ಮನರಂಜನೆ

ವಿಜಯ್ ಸೇತುಪತಿ, ಪುರಿ ಜಗನ್ನಾಥ್ ಚಿತ್ರಕ್ಕೆ ಟಬು ಎಂಟ್ರಿ

ತಮಿಳಿನ ಜನಪ್ರಿಯ ನಟ ವಿಜಯ್‍ ಸೇತುಪತಿ ಅಭಿನಯದಲ್ಲಿ ಪುರಿ ಜಗನ್ನಾಥ್‍ ಒಂದು ಚಿತ್ರ ನಿರ್ದೇಶಿಸುತ್ತಿದ್ದಾರೆ ಎಂಬ ಸುದ್ದಿಯೊಂದು ಯುಗಾದಿ ಹಬ್ಬದ ಸಂದರ್ಭದಲ್ಲಿ ಕೇಳಿ ಬಂದಿತ್ತು. ಈಗ ಆ ಚಿತ್ರದಲ್ಲಿ ಬಾಲಿವುಡ್‍ನ ಜನಪ್ರಿಯ ನಟಿ ಟಬು ಸಹ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಟಬುಗೆ ತೆಲುಗು ಚಿತ್ರರಂಗ ಹೊಸದೇನಲ್ಲ. ಸುಮಾರು ಮೂರು ದಶಕಗಳ ಹಿಂದೆಯೇ ಅವರು ವೆಂಕಟೇಶ್‍ ಅಭಿನಯದ ‘ಕೂಲಿ ನಂಬರ್‍ ಒನ್‍’, ನಾಗಾರ್ಜುನ ಅಭಿನಯದ ‘ನಿನ್ನೇ ಪೆಳ್ಳಾಡತಾ’ ಮುಂತಾದ ಹಲವು ಚಿತ್ರಗಳನ್ನು ನಟಿಸಿದ್ದರು. 2020ರಲ್ಲಿ ಬಿಡುಗಡೆಯಾದ ‘ಅಲಾ ವೈಕುಂಠಪುರಂಲೋ’ ಚಿತ್ರದ ನಂತರ ಅವರು ಯಾವುದೇ ತೆಲುಗು ಚಿತ್ರದಲ್ಲಿ ನಟಿಸಿರಲಿಲ್ಲ. ಈಗ ಅವರು ಪುರಿ ಜಗನ್ನಾಥ್‍ ನಿರ್ದೇಶನದ ಹೊಸ ಚಿತ್ರದಲ್ಲಿ ನಟಿಸುತ್ತಿದ್ದಾರೆ.

ಇತ್ತೀಚೆಗೆ ನಿರ್ದೇಶಕ ಪುರಿ ಮತ್ತು ನಿರ್ಮಾಪಕಿ ಚಾರ್ಮಿ ಕೌರ್‍, ಇಬ್ಬರೂ ತಬು ಅವರನ್ನು ಭೇಟಿ ಮಾಡಿ ಚಿತ್ರದ ಕಥೆ ಹೇಳಿ, ಅವರಿಂದ ಒಪ್ಪಿಗೆ ಪಡೆದು ಬಂದಿದ್ದಾರೆ. ಈ ಚಿತ್ರವನ್ನು ಪುರಿ ಕನೆಕ್ಟ್ಸ್ ಸಂಸ್ಥೆಯಡಿ ಪುರಿ ಜಗನ್ನಾಥ್‍ ಮತ್ತು ಚಾರ್ಮಿ ಕೌರ್‍ ಜೊತೆಯಾಗಿ ನಿರ್ಮಿಸುತ್ತಿದ್ದಾರೆ.

ತೆಲುಗಿನ ಡ್ಯಾಷಿಂಗ್ ಡೈರೆಕ್ಟರ್ ಪುರಿ ಜಗನ್ನಾಥ್ ಹಾಗೂ ದಕ್ಷಿಣ ಭಾರತದ ಖ್ಯಾತ ನಟ ವಿಜಯ್ ಸೇತುಪತಿ ಕಾಂಬೋದ ಹೊಸ ಚಿತ್ರದ ಬಗ್ಗೆ ಲೇಟೆಸ್ಟ್ ಸುದ್ದಿಯೊಂದು ಸಿಕ್ಕಿದೆ. ಯುಗಾದಿ ಹಬ್ಬಕ್ಕೆ ಈ ಜೋಡಿ ಮೊದಲ ಬಾರಿಗೆ ಕೈ ಜೋಡಿಸಿರುವ ಬಗ್ಗೆ ಮಾಹಿತಿ ನೀಡಿತ್ತು. ಇದೀಗ ಪುರಿ ಜಗನ್ನಾಥ್ ಹೊಸ ಪ್ರಾಜೆಕ್ಟ್ ಬಾಲಿವುಡ್ ಪ್ರತಿಭಾನ್ವಿತ ನಟಿ ಟಬು ಎಂಟ್ರಿ ಕೊಟ್ಟಿದ್ದಾರೆ.

ಇನ್ನೂ ಹೆಸರಿಡದ ಈ ಚಿತ್ರದ ಚಿತ್ರೀಕರಣ ಜೂನ್‍ ತಿಂಗಳಿನಿಂದ ಪ್ರಾರಂಭವಾಗಲಿದೆಯಂತೆ. ವಿಜಯ್ ಸೇತುಪತಿ ಹಿಂದೆಂದೂ ಕಾಣದ ಲುಕ್‌ನಲ್ಲಿ ಈ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಇದಕ್ಕೂ ಮುನ್ನ ‘ಡಬಲ್‍ ಇಸ್ಮಾರ್ಟ್’ ಎಂಬ ಚಿತ್ರವನ್ನು ಪುರಿ ನಿರ್ದೇಶನ ಮಾಡಿದ್ದರು. ರಾಮ್‍ ಪೋತಿನೇನಿ, ಸಂಜಯ್‍ ದತ್‍ ಮುಂತಾದವರು ನಟಿಸಿದ್ದ ಈ ಚಿತ್ರವು ಕಳೆದ ವರ್ಷ ಬಿಡುಗಡೆಯಾಗಿತ್ತು. ಆದರೆ, ಚಿತ್ರ ಬಂದಿದ್ದು, ಹೋಗಿದ್ದು ಗೊತ್ತಾಗಲೇ ಇಲ್ಲ. ಈಗ ವಿಜಯ್‍ ಸೇತುಪತಿ ಚಿತ್ರದೊಂದಿಗೆ ಪುರಿ ವಾಪಸ್ಸಾಗುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು: ಸೆ.5ರ ಪ್ರತಿಭಟನೆ ಹಿಂಪಡೆದ ಸಿಜೆಪಿ

ನವದೆಹಲಿ: ಸೆಪ್ಟೆಂಬರ್‌ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್‌ಗೆ…

7 hours ago

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ. ಜುಲೈನಲ್ಲಿ…

8 hours ago

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

9 hours ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

10 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

10 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

17 hours ago