ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ಅವರು ಇಂದು (ಏ.೧೬) ನಿಧನರಾಗಿದ್ದಾರೆ. ಹೃದಯಾಘಾತದಿಂದ ಮರಣ ಹೊಂದಿದ ದ್ವಾರಕೀಶ್ ಅವರಿಗಾಗಿ ಕನ್ನಡ ಚಿತ್ರರಂಗವೇ ಕಂಬನಿ ಮಿಡಿದಿದೆ.
ತನ್ನ ಗೆಳೆಯ ದ್ವಾರಕೀಶ್ ನಿಧನಕ್ಕೆ ಸೂಪರ್ ಸ್ಟಾರ್ ರಜನಿಕಾಂತ್ ಅವರು ಸಂತಾಪ ಸೂಚಿಸಿದ್ದಾರೆ.
ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ನನ್ನ ಬಹುಕಾಲದ ಆತ್ಮೀಯ ಗೆಳೆಯ ದ್ವಾರಕೇಶ್ ಅವರ ನಿಧನ ನನಗೆ ಅತೀವ ನೋವು ತಂದಿದೆ.. ಹಾಸ್ಯ ನಟನಾಗಿ ವೃತ್ತಿ ಜೀವನ ಆರಂಭಿಸಿ ದೊಡ್ಡ ನಿರ್ಮಾಪಕನಾಗಿ, ನಿರ್ದೇಶಕನಾಗಿ ತನ್ನನ್ನು ತಾನು ಎತ್ತರಕ್ಕೆ ಬೆಳೆಸಿದ.. ಅವರೊಂದಿಗಿನ ಹಳೆಯ ನೆನಪುಗಳು ನನ್ನನ್ನು ಕಾಡುತ್ತಿದೆ ಅವರ ಆತ್ಮೀಯರು ಹಾಗೂ ಕುಟುಂಬಕ್ಕೆ ನನ್ನ ಭಾವಪೂರ್ಣ ಸಂತಾಪ ಎಂದು ಕಂಬನಿ ಮಿಡಿದಿದ್ದಾರೆ.
‘ದ್ವಾರಕೀಶ್ ಚಿತ್ರ’ ಸಂಸ್ಥೆಯ ಮೂಲಕ 50ಕ್ಕೂ ಅಧಿಕ ಸಿನಿಮಾಗಳನ್ನು ದ್ವಾರಕೀಶ್ ಅವರು ನಿರ್ಮಾಣ ಮಾಡಿದ್ದರು. ಅದರಲ್ಲಿ ಒಂದಂತೆ ನಟ ರಜನಿಕಾಂತ್ ಅವರು ನಟಿಸಿದ ʼಅಡುತ ವಾರಿಸುʼ ಸಿನಿಮಾವನ್ನು ದ್ವಾರಕೀಶ್ ಅವರು ನಿರ್ಮಾಣ ಮಾಡಿದ್ದರು. ಈ ಸಿನಿಮಾ 1983ರಲ್ಲಿ ರಿಲೀಸ್ ಆಗಿತ್ತು. ಈ ಚಿತ್ರದ ನಾಯಕಿಯಾಗಿ ಶ್ರೀದೇವಿ ಬಣ್ಣ ಹಚ್ಚಿದ್ದರು.
ನಾಳೆ (ಬುಧವಾರ, ಏಪ್ರಿಲ್ 17) ಬೆಳಗ್ಗೆ 11 ಗಂಟೆ ಬಳಿಕ ಚಾಮರಾಜಪೇಟೆಯಲ್ಲಿ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಸಂಬಂಧಿಕರ ಮೂಲಗಳು ತಿಳಿಸಿವೆ.
ನವದೆಹಲಿ: ಕೇರಳ ರಾಜ್ಯದ ಹೆಸರನ್ನು ಅಧಿಕೃತವಾಗಿ ಕೇರಳಂ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಹಸಿರು ನಿಶಾನೆ…
ಬೆಂಗಳೂರು: ಯುವಜನತೆಗೆ ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದ ರಾಜ್ಯ ಸರ್ಕಾರ, ಮೂರು ವರ್ಷ ಕಳೆಯತ್ತಾ ಬಂದರೂ ಒಂದೇ ಒಂದು…
ಮಂಡ್ಯ: ಜಿಲ್ಲೆಯಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಕೊರತೆ ಆಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಸಂಬಂಧಿತ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಸಿಇಓ…
ಬೆಂಗಳೂರು: ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಶೀಘ್ರವಾಗಿ ಭರ್ತಿ ಮಾಡಬೇಕೆಂದು ಒತ್ತಾಯಿಸಿ ಧಾರವಾಡದಲ್ಲಿ ಅಖಿಲ ಕರ್ನಾಟಕ ರಾಜ್ಯ…
ಬೆಂಗಳೂರು: ನಟ ರಿಷಬ್ ಶೆಟ್ಟಿ ಅಭಿನಯದ ಕಾಂತಾರ ಚಾಪ್ಟರ್-1 ಚಿತ್ರದ ದೈವದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎನ್ನಲಾದ ಪ್ರಕರಣಕ್ಕೆ…
ನವದೆಹಲಿ: ಭಾರತೀಯ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಬಾನು ಚಿಬ್ ಅವರನ್ನು ದೆಹಲಿ ಪೊಲೀಸರು ಇಂದು ಮುಂಜಾನೆ ಬಂಧಿಸಿದ್ದಾರೆ.…