ಮನರಂಜನೆ

‘ಕೋರ’ನಾದ ಸುನಾಮಿ ಕಿಟ್ಟಿ; ಮೊದಲು ಕನ್ನಡದಲ್ಲಿ, ನಂತರ ತೆಲುಗು, ತಮಿಳಿನಲ್ಲಿ

ಹೀರೋ ಆಗಬೇಕೆಂಬ ಸುನಾಮಿ ಕಿಟ್ಟಿಯ ಕನಸು ಕೊನೆಗೂ ನಾಳೆ (ಏಪ್ರಿಲ್ 18) ನನಸಾಗುತ್ತಿದೆ. ಸುಮಾರು ಒಂದು ದಶಕದ ಹಿಂದೆಯೇ ಸುನಾಮಿ ಕಿಟ್ಟಿ ಹೀರೋ ಆಗುತ್ತಾರೆ ಎಂಬ ಸುದ್ದಿ ಕೇಳಿ ಬಂದಿತ್ತು. ಒಂದೆರಡು ಪ್ರಯತ್ನಗಳೂ ಆಗಿ, ಈಗ ‘ಕೋರ’ ಮೂಲಕ ಕಿಟ್ಟಿ ಹೀರೋ ಆಗುತ್ತಿದ್ದಾರೆ.

ರತ್ನಮ್ಮ‌ ಮೂವೀಸ್ ಲಾಂಛನದಲ್ಲಿ ಪಿ.ಮೂರ್ತಿ ನಿರ್ಮಿಸಿರುವ, ‘ಒರಟ’ ಶ್ರೀ ನಿರ್ದೇಶನದ ‘ಕೋರ’ ಚಿತ್ರದ ಪ್ರೀ-ರಿಲೀಸ್ ಇವೆಂಟ್ ಇತ್ತೀಚೆಗೆ ನೆರವೇರಿತು. ‘ಒರಟ’ ಪ್ರಶಾಂತ್, ‘ಬಿಗ್ ಬಾಸ್’ ಖ್ಯಾತಿಯ ತನಿಶಾ ಕುಪ್ಪಂಡ, ರಜತ್, ‘ಸಲಗ’ ಸೂರಿ ಮುಂತಾದವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಚಿತ್ರತಂಡಕ್ಕೆ ಶುಭ ಕೋರಿದರು.

ಮೊದಲು ಮಾತನಾಡಿದ ನಿರ್ಮಾಪಕ ಪಿ. ಮೂರ್ತಿ, ‘ಕೊರಗಜ್ಜನ ಆಶೀರ್ವಾದದಿಂದ, ನಮ್ಮ ತಾಯಿಯವರ ಹೆಸರಿನಲ್ಲಿ ರತ್ನಮ್ಮ ಮೂವೀಸ್ ಮೂಲಕ ಈ ಚಿತ್ರವನ್ನು ನಿರ್ಮಾಣ ಮಾಡಿದ್ದೇನೆ. ನಿರ್ದೇಶಕ ಶ್ರೀ ಹಾಗೂ ಇಡೀ ತಂಡದ ಶ್ರಮದಿಂದ ಈ ಚಿತ್ರ ತುಂಬಾ ಚೆನ್ನಾಗಿ ಬಂದಿದೆ. ಫ್ಯಾಮಿಲಿ ಸೆಂಟಿಮೆಂಟ್, ಆಕ್ಷನ್, ಥ್ರಿಲ್ಲರ್ ಹೀಗೆ ಹಲವು ಜಾನರ್ ಚಿತ್ರಗಳು ಸಾಕಷ್ಟು ಬಂದಿದೆ. ಆದರೆ, ನಮ್ಮ ‘ಕೋರ’ ವಿಭಿನ್ನ ಕಥಾಹಂದರ ಹೊಂದಿರುವ ಚಿತ್ರ. ಇದು ಕಾಡಿನಲ್ಲೇ ನಡೆಯುವ ಕಥೆ. ನಾನು ಸಹ ಈ ಚಿತ್ರದ ಪ್ರಮುಖ ಪಾತ್ರದಲ್ಲಿ ನಟಿಸಿದ್ದೇನೆ. ಚಿತ್ರ ಮೊದಲು ಕನ್ನಡದಲ್ಲಿ ಬಿಡುಗಡೆ ಆಗಿ, ನಂತರದ ವಾರಗಳಲ್ಲಿ ತೆಲುಗು ಹಾಗೂ ತಮಿಳು ಭಾಷೆಗಳಲ್ಲೂ ಬಿಡುಗಡೆ ಆಗಲಿದೆ’ ಎಂದರು.

‘ಕೋರ’ ಸುಮಾರು 40 ವರ್ಷಗಳ ಹಿಂದಿನ ಕಾಲಘಟ್ಟದ ಕಥೆಯಂತೆ. ಕಾಡಿನಲ್ಲೇ ಹೆಚ್ಚು ನಡೆಯುವ ಕಥೆಯಂತೆ. ಕಾಡಿನ ಜನ ತಮ್ಮ ಅಸ್ತಿತ್ವಕ್ಕಾಗಿ ಹೋರಾಡುವ ಕಥೆ. ಚಿತ್ರದಲ್ಲಿ ಸುನಾಮಿ ಕಿಟ್ಟಿ ಜೊತೆಗೆ ಚರಿಷ್ಮಾ, ಮುನಿ, ಸೌಜನ್ಯ, ಯತಿರಾಜ್‍, ‘ಕಾಕ್ರೋಚ್‍’ ಸುಧಿ, ಎಂ.ಕೆ.ಮಠ, ನೀನಾಸಂ ಅಶ್ವಥ್ ಮುಂತಾದವರು ನಟಿಸಿದ್ದಾರೆ. ನಿರ್ಮಾಪಕ ಮೂರ್ತಿ ಚಿತ್ರದಲ್ಲಿ ವಿಲನ್‍ ಆಗಿ ಕಾಣಿಸಿಕೊಂಡಿದ್ದಾರೆ.

 

ರಿಯಾಲಿಟಿ ಶೋಗಳಲ್ಲಿ ಭಾಗವಹಿಸುತ್ತಿದ್ದ ನಾನು ಈ ಚಿತ್ರದ ಮೂಲಕ ಹೀರೋ ಆಗಿದ್ದೇನೆ ಎಂದ ಕಿಟ್ಟಿ, ‘ಈ ಚಿತ್ರದ ಮೂಲಕ ನಾಯಕನನ್ನಾಗಿ ಮಾಡಿದ ನಿರ್ಮಾಪಕ ಪಿ.ಮೂರ್ತಿ ಅವರಿಗೆ ಹಾಗೂ ನನಗೆ ಅಭಿನಯ ಹೇಳಿಕೊಟ್ಟು ಚಿತ್ರದಲ್ಲಿ ನಟಿಸಲು ಸಿದ್ದತೆ ಮಾಡಿಸಿದ ನಿರ್ದೇಶಕ ಶ್ರೀ ಅವರಿಗೆ ಧನ್ಯವಾದ. ನಮ್ಮ ತಂಡದ ಶ್ರಮದಿಂದ ‘ಕೋರ’ ಒಂದೊಳ್ಳೆಯ ಚಿತ್ರವಾಗಿ ಬರುತ್ತಿದೆ’ ಎಂದರು.

‘ಕೋರ’ ಚಿತ್ರಕ್ಕೆ ಹೇಮಂತ್ ಕುಮಾರ್ ಸಂಗೀತ, ಸೆಲ್ವಂ ಛಾಯಾಗ್ರಹಣವಿದೆ.

ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

14 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

18 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

18 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

18 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

18 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

18 hours ago