ಮನರಂಜನೆ

ಮೈಸೂರು ಸ್ಯಾಂಡಲ್ ಸೋಪ್‍ಗೆ ತಮನ್ನಾ ರಾಯಭಾರಿ; ಸೋಷಿಯಲ್‍ ಮೀಡಿಯಾದಲ್ಲಿ ಆಕ್ರೋಶ

ಮೈಸೂರು ಸ್ಯಾಂಡಲ್ ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಕಂಪನಿಯ ಹೊಸ ರಾಯಭಾರಿಯಾಗಿ ಬಾಲಿವುಡ್‍ನ ಜನಪ್ರಿಯ ನಟಿ ತಮನ್ನಾ ಭಾಟಿಯಾ ಅವರನ್ನು ಆಯ್ಕೆ ಮಾಡಿರುವುದು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಆಕ್ರೋಶಕ್ಕೆ ಕಾರಣವಾಗಿದೆ.

ಮೈಸೂರು ಸ್ಯಾಂಡಲ್ ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಕಂಪನಿಯ ಉತ್ಪನ್ನಗಳತ್ತ ಗ್ರಾಹಕರನ್ನು ಸೆಳೆಯುವ ನಿಟ್ಟಿನಲ್ಲಿ ಸಂಸ್ಥೆಯು ತಮನ್ನಾ ಭಾಟಿಯಾ ಅವರನ್ನು ಆಯ್ಕೆ ಮಾಡಿದ್ದು, ಅದಕ್ಕಾಗಿ ಅವರಿಗೆ ಎರಡು ವರ್ಷಗಳಿಗೆ 6.2 ಕೋಟಿ ರೂ. ನೀಡಲಿದೆ. ಸಂಸ್ಥೆಯ ಜಾಹೀರಾತುಗಳಲ್ಲಿ ತಮನ್ನಾ ಭಾಗವಹಿಸಿ, ಪ್ರಚಾರ ಮಾಡಲಿದ್ದಾರೆ.

ಈ ನಡೆಯ ಕುರಿತು ಪ್ರಮುಖವಾಗಿ ಸೋಷಿಯಲ್‍ ಮೀಡಿಯಾದಲ್ಲಿ ಸಾಕಷ್ಟು ಟೀಕೆಗಳು ವ್ಯಕ್ತವಾಗುತ್ತಿವೆ. ಪ್ರಮುಖವಾಗಿ ಕರ್ನಾಟಕದ ಹೆಮ್ಮೆಯ ಸೋಪಿನ ಕುರಿತು ಪ್ರಚಾರ ಮಾಡುವುದಕ್ಕೆ ಕನ್ನಡ ನಟಿಯರು ಯಾರು ಸಿಗಲಿಲ್ಲವಾ? ಎಂದು ಹಲವರು ಪ್ರಶ್ನೆಯನ್ನು ಎತ್ತಿದ್ದಾರೆ. ಐತಿಹಾಸಿಕ ಮತ್ತು ಸಾಂಸ್ಕೃತಿಕ ಮೌಲ್ಯವುಳ್ಳ ಸಂಸ್ಥೆಯ ರಾಯಭಾರಿಯನ್ನಾಗಿ ಆಯ್ಕೆ ಮಾಡುವುದಕ್ಕೆ ತಮನ್ನಾ ಭಾಟಿಯಾ ಅವರೇ ಬೇಕಿತ್ತಾ ಎಂದು ಪ್ರಶ್ನಿಸಿದ್ದಾರೆ

ತಮನ್ನಾಗೆ ಸರ್ಕಾರವು 6.20 ಕೋಟಿ ರೂ. ವ್ಯಯಿಸಿರುವುದು ಸಂಪೂರ್ಣವಾಗಿ ಅನಗತ್ಯ ಮತ್ತು ಜವಾಬ್ದಾರಿಯಿಲ್ಲದ ನಿರ್ಧಾರವಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣ ಗೌಡ ಸಹ ಹೇಳಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ‘ಈ ಹಣವನ್ನು ಕರ್ನಾಟಕದ ಜನರ ಒಳಿತಿಗಾಗಿ ಬಳಸಬಹುದಾಗಿತ್ತು. ಸರ್ಕಾರವು ಜನರ ತೆರಿಗೆ ಹಣವನ್ನು ಈ ರೀತಿ ವ್ಯರ್ಥವಾಗಿ ಖರ್ಚು ಮಾಡಿರುವುದು ಖಂಡನೀಯವಾಗಿದೆ ಎಂದು ವಿರೋಧ ವ್ಯಕ್ತಪಡಿಸಿದ್ದಾರೆ.

ಮೈಸೂರು ಸ್ಯಾಂಡಲ್‌ನ ಪ್ರಾಥಮಿಕ ಗ್ರಾಹಕರು, ಕನ್ನಡಿಗರಾಗಿದ್ದಾರೆ ಎಂದಿರುವ ಅವರು, ‘ತಮನ್ನಾ ಅವರಂತಹ ಬಾಲಿವುಡ್ ನಟಿಯನ್ನು ಆಯ್ಕೆ ಮಾಡುವ ಮೂಲಕ ಕಂಪನಿಯು ಕನ್ನಡಿಗರ ಭಾವನೆಗಳಿಗೆ ಮತ್ತು ಸ್ಥಳೀಯ ಮಾರುಕಟ್ಟೆಯ ಸಂವೇದನೆಗೆ ಗೌರವ ನೀಡದಿರುವುದು ಆಕ್ಷೇಪಾರ್ಹವಾಗಿದೆ’ ಎಂದು ಅಸಮಾಧಾನವನ್ನು ಹೊರಹಾಕಿದ್ದಾರೆ.

ಈ ಮಧ್ಯೆ, ತಮನ್ನಾ ಅವರನ್ನು ರಾಯಭಾರಿಯನ್ನಾಗಿ ನೇಮಿಸಿರುವ ಸರ್ಕಾರದ ನಿರ್ಧಾರವನ್ನು ಕೆಲವರು ಬೆಂಬಲಿಸಿದ್ದಾರೆ. ‘ಕರ್ನಾಟಕದ ಹೊರಗೆ ಮೈಸೂರು ಸ್ಯಾಂಡಲ್‍ ಮಾರಾಟ ಮಾಡಲು ಜನಪ್ರಿಯ ಮುಖದ ಅವಶ್ಯಕತೆ ಇರುವುದರಿಂದ, ತಮನ್ನಾ ಅವರನ್ನು ಆಯ್ಕೆ ಮಾಡಿರುವುದು ಸರಿಯಾದ ಕ್ರಮ ಎಂದಿದ್ದಾರೆ.

ಆಂದೋಲನ ಡೆಸ್ಕ್

Recent Posts

ಪ್ರಾಕೃತಿಕ ವಿಕೋಪ ಎದುರಿಸಲು ಪೊಲೀಸ್ ಇಲಾಖೆ ಸಜ್ಜು

ನವೀನ್ ಡಿಸೋಜ ವಿಪತ್ತು ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ; ಸಂತ್ರಸ್ತರನ್ನು ರಕ್ಷಿಸುವ ವಿಧಾನ, ದೋಣಿ ಮೋಟಾರ್‌ಗಳನ್ನು ಚಾಲನೆ ಮಾಡುವ ಬಗ್ಗೆ…

3 hours ago

ಗಾಂಧಿ ಅಭಿಯಾನ ಅರಿವಿನ ಯಾನ

ಬಾಪೂಜಿ ಮತ್ತು ವಾಜಪೇಯಿ ದಾರಿ ಬೇರೆಯಾಗಿದ್ದರೂ ನೈತಿಕತೆಗೆ ಮಾದರಿಯಾಗಿದ್ದರು ರಾಜೀವ ಹೆಗಡೆ ಗಾಂಧೀಜಿ ಕ್ವಿಟ್ ಇಂಡಿಯಾ ಚಳವಳಿ ಆರಂಭಿ ಸಿದಾಗ…

3 hours ago

ಗಾಂಧಿ ಅಭಿಯಾನ ಅರಿವಿನ ಯಾನ

ಸುಧಾರಣೆ ನೆಪದಲ್ಲಿ ಎಚ್ಚರ ತಪ್ಪಿದೆ.  ಪ್ರೌಢಶಾಲೆಯಲ್ಲಿ ನನಗೆ ಆಪ್ತ ಸ್ನೇಹಿತರು ಬಹಳ ಕಡಿಮೆಯಿದ್ದರು. ಅಲ್ಲಿ ಬೇರೆ ಬೇರೆ ಕಾಲದಲ್ಲಿ ನನಗೆ…

3 hours ago

ಮಾನಸಿಕ ಅಸ್ವಸ್ಥರಿಗೆ ಬೇಕಿದೆ ಮಮತೆಯ ಮನೆ

ಪ್ರಶಾಂತ್ ಎಸ್. ಮೈಸೂರು: ಯಾವುದೋ ಕಾರಣಕ್ಕೆ ಮನಸ್ಸಿನ ಸ್ಥಿಮಿತ ಕಳೆದುಕೊಳ್ಳುವ ಬಹುತೇಕ ಮಂದಿ ಮನೆ ಹಾಗೂ ಕುಟುಂಬದವರಿಂದ ದೂರವಾಗುವುದು ಸಹಜ.…

3 hours ago

ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ ಹೆಚ್ಚಿನ ಬೇಡಿಕೆ ನಿರೀಕ್ಷೆ

ಗಿರೀಶ್ ಹುಣಸೂರು ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆಯಲ್ಲಿ ದಾಖಲೆ ಫಲಿತಾಂಶ ಹಿನ್ನೆಲೆ ಮೈಸೂರು: ಶೈಕ್ಷಣಿಕ ವರ್ಷದ ಆರಂಭಕ್ಕೆ ದಿನಗಣನೆ ಆರಂಭ ವಾಗಿರುವ…

3 hours ago

‘ನಮ್ಮ ಕ್ಲಿನಿಕ್’; ಉಡಾಫೆ ಸಿಬ್ಬಂದಿಗೆ ಬ್ರೇಕ್!

ಕೆ.ಬಿ.ರಮೇಶನಾಯಕ ೨ನೇ, ೪ನೇ ಶನಿವಾರ, ಭಾನುವಾರ ಬಾಗಿಲು ಹಾಕಿದರೆ ಶಿಸ್ತುಕ್ರಮ ಮೈಸೂರು: ವಾರದ ಭಾನುವಾರವೂ ಸೇರಿದಂತೆ ಸರ್ಕಾರಿ ರಜಾ ದಿನಗಳಂದು…

3 hours ago