ಮನರಂಜನೆ

ದಳಪತಿ ವಿಜಯ್‌ ಅಭಿನಯದ ಜನನಾಯಗನ್‌ ಚಿತ್ರಕ್ಕೆ ಸುಪ್ರೀಂ ಬಿಗ್‌ಶಾಕ್‌

ಜನನಾಯಗನ್‌ ಚಿತ್ರವನ್ನು ಮುಂದೂಡಿದ್ದಕ್ಕೆ ಸಂಬಂಧಿಸಿದಂತೆ ಸಿಬಿಎಫ್ಸಿ ಅನುಮತಿ ಕೋರಿ ಕೆವಿಎನ್‌ ಪ್ರೊಡಕ್ಷನ್ಸ್‌ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್‌ ಇಂದು ವಜಾಗೊಳಿಸಿದೆ.

ಸೆನ್ಸಾರ್‌ ಪ್ರಮಾಣಪತ್ರವನ್ನು ಪಡೆಯಲು ನಿರ್ಮಾಪಕರು ವಿಫಲರಾದ ಕಾರಣ ವಿಜಯ್‌ ಅವರ ಚಿತ್ರವನ್ನು ಜನವರಿ.9ರಂದು ಬಿಡುಗಡೆ ಮಾಡುವುದನ್ನು ಮುಂದೂಡಲಾಗಿದೆ. ತನ್ನ ಆದೇಶದಲ್ಲಿ ಸುಪ್ರೀಂಕೋರ್ಟ್‌ ಅರ್ಜಿದಾರರಿಗೆ ಮದ್ರಾಸ್‌ ಹೈಕೋರ್ಟ್‌ಗೆ ಹಿಂತಿರುಗಲು ನಿರ್ದೇಶಿಸಿತು. ಹೈಕೋರ್ಟ್‌ನ ವಿಭಾಗೀಯ ಪೀಠದ ಮುಂದೆ ವಾದಗಳನ್ನು ಎತ್ತಬೇಕು ಎಂದು ಹೇಳಿತು. ಈ ಹಿಂದೆ ಸುಳ್ಳು ತುರ್ತು ಪ್ರಜ್ಞೆ ತೋರಿಸಿದ್ದಕ್ಕಾಗಿ ನಿರ್ಮಾಪಕರನ್ನು ತರಾಟೆಗೆ ತೆಗೆದುಕೊಂಡಿತು ಹಾಗೂ ವಿಷಯ ಸಂಪೂರ್ಣವಾಗಿ ವಿಚಾರಣೆಯಾಗುವವರೆಗೆ ಪ್ರಮಾಣಪತ್ರವನ್ನು ತಡೆಹಿಡಿಯಲು ಸಿಬಿಎಫ್ಸಿಗೆ ಆದೇಶ ನೀಡಿತು.

ಜನವರಿ.20ರಂದು ಮೇಲ್ಮನವಿಯನ್ನು ನಿರ್ಧರಿಸಲು ಪ್ರಯತ್ನಿಸುವಂತೆ ಹೈಕೋರ್ಟ್‌ಗೆ ಸುಪ್ರೀಂಕೋರ್ಟ್‌ ಕೇಳಿದೆ. ತನ್ನ ನಿಲುವನ್ನು ಸ್ಪಷ್ಟಪಡಿಸಿದ ಪೀಠ, ಸುಪ್ರೀಂಕೋರ್ಟ್‌ ಈ ವಿಷಯದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಹೇಳಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ರಾಜ್ಯದ ಅಭಿವೃದ್ಧಿಗೆ ಪೂರಕವಾದ ಬಜೆಟ್‌ ಮಂಡಿಸಿದ್ದೇನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೇಂದ್ರ ಸರ್ಕಾರ ಜಿಎಸ್‌ಟಿ ಕೊಡದಿದ್ದರಿಂದ ರಾಜ್ಯದ ಬೆಳವಣಿಗೆ ಕಡಿಮೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು. 2026-27ನೇ ಸಾಲಿನ ಬಜೆಟ್‌…

10 hours ago

2025-26ನೇ ಸಾಲಿನ ರಾಜ್ಯ ಬಜೆಟ್ ಕುರಿತು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಪ್ರತಿಕ್ರಿಯೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಅತ್ಯಂತ ಜನಪರ ಬಜೆಟ್‌ ಮಂಡನೆ ಮಾಡಿದ್ದಾರೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಸಂತಸ…

11 hours ago

ರಾಜ್ಯ ಬಜೆಟ್‌ನಲ್ಲಿ ಜಯದೇವ ಆಸ್ಪತ್ರೆಗೆ 180 ಕೋಟಿ ಅನುದಾನ: ಸಿಎಂ ಸಿದ್ದುಗೆ ಡಾ.ಬಿ.ದಿನೇಶ್‌ ಧನ್ಯವಾದ

ಮೈಸೂರು: ಮೈಸೂರಿನ ಶ್ರೀ ಜಯದೇವ ಹೃದ್ರೋಗ ಆಸ್ಪತ್ರೆ ಉನ್ನತೀಕರಣಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ೧೮೦ ಕೋಟಿ ರೂ. ಅನುದಾನ ಘೋಷಿಸಿ,…

11 hours ago

ಸಿದ್ದರಾಮಯ್ಯ ದಾಖಲೆ ಮಾಡಲು ಹೋಗಿ ರಾಜ್ಯದ ಆರ್ಥಿಕತೆಯನ್ನು ದಿಕ್ಕಾಪಾಲಾಗಿಸಿದ್ದಾರೆ: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಸ್ಲೋಗನ್ ರಾಮಯ್ಯನವರ ಬಜೆಟ್ಟಿನ ಸುದೀರ್ಘ ಪ್ರಲಾಪ ಆಲಿಸಿದೆ. ಅವರಿಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ…

11 hours ago

ರಾಜ್ಯ ಬಜೆಟ್‌ ರೈತರ ಪಾಲಿಗೆ ತೀವ್ರ ನಿರಾಸೆ ತಂದಿದೆ: ಕುರುಬೂರು ಶಾಂತಕುಮಾರ್‌ ಅಸಮಾಧಾನ

ಮೈಸೂರು: ರಾಜ್ಯ ಸರ್ಕಾರ ಮಂಡಿಸಿರುವ ಬಜೆಟ್ ರೈತರ ಪಾಲಿಗೆ ತೀವ್ರ ನಿರಾಸೆ ತಂದಿದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ…

11 hours ago

ನೀರಿನಲ್ಲಿ ಹೋಮ ಮಾಡಿದ ಸಿದ್ದರಾಮಯ್ಯ ಬಜೆಟ್:‌ ವಿಜಯೇಂದ್ರ ಕಿಡಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ಮಂಡಿಸಿದ ರಾಜ್ಯ ಬಜೆಟ್‌ ಅನ್ನು ಟೀಕಿಸಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು, ಸಿದ್ದರಾಮಯ್ಯ ಅವರು…

11 hours ago