ಮನರಂಜನೆ

ಮೈಸೂರು ಸ್ಯಾಂಡಲ್ ಸೋಪ್‍ಗೆ ತಮನ್ನಾ ರಾಯಭಾರಿ; ಸೋಷಿಯಲ್‍ ಮೀಡಿಯಾದಲ್ಲಿ ಆಕ್ರೋಶ

ಮೈಸೂರು ಸ್ಯಾಂಡಲ್ ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಕಂಪನಿಯ ಹೊಸ ರಾಯಭಾರಿಯಾಗಿ ಬಾಲಿವುಡ್‍ನ ಜನಪ್ರಿಯ ನಟಿ ತಮನ್ನಾ ಭಾಟಿಯಾ ಅವರನ್ನು ಆಯ್ಕೆ ಮಾಡಿರುವುದು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಆಕ್ರೋಶಕ್ಕೆ ಕಾರಣವಾಗಿದೆ.

ಮೈಸೂರು ಸ್ಯಾಂಡಲ್ ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಕಂಪನಿಯ ಉತ್ಪನ್ನಗಳತ್ತ ಗ್ರಾಹಕರನ್ನು ಸೆಳೆಯುವ ನಿಟ್ಟಿನಲ್ಲಿ ಸಂಸ್ಥೆಯು ತಮನ್ನಾ ಭಾಟಿಯಾ ಅವರನ್ನು ಆಯ್ಕೆ ಮಾಡಿದ್ದು, ಅದಕ್ಕಾಗಿ ಅವರಿಗೆ ಎರಡು ವರ್ಷಗಳಿಗೆ 6.2 ಕೋಟಿ ರೂ. ನೀಡಲಿದೆ. ಸಂಸ್ಥೆಯ ಜಾಹೀರಾತುಗಳಲ್ಲಿ ತಮನ್ನಾ ಭಾಗವಹಿಸಿ, ಪ್ರಚಾರ ಮಾಡಲಿದ್ದಾರೆ.

ಈ ನಡೆಯ ಕುರಿತು ಪ್ರಮುಖವಾಗಿ ಸೋಷಿಯಲ್‍ ಮೀಡಿಯಾದಲ್ಲಿ ಸಾಕಷ್ಟು ಟೀಕೆಗಳು ವ್ಯಕ್ತವಾಗುತ್ತಿವೆ. ಪ್ರಮುಖವಾಗಿ ಕರ್ನಾಟಕದ ಹೆಮ್ಮೆಯ ಸೋಪಿನ ಕುರಿತು ಪ್ರಚಾರ ಮಾಡುವುದಕ್ಕೆ ಕನ್ನಡ ನಟಿಯರು ಯಾರು ಸಿಗಲಿಲ್ಲವಾ? ಎಂದು ಹಲವರು ಪ್ರಶ್ನೆಯನ್ನು ಎತ್ತಿದ್ದಾರೆ. ಐತಿಹಾಸಿಕ ಮತ್ತು ಸಾಂಸ್ಕೃತಿಕ ಮೌಲ್ಯವುಳ್ಳ ಸಂಸ್ಥೆಯ ರಾಯಭಾರಿಯನ್ನಾಗಿ ಆಯ್ಕೆ ಮಾಡುವುದಕ್ಕೆ ತಮನ್ನಾ ಭಾಟಿಯಾ ಅವರೇ ಬೇಕಿತ್ತಾ ಎಂದು ಪ್ರಶ್ನಿಸಿದ್ದಾರೆ

ತಮನ್ನಾಗೆ ಸರ್ಕಾರವು 6.20 ಕೋಟಿ ರೂ. ವ್ಯಯಿಸಿರುವುದು ಸಂಪೂರ್ಣವಾಗಿ ಅನಗತ್ಯ ಮತ್ತು ಜವಾಬ್ದಾರಿಯಿಲ್ಲದ ನಿರ್ಧಾರವಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣ ಗೌಡ ಸಹ ಹೇಳಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ‘ಈ ಹಣವನ್ನು ಕರ್ನಾಟಕದ ಜನರ ಒಳಿತಿಗಾಗಿ ಬಳಸಬಹುದಾಗಿತ್ತು. ಸರ್ಕಾರವು ಜನರ ತೆರಿಗೆ ಹಣವನ್ನು ಈ ರೀತಿ ವ್ಯರ್ಥವಾಗಿ ಖರ್ಚು ಮಾಡಿರುವುದು ಖಂಡನೀಯವಾಗಿದೆ ಎಂದು ವಿರೋಧ ವ್ಯಕ್ತಪಡಿಸಿದ್ದಾರೆ.

ಮೈಸೂರು ಸ್ಯಾಂಡಲ್‌ನ ಪ್ರಾಥಮಿಕ ಗ್ರಾಹಕರು, ಕನ್ನಡಿಗರಾಗಿದ್ದಾರೆ ಎಂದಿರುವ ಅವರು, ‘ತಮನ್ನಾ ಅವರಂತಹ ಬಾಲಿವುಡ್ ನಟಿಯನ್ನು ಆಯ್ಕೆ ಮಾಡುವ ಮೂಲಕ ಕಂಪನಿಯು ಕನ್ನಡಿಗರ ಭಾವನೆಗಳಿಗೆ ಮತ್ತು ಸ್ಥಳೀಯ ಮಾರುಕಟ್ಟೆಯ ಸಂವೇದನೆಗೆ ಗೌರವ ನೀಡದಿರುವುದು ಆಕ್ಷೇಪಾರ್ಹವಾಗಿದೆ’ ಎಂದು ಅಸಮಾಧಾನವನ್ನು ಹೊರಹಾಕಿದ್ದಾರೆ.

ಈ ಮಧ್ಯೆ, ತಮನ್ನಾ ಅವರನ್ನು ರಾಯಭಾರಿಯನ್ನಾಗಿ ನೇಮಿಸಿರುವ ಸರ್ಕಾರದ ನಿರ್ಧಾರವನ್ನು ಕೆಲವರು ಬೆಂಬಲಿಸಿದ್ದಾರೆ. ‘ಕರ್ನಾಟಕದ ಹೊರಗೆ ಮೈಸೂರು ಸ್ಯಾಂಡಲ್‍ ಮಾರಾಟ ಮಾಡಲು ಜನಪ್ರಿಯ ಮುಖದ ಅವಶ್ಯಕತೆ ಇರುವುದರಿಂದ, ತಮನ್ನಾ ಅವರನ್ನು ಆಯ್ಕೆ ಮಾಡಿರುವುದು ಸರಿಯಾದ ಕ್ರಮ ಎಂದಿದ್ದಾರೆ.

ಆಂದೋಲನ ಡೆಸ್ಕ್

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

12 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

12 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

13 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

13 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

18 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

18 hours ago