂ ಛಾಯಾಗ್ರಹಣವಿದೆ.

ಆಂದೋಲನ ಡೆಸ್ಕ್

Recent Posts

ಬಿಜೆಪಿ ಶಾಸಕ ಭೈರತಿ ಬಸವರಾಜು ಜೈಲುಪಾಲು: ಫೆ.26ರವರೆಗೆ ನ್ಯಾಯಾಂಗ ಬಂಧನ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್.ಪುರಂ ಕ್ಷೇತ್ರದ ಶಾಸಕ ಭೈರತಿ ಬಸವರಾಜ್‌…

1 hour ago

ವಿಧಾನಸೌಧದಲ್ಲಿ ತುರ್ತು ಪರಿಸ್ಥಿತಿ ಘೋಷಣೆಯಾದಂತಿದೆ: ನಿಖಿಲ್‌ ಕುಮಾರಸ್ವಾಮಿ

ಬೆಂಗಳೂರು: ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

1 hour ago

ಪಂಚ ಗ್ಯಾರಂಟಿಯಿಂದ ಅಭಿವೃದ್ಧಿ ಆಗಿದೆಯೇ?: ತಜ್ಞರಿಂದ ಸಮೀಕ್ಷೆಗೆ ವಿಶ್ವನಾಥ್‌ ಒತ್ತಾಯ

ಮೈಸೂರು: ಪಂಚ ಗ್ಯಾರಂಟಿಗಳನ್ನು ನೀಡಿದ ನಂತರ ರಾಜ್ಯದಲ್ಲಿ ಅಭಿವೃದ್ಧಿ ಆಗಿದೆಯೋ ಇಲ್ಲವೋ ಎಂಬ ಬಗ್ಗೆ ಸಮೀಕ್ಷೆ ನಡೆಸಲು ತಜ್ಞರ ಸಮಿತಿ…

2 hours ago

3.40 ಕೋಟಿ ಹಣ ಎಟಿಎಂಗೆ ಹಾಕದೇ ವಂಚನೆ: ಸಿಎಂಎಸ್‌ ಕಂಪನಿಯ ಇಬ್ಬರ ವಿರುದ್ಧ ಎಫ್‌ಐಆರ್‌

ಹಾಸನ: ಎಟಿಎಂಗೆ ಹಣ ಹಾಕದೇ ವಂಚನೆ ಮಾಡಿದ್ದ ಸಿಎಂಎಸ್‌ ಕಂಪನಿಯ ಇಬ್ಬರು ಸಿಬ್ಬಂದಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಬಡಾವಣೆ ಪೊಲೀಸ್‌…

3 hours ago

ಸ್ನೇಹಮಯಿ ಕೃಷ್ಣ ಬಂಧನದ ಹಿಂದೆ ಸಿಎಂ ಹಾಗೂ ದೊಡ್ಡ ಕೈವಾಡ: ಪ್ರಹ್ಲಾದ್‌ ಜೋಶಿ ಆರೋಪ

ಕಲಬುರ್ಗಿ: ಸಿಸಿಬಿಯಿಂದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಬಂಧನದ ಹಿಂದೆ ಸಿಎಂ ದೊಡ್ಡ ಕೈವಾಡವಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌…

3 hours ago

ಕೋರ್ಟ್‌ ಆದೇಶದ ಬೆನ್ನಲ್ಲೇ ಎಲ್ಲಾ ದೇಶಗಳಿಗೆ ಶೇ.10ರಷ್ಟು ಸುಂಕ ಆದೇಶಕ್ಕೆ ಟ್ರಂಪ್‌ ಸಹಿ

ವಾಷಿಂಗ್ಟನ್:‌ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಎಲ್ಲಾ ದೇಶಗಳ ಆಮದುಗಳ ಮೇಲೆ ತಾತ್ಕಾಲಿಕವಾಗಿ 10% ಸುಂಕವನ್ನು ಘೋಷಿಸಿದ್ದಾರೆ. ಸುಪ್ರೀಂಕೋರ್ಟ್‌ ರದ್ದುಗೊಳಿಸಿದ…

3 hours ago