ಮನರಂಜನೆ

‘ಸೂರಿ ಅಣ್ಣ’ ಈಗ ‘ಸೂರಿ ಅಣ್ಣ’; ಚಿತ್ರದ ಟೀಸರ್ ಬಿಡುಗಡೆ

‘ದುನಿಯಾ’ ವಿಜಯ್‍ ಅಭಿನಯದ ‘ಸಲಗ’ ಚಿತ್ರದ ತಮ್ಮ ಸೂರಿ ಅಣ್ಣ ಪಾತ್ರದ ಮೂಲಕ ಜನಪ್ರಿಯರಾದ ದಿನೇಶ್‍, ಸದ್ದಿಲ್ಲದೆ ಒಂದು ಚಿತ್ರ ನಿರ್ಮಿಸಿ, ನಿರ್ದೇಶಿಸುವುದರ ಜೊತೆಗೆ ನಾಯಕನಾಗಿಯೂ ನಟಿಸಿದ್ದಾರೆ. ವಿಶೇಷವೆಂದರೆ, ಈ ಚಿತ್ರಕ್ಕೆ ‘ಸೂರಿ ಅಣ್ಣ’ ಎಂದೇ ಹೆಸರಿಡಲಾಗಿದ್ದು, ಈ ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದೆ.

ನಿವೃತ್ತ ಪೊಲೀಸ್ ಅಧಿಕಾರಿ ಎಸ್ ಕೆ ಉಮೇಶ್, ಲಹರಿ ವೇಲು, ಭೂಗತಲೋಕದಲ್ಲಿ ಒಂದು ಕಾಲದಲ್ಲಿ ಹೆಸರು ಮಾಡಿದ್ದ ಎಚ್.ಎಂ ಕೃಷ್ಣಮೂರ್ತಿ (ಜೇಡ್ರಳ್ಳಿ ಕೃಷ್ಣಪ್ಪ), ಪಿ.ಮೂರ್ತಿ,‌ ಗಡ್ಡ ನಾಗಣ್ಣ,‌ ಜೀಬ್ರಾ, ಲಕ್ಕಿ ಅಣ್ಣ, ಶ್ರೀರಾಮಪುರ ಮೊಟ್ಟೆ ಕಣ್ಣ ಮುಂತಾದವರು ಸಮಾರಂಭಕ್ಕೆ ಆಗಮಿಸಿ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.

ನಾನು ಈ ಚಿತ್ರ ನಿರ್ಮಾಣ ಮಾಡಲು ಇಲ್ಲಿ ಬಂದಿರುವ ಸಾಕಷ್ಟು ಜನರು ಸ್ಪೂರ್ತಿ ಎಂದು ಮಾತು ಶುರು ಮಾಡಿದ ಸೂರಿ, ‘ಇದೊಂದು ರೌಡಿಸಂ ಚಿತ್ರ. ಯಾರೂ ರೌಡಿಸಂ ಮಾಡಬೇಡಿ, ಎಲ್ಲರಿಗೂ ಕುಟುಂಬ ಇರುತ್ತದೆ, ಎಲ್ಲದಕ್ಕಿಂತ ಅದು ಮುಖ್ಯ ಎಂಬ ಉತ್ತಮ ಸಂದೇಶವನ್ನು ಈ ಚಿತ್ರ ಯುವಜನತೆಗೆ ನೀಡುತ್ತದೆ. ನನ್ನ ಹೆಸರು ದಿನೇಶ್. ‘ಸಲಗ’ ಚಿತ್ರದ ನಂತರ ‘ಸೂರಿ‌ ಅಣ್ಣ’ ಎಂದೇ ಎಲ್ಲರೂ ಗುರುತಿಸುತ್ತಾರೆ‌. ನಾನೇ ಈ ಚಿತ್ರವನ್ನು ನಿರ್ದೇಶಿಸಿ-ನಿರ್ಮಾಣ ಮಾಡಿದ್ದೇನೆ. ನಾನೇ ನಾಯಕನಾಗಿ ನಟಿಸಿದ್ದೇನೆ’ ಎಂದು ಮಾಹಿತಿ ನೀಡಿದರು.

ಹೆರಿಗೆ ನೋವಿನ ಬಗ್ಗೆ ತಾಯಿ ಮಾತ್ರ ಹೇಳಲು ಸಾಧ್ಯ. ಬೇರೆ ಯಾರಿಂದಲೂ ಸಾಧ್ಯವಿಲ್ಲ ಎಂದ ‘ಕಾಕ್ರೋಚ್‍’ ಸುಧಿ. ಹಾಗೆ ರೌಡಿಸಂ ಮಾಡಿದವರು ಅನುಭವಿಸಿದ ನೋವುಗಳನ್ನು ಅವರೆ ಹೇಳಬೇಕು. ಹಾಗೆ ಹೇಳುವುದರ ಜೊತೆಗೆ ಯಾರು ಕೂಡ ಈ ಕೆಲಸ ಮಾಡಬೇಡಿ ಎಂದು ಸಂದೇಶ ನೀಡುವ ಪ್ರಯತ್ನವನ್ನು ಈ ಚಿತ್ರದಲ್ಲಿ ಸೂರಿ ಮತ್ತು ಚಿತ್ರತಂಡದವರು ಮಾಡಿದ್ದಾರೆ’ ಎಂದರು.

‘ಸೂರಿ ಅಣ್ಣ’ ಚಿತ್ರದಲ್ಲಿ ಸಂಭ್ರಮ ಶ್ರೀ, ಕಾಕ್ರೋಚ್ ‍ಸುಧಿ, ಯಶಸ್ವಿನಿ ಗೌಡ, ಕಾಮರಾಜ್, ಅಂತರರಾಷ್ಟ್ರೀಯ ದೇಹದಾರ್ಢ್ಯ ಪಟು ಪ್ರಸಾದ್ ಮುಂತಾದವರು ನಟಿಸಿದ್ದು, ಕೆ.ಎಂ‌‌.ಇಂದ್ರ ಸಂಗೀತವಿದೆ. ಎಂ.ಬಿ.ಅಳಿಕಟ್ಟಿ ಛಾಯಾಗ್ರಹಣ, ಎನ್.ಎಂ. ವಿಶ್ವ ಸಂಕಲನವಿರುವ ಈ ಚಿತ್ರದ ಚಿತ್ರೀಕರಣ ಈಗಾಗಲೇ ಮುಗಿದಿದ್ದು, ಇನ್ನೆರಡು ತಿಂಗಳಲ್ಲಿ ಚಿತ್ರ ತೆರೆಗೆ ಬರಲಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಸಾಂಘಿಕ ಪ್ರದರ್ಶನದಿಂದ ಭಾರತದ ಮುಡಿಗೆ ಟಿ-೨೦ ವಿಶ್ವಕಪ್

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಟಿ-೨೦ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ತಂಡದ ಸಾಂಘಿಕ ಪ್ರದರ್ಶನದಿಂದ ನ್ಯೂಜಿಲೆಂಡ್…

2 hours ago

ಓದುಗರ ಪತ್ರ: ಅನುಭವಿ ಮೌಲ್ಯಮಾಪಕರಿಗೆ ಆದ್ಯತೆ ನೀಡಿ

ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ವಿದ್ಯಾರ್ಥಿಗಳು ವರ್ಷವಿಡೀ ಶ್ರದ್ಧೆಯಿಂದ ಓದಿ ಪರೀಕ್ಷೆ ಬರೆದರೂ ಪ್ರತಿ ವರ್ಷವೂ…

2 hours ago

ಓದುಗರ ಪತ್ರ: ಆಟೋ ಚಾಲಕರಿಂದ ಅರವಟ್ಟಿಗೆ ಸೌಲಭ್ಯ

ಬೇಸಿಗೆ ಆರಂಭವಾಗುತ್ತಿದ್ದಂತೆಯೇ ಬಿಸಿಲಿನ ತಾಪ ಹೆಚ್ಚಾಗಿ ಜನರು ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ಉಂಟಾಗುತ್ತದೆ. ಇಂತಹ ಸಂದರ್ಭದಲ್ಲಿ ಮೈಸೂರಿನ ರಾಮಸ್ವಾಮಿ…

2 hours ago

ಓದುಗರ ಪತ್ರ: ಯುದ್ಧ: ಎಂಎಲ್‌ಸಿಗೆ ಸ್ಪಂದಿಸದ ಕೇಂದ್ರ ಸರ್ಕಾರ?

ಇಸ್ರೇಲ್- ಅಮೆರಿಕ ಹಾಗೂ ಇರಾನ್ ನಡುವಿನ ಯುದ್ಧ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಭಾರತದಿಂದ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಿಂದ ಕಾರ್ಯನಿಮಿತ್ತ…

2 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಸ್ಲಮ್ ವಾಸಿಗಳಿಗೆ ಬದುಕು ಕಟ್ಟಿ ಕೊಟ್ಟ ಆರ್ಕಿಟೆಕ್ಟ್‌

ಕೊಳೆಗೇರಿಗಳ ೨೭,೦೦೦ ಮನೆಗಳಿಗೆ ಶೌಚಾಲಯ ಸೌಲಭ್ಯ ಪೂನಾದ ಇಂದಿರಾ ವಸಾಹತ್ ಎಂಬ ಪ್ರದೇಶದ ಒಂದು ಸ್ಲಮ್ಮಿನಲ್ಲಿ ವಾಸಿಸುವ ಲತಾ ರತನ್…

2 hours ago

ಮರಿಗಳೊಂದಿಗೆ ಹುಲಿ ಕಂಡು ಪುಳಕಿತರಾದ ಪ್ರವಾಸಿಗರು

ಮಹೇಂದ್ರ ಹಸಗೂಲಿ ತಾಯಿ ಹುಲಿ ನಾಪತ್ತೆಯಾಗಿದ್ದರಿಂದ ಮರಿಗಳನ್ನು ಪಾಲನೆ ಮಾಡಿದ್ದ ಅರಣ್ಯ ಇಲಾಖೆ  ಗುಂಡ್ಲುಪೇಟೆ: ಬಂಡೀಪುರದ ಸಫಾರಿಗೆ ಹೋಗಿದ್ದ ಪ್ರವಾಸಿಗರು…

2 hours ago