ಮನರಂಜನೆ

ವಿಜಯ್ ಸೇತುಪತಿ, ಪುರಿ ಜಗನ್ನಾಥ್ ಚಿತ್ರಕ್ಕೆ ಟಬು ಎಂಟ್ರಿ

ತಮಿಳಿನ ಜನಪ್ರಿಯ ನಟ ವಿಜಯ್‍ ಸೇತುಪತಿ ಅಭಿನಯದಲ್ಲಿ ಪುರಿ ಜಗನ್ನಾಥ್‍ ಒಂದು ಚಿತ್ರ ನಿರ್ದೇಶಿಸುತ್ತಿದ್ದಾರೆ ಎಂಬ ಸುದ್ದಿಯೊಂದು ಯುಗಾದಿ ಹಬ್ಬದ ಸಂದರ್ಭದಲ್ಲಿ ಕೇಳಿ ಬಂದಿತ್ತು. ಈಗ ಆ ಚಿತ್ರದಲ್ಲಿ ಬಾಲಿವುಡ್‍ನ ಜನಪ್ರಿಯ ನಟಿ ಟಬು ಸಹ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಟಬುಗೆ ತೆಲುಗು ಚಿತ್ರರಂಗ ಹೊಸದೇನಲ್ಲ. ಸುಮಾರು ಮೂರು ದಶಕಗಳ ಹಿಂದೆಯೇ ಅವರು ವೆಂಕಟೇಶ್‍ ಅಭಿನಯದ ‘ಕೂಲಿ ನಂಬರ್‍ ಒನ್‍’, ನಾಗಾರ್ಜುನ ಅಭಿನಯದ ‘ನಿನ್ನೇ ಪೆಳ್ಳಾಡತಾ’ ಮುಂತಾದ ಹಲವು ಚಿತ್ರಗಳನ್ನು ನಟಿಸಿದ್ದರು. 2020ರಲ್ಲಿ ಬಿಡುಗಡೆಯಾದ ‘ಅಲಾ ವೈಕುಂಠಪುರಂಲೋ’ ಚಿತ್ರದ ನಂತರ ಅವರು ಯಾವುದೇ ತೆಲುಗು ಚಿತ್ರದಲ್ಲಿ ನಟಿಸಿರಲಿಲ್ಲ. ಈಗ ಅವರು ಪುರಿ ಜಗನ್ನಾಥ್‍ ನಿರ್ದೇಶನದ ಹೊಸ ಚಿತ್ರದಲ್ಲಿ ನಟಿಸುತ್ತಿದ್ದಾರೆ.

ಇತ್ತೀಚೆಗೆ ನಿರ್ದೇಶಕ ಪುರಿ ಮತ್ತು ನಿರ್ಮಾಪಕಿ ಚಾರ್ಮಿ ಕೌರ್‍, ಇಬ್ಬರೂ ತಬು ಅವರನ್ನು ಭೇಟಿ ಮಾಡಿ ಚಿತ್ರದ ಕಥೆ ಹೇಳಿ, ಅವರಿಂದ ಒಪ್ಪಿಗೆ ಪಡೆದು ಬಂದಿದ್ದಾರೆ. ಈ ಚಿತ್ರವನ್ನು ಪುರಿ ಕನೆಕ್ಟ್ಸ್ ಸಂಸ್ಥೆಯಡಿ ಪುರಿ ಜಗನ್ನಾಥ್‍ ಮತ್ತು ಚಾರ್ಮಿ ಕೌರ್‍ ಜೊತೆಯಾಗಿ ನಿರ್ಮಿಸುತ್ತಿದ್ದಾರೆ.

ತೆಲುಗಿನ ಡ್ಯಾಷಿಂಗ್ ಡೈರೆಕ್ಟರ್ ಪುರಿ ಜಗನ್ನಾಥ್ ಹಾಗೂ ದಕ್ಷಿಣ ಭಾರತದ ಖ್ಯಾತ ನಟ ವಿಜಯ್ ಸೇತುಪತಿ ಕಾಂಬೋದ ಹೊಸ ಚಿತ್ರದ ಬಗ್ಗೆ ಲೇಟೆಸ್ಟ್ ಸುದ್ದಿಯೊಂದು ಸಿಕ್ಕಿದೆ. ಯುಗಾದಿ ಹಬ್ಬಕ್ಕೆ ಈ ಜೋಡಿ ಮೊದಲ ಬಾರಿಗೆ ಕೈ ಜೋಡಿಸಿರುವ ಬಗ್ಗೆ ಮಾಹಿತಿ ನೀಡಿತ್ತು. ಇದೀಗ ಪುರಿ ಜಗನ್ನಾಥ್ ಹೊಸ ಪ್ರಾಜೆಕ್ಟ್ ಬಾಲಿವುಡ್ ಪ್ರತಿಭಾನ್ವಿತ ನಟಿ ಟಬು ಎಂಟ್ರಿ ಕೊಟ್ಟಿದ್ದಾರೆ.

ಇನ್ನೂ ಹೆಸರಿಡದ ಈ ಚಿತ್ರದ ಚಿತ್ರೀಕರಣ ಜೂನ್‍ ತಿಂಗಳಿನಿಂದ ಪ್ರಾರಂಭವಾಗಲಿದೆಯಂತೆ. ವಿಜಯ್ ಸೇತುಪತಿ ಹಿಂದೆಂದೂ ಕಾಣದ ಲುಕ್‌ನಲ್ಲಿ ಈ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಇದಕ್ಕೂ ಮುನ್ನ ‘ಡಬಲ್‍ ಇಸ್ಮಾರ್ಟ್’ ಎಂಬ ಚಿತ್ರವನ್ನು ಪುರಿ ನಿರ್ದೇಶನ ಮಾಡಿದ್ದರು. ರಾಮ್‍ ಪೋತಿನೇನಿ, ಸಂಜಯ್‍ ದತ್‍ ಮುಂತಾದವರು ನಟಿಸಿದ್ದ ಈ ಚಿತ್ರವು ಕಳೆದ ವರ್ಷ ಬಿಡುಗಡೆಯಾಗಿತ್ತು. ಆದರೆ, ಚಿತ್ರ ಬಂದಿದ್ದು, ಹೋಗಿದ್ದು ಗೊತ್ತಾಗಲೇ ಇಲ್ಲ. ಈಗ ವಿಜಯ್‍ ಸೇತುಪತಿ ಚಿತ್ರದೊಂದಿಗೆ ಪುರಿ ವಾಪಸ್ಸಾಗುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ಭಾರತದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ…

30 mins ago

ರಸ್ತೆ ಅಪಘಾತಗಳನ್ನು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ

ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…

53 mins ago

ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಅನುದಾನ ಒದಗಿಸಿ: ಎಂಎಲ್‌ಸಿ ಕೆ.ಶಿವಕುಮಾರ್‌ ಆಗ್ರಹ

ಬೆಂಗಳೂರು: ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ಎಂಎಲ್‌ಸಿ ಕೆ.ಶಿವಕುಮಾರ್‌ ಒತ್ತಾಯಿಸಿದ್ದಾರೆ. ಈ…

1 hour ago

ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ

ಬೆಂಗಳೂರು: ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಿಮರೋಡಿ ಅವರನ್ನು ದಕ್ಷಿಣ…

2 hours ago

ಇರಾನ್-‌ಇಸ್ರೇಲ್‌ ಸಂಘರ್ಷ: ನಾಳೆ ಸರ್ವಪಕ್ಷ ಸಭೆ ಕರೆದ ಕೇಂದ್ರ ಸರ್ಕಾರ

ನವದೆಹಲಿ: ಇರಾನ್‌-ಇಸ್ರೇಲ್‌ ಸಂಘರ್ಷ ಮುಂದುವರಿದಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ನಾಳೆ ಸರ್ವ ಪಕ್ಷಗಳ ಸಭೆ ಕರೆದಿದ್ದು, ವಿರೋಧ ಪಕ್ಷಗಳಿಗೆ ಪರಿಸ್ಥಿತಿ…

2 hours ago

ಗುಂಡ್ಲುಪೇಟೆ| ಶಿವಪುರದ ತೋಟದ ಮನೆ ಬಳಿ ಚಿರತೆ ಪ್ರತ್ಯಕ್ಷ: ರೈತರಲ್ಲಿ ಆತಂಕ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಶಿವಪುರ ಸಮೀಪದ ಕಲ್ಲುಕಟ್ಟೆ ಬಳಿಯ ಜಮೀನಿನ ತೋಟದ ಮನೆಯ ಬಳಿ…

2 hours ago