Tamanna Bhatia Mysuru Sandal
ಮೈಸೂರು ಸ್ಯಾಂಡಲ್ ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಕಂಪನಿಯ ಹೊಸ ರಾಯಭಾರಿಯಾಗಿ ಬಾಲಿವುಡ್ನ ಜನಪ್ರಿಯ ನಟಿ ತಮನ್ನಾ ಭಾಟಿಯಾ ಅವರನ್ನು ಆಯ್ಕೆ ಮಾಡಿರುವುದು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಆಕ್ರೋಶಕ್ಕೆ ಕಾರಣವಾಗಿದೆ.
ಮೈಸೂರು ಸ್ಯಾಂಡಲ್ ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಕಂಪನಿಯ ಉತ್ಪನ್ನಗಳತ್ತ ಗ್ರಾಹಕರನ್ನು ಸೆಳೆಯುವ ನಿಟ್ಟಿನಲ್ಲಿ ಸಂಸ್ಥೆಯು ತಮನ್ನಾ ಭಾಟಿಯಾ ಅವರನ್ನು ಆಯ್ಕೆ ಮಾಡಿದ್ದು, ಅದಕ್ಕಾಗಿ ಅವರಿಗೆ ಎರಡು ವರ್ಷಗಳಿಗೆ 6.2 ಕೋಟಿ ರೂ. ನೀಡಲಿದೆ. ಸಂಸ್ಥೆಯ ಜಾಹೀರಾತುಗಳಲ್ಲಿ ತಮನ್ನಾ ಭಾಗವಹಿಸಿ, ಪ್ರಚಾರ ಮಾಡಲಿದ್ದಾರೆ.
ಈ ನಡೆಯ ಕುರಿತು ಪ್ರಮುಖವಾಗಿ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಟೀಕೆಗಳು ವ್ಯಕ್ತವಾಗುತ್ತಿವೆ. ಪ್ರಮುಖವಾಗಿ ಕರ್ನಾಟಕದ ಹೆಮ್ಮೆಯ ಸೋಪಿನ ಕುರಿತು ಪ್ರಚಾರ ಮಾಡುವುದಕ್ಕೆ ಕನ್ನಡ ನಟಿಯರು ಯಾರು ಸಿಗಲಿಲ್ಲವಾ? ಎಂದು ಹಲವರು ಪ್ರಶ್ನೆಯನ್ನು ಎತ್ತಿದ್ದಾರೆ. ಐತಿಹಾಸಿಕ ಮತ್ತು ಸಾಂಸ್ಕೃತಿಕ ಮೌಲ್ಯವುಳ್ಳ ಸಂಸ್ಥೆಯ ರಾಯಭಾರಿಯನ್ನಾಗಿ ಆಯ್ಕೆ ಮಾಡುವುದಕ್ಕೆ ತಮನ್ನಾ ಭಾಟಿಯಾ ಅವರೇ ಬೇಕಿತ್ತಾ ಎಂದು ಪ್ರಶ್ನಿಸಿದ್ದಾರೆ
ತಮನ್ನಾಗೆ ಸರ್ಕಾರವು 6.20 ಕೋಟಿ ರೂ. ವ್ಯಯಿಸಿರುವುದು ಸಂಪೂರ್ಣವಾಗಿ ಅನಗತ್ಯ ಮತ್ತು ಜವಾಬ್ದಾರಿಯಿಲ್ಲದ ನಿರ್ಧಾರವಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣ ಗೌಡ ಸಹ ಹೇಳಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ‘ಈ ಹಣವನ್ನು ಕರ್ನಾಟಕದ ಜನರ ಒಳಿತಿಗಾಗಿ ಬಳಸಬಹುದಾಗಿತ್ತು. ಸರ್ಕಾರವು ಜನರ ತೆರಿಗೆ ಹಣವನ್ನು ಈ ರೀತಿ ವ್ಯರ್ಥವಾಗಿ ಖರ್ಚು ಮಾಡಿರುವುದು ಖಂಡನೀಯವಾಗಿದೆ ಎಂದು ವಿರೋಧ ವ್ಯಕ್ತಪಡಿಸಿದ್ದಾರೆ.
ಮೈಸೂರು ಸ್ಯಾಂಡಲ್ನ ಪ್ರಾಥಮಿಕ ಗ್ರಾಹಕರು, ಕನ್ನಡಿಗರಾಗಿದ್ದಾರೆ ಎಂದಿರುವ ಅವರು, ‘ತಮನ್ನಾ ಅವರಂತಹ ಬಾಲಿವುಡ್ ನಟಿಯನ್ನು ಆಯ್ಕೆ ಮಾಡುವ ಮೂಲಕ ಕಂಪನಿಯು ಕನ್ನಡಿಗರ ಭಾವನೆಗಳಿಗೆ ಮತ್ತು ಸ್ಥಳೀಯ ಮಾರುಕಟ್ಟೆಯ ಸಂವೇದನೆಗೆ ಗೌರವ ನೀಡದಿರುವುದು ಆಕ್ಷೇಪಾರ್ಹವಾಗಿದೆ’ ಎಂದು ಅಸಮಾಧಾನವನ್ನು ಹೊರಹಾಕಿದ್ದಾರೆ.
ಈ ಮಧ್ಯೆ, ತಮನ್ನಾ ಅವರನ್ನು ರಾಯಭಾರಿಯನ್ನಾಗಿ ನೇಮಿಸಿರುವ ಸರ್ಕಾರದ ನಿರ್ಧಾರವನ್ನು ಕೆಲವರು ಬೆಂಬಲಿಸಿದ್ದಾರೆ. ‘ಕರ್ನಾಟಕದ ಹೊರಗೆ ಮೈಸೂರು ಸ್ಯಾಂಡಲ್ ಮಾರಾಟ ಮಾಡಲು ಜನಪ್ರಿಯ ಮುಖದ ಅವಶ್ಯಕತೆ ಇರುವುದರಿಂದ, ತಮನ್ನಾ ಅವರನ್ನು ಆಯ್ಕೆ ಮಾಡಿರುವುದು ಸರಿಯಾದ ಕ್ರಮ ಎಂದಿದ್ದಾರೆ.
ಮಂಡ್ಯ: ನಿನ್ನೆಯಷ್ಟೇ ಸಿಎಂ ಸಿದ್ದರಾಮಯ್ಯ ಮಂಡಿಸಿದ ರಾಜ್ಯ ಬಜೆಟ್ ಬಗ್ಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಟೀಕೆ ಮಾಡಿದ್ದಾರೆ. ಈ ಕುರಿತು…
ನವದೆಹಲಿ: ಇರಾನ್-ಇಸ್ರೇಲ್ ಸಂಘರ್ಷದ ನಡುವೆಯೇ ಭಾರತದಲ್ಲಿ ಎಲ್ಪಿಜಿ ಸಿಲಿಂಡರ್ಗಳ ಬೆಲೆಯಲ್ಲಿ ಹೆಚ್ಚಳವಾಗಿದೆ. 14.2 ಕಿಲೋ ಗ್ರಾಂ ತೂಕದ ಗೃಹ ಬಳಕೆಯ…
ಮಂಗಳೂರು: ಬಜೆಟ್ ಅಧಿವೇಶನದಲ್ಲಿ ಎಲ್ಲಾ ಶಾಸಕರು ಭಾಗಿಯಾಗಿ ಎಂದು ಸ್ಪೀಕರ್ ಯು.ಟಿ.ಖಾದರ್ ಕರೆ ನೀಡಿದ್ದಾರೆ. ಈ ಕುರಿತು ಮಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ…
ಹಾಸನ: ಜಿಲ್ಲೆಯ ಚನ್ನರಾಯಪಟ್ಟಣದ ದಿಂಡಗೂರು ಗ್ರಾಮದಲ್ಲಿ ಕಳೆದ ಒಂದು ವಾರದ ಅಂತರದಲ್ಲಿ ಎರಡು ಚಿರತೆಗಳನ್ನು ಸೆರೆ ಹಿಡಿಯಲಾಗಿದ್ದು, ಗ್ರಾಮಸ್ಥರು ನೆಮ್ಮದಿಯ…
ಟೆಹರಾನ್: ಯುದ್ಧದ ನಡುವೆಯೇ ಇರಾನ್ನಲ್ಲಿ ಇಂದು ಭೂಕಂಪ ಸಂಭವಿಸಿದೆ. ಇರಾನ್ನ ಆಯಕಟ್ಟಿನ ಪ್ರದೇಶದವಾದ ಬಂದರ್ ಅಬ್ಬಾಸ್ ಸಮೀಪ ರಿಕ್ಟರ್ ಮಾಪಕದಲ್ಲಿ…
ಬೆಂಗಳೂರು: ಬಿಗ್ಬಾಸ್ ಮಾಜಿ ಸ್ಪರ್ಧಿ ರಜತ್ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ರಜತ್ ವಿರುದ್ಧ ಬೆಂಗಳೂರಿನ ಕೆ.ಆರ್.ಪುರಂ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.…