ಮನರಂಜನೆ

ಮೈಸೂರು ಸ್ಯಾಂಡಲ್ ಸೋಪ್‍ಗೆ ತಮನ್ನಾ ರಾಯಭಾರಿ; ಸೋಷಿಯಲ್‍ ಮೀಡಿಯಾದಲ್ಲಿ ಆಕ್ರೋಶ

ಮೈಸೂರು ಸ್ಯಾಂಡಲ್ ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಕಂಪನಿಯ ಹೊಸ ರಾಯಭಾರಿಯಾಗಿ ಬಾಲಿವುಡ್‍ನ ಜನಪ್ರಿಯ ನಟಿ ತಮನ್ನಾ ಭಾಟಿಯಾ ಅವರನ್ನು ಆಯ್ಕೆ ಮಾಡಿರುವುದು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಆಕ್ರೋಶಕ್ಕೆ ಕಾರಣವಾಗಿದೆ.

ಮೈಸೂರು ಸ್ಯಾಂಡಲ್ ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಕಂಪನಿಯ ಉತ್ಪನ್ನಗಳತ್ತ ಗ್ರಾಹಕರನ್ನು ಸೆಳೆಯುವ ನಿಟ್ಟಿನಲ್ಲಿ ಸಂಸ್ಥೆಯು ತಮನ್ನಾ ಭಾಟಿಯಾ ಅವರನ್ನು ಆಯ್ಕೆ ಮಾಡಿದ್ದು, ಅದಕ್ಕಾಗಿ ಅವರಿಗೆ ಎರಡು ವರ್ಷಗಳಿಗೆ 6.2 ಕೋಟಿ ರೂ. ನೀಡಲಿದೆ. ಸಂಸ್ಥೆಯ ಜಾಹೀರಾತುಗಳಲ್ಲಿ ತಮನ್ನಾ ಭಾಗವಹಿಸಿ, ಪ್ರಚಾರ ಮಾಡಲಿದ್ದಾರೆ.

ಈ ನಡೆಯ ಕುರಿತು ಪ್ರಮುಖವಾಗಿ ಸೋಷಿಯಲ್‍ ಮೀಡಿಯಾದಲ್ಲಿ ಸಾಕಷ್ಟು ಟೀಕೆಗಳು ವ್ಯಕ್ತವಾಗುತ್ತಿವೆ. ಪ್ರಮುಖವಾಗಿ ಕರ್ನಾಟಕದ ಹೆಮ್ಮೆಯ ಸೋಪಿನ ಕುರಿತು ಪ್ರಚಾರ ಮಾಡುವುದಕ್ಕೆ ಕನ್ನಡ ನಟಿಯರು ಯಾರು ಸಿಗಲಿಲ್ಲವಾ? ಎಂದು ಹಲವರು ಪ್ರಶ್ನೆಯನ್ನು ಎತ್ತಿದ್ದಾರೆ. ಐತಿಹಾಸಿಕ ಮತ್ತು ಸಾಂಸ್ಕೃತಿಕ ಮೌಲ್ಯವುಳ್ಳ ಸಂಸ್ಥೆಯ ರಾಯಭಾರಿಯನ್ನಾಗಿ ಆಯ್ಕೆ ಮಾಡುವುದಕ್ಕೆ ತಮನ್ನಾ ಭಾಟಿಯಾ ಅವರೇ ಬೇಕಿತ್ತಾ ಎಂದು ಪ್ರಶ್ನಿಸಿದ್ದಾರೆ

ತಮನ್ನಾಗೆ ಸರ್ಕಾರವು 6.20 ಕೋಟಿ ರೂ. ವ್ಯಯಿಸಿರುವುದು ಸಂಪೂರ್ಣವಾಗಿ ಅನಗತ್ಯ ಮತ್ತು ಜವಾಬ್ದಾರಿಯಿಲ್ಲದ ನಿರ್ಧಾರವಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣ ಗೌಡ ಸಹ ಹೇಳಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ‘ಈ ಹಣವನ್ನು ಕರ್ನಾಟಕದ ಜನರ ಒಳಿತಿಗಾಗಿ ಬಳಸಬಹುದಾಗಿತ್ತು. ಸರ್ಕಾರವು ಜನರ ತೆರಿಗೆ ಹಣವನ್ನು ಈ ರೀತಿ ವ್ಯರ್ಥವಾಗಿ ಖರ್ಚು ಮಾಡಿರುವುದು ಖಂಡನೀಯವಾಗಿದೆ ಎಂದು ವಿರೋಧ ವ್ಯಕ್ತಪಡಿಸಿದ್ದಾರೆ.

ಮೈಸೂರು ಸ್ಯಾಂಡಲ್‌ನ ಪ್ರಾಥಮಿಕ ಗ್ರಾಹಕರು, ಕನ್ನಡಿಗರಾಗಿದ್ದಾರೆ ಎಂದಿರುವ ಅವರು, ‘ತಮನ್ನಾ ಅವರಂತಹ ಬಾಲಿವುಡ್ ನಟಿಯನ್ನು ಆಯ್ಕೆ ಮಾಡುವ ಮೂಲಕ ಕಂಪನಿಯು ಕನ್ನಡಿಗರ ಭಾವನೆಗಳಿಗೆ ಮತ್ತು ಸ್ಥಳೀಯ ಮಾರುಕಟ್ಟೆಯ ಸಂವೇದನೆಗೆ ಗೌರವ ನೀಡದಿರುವುದು ಆಕ್ಷೇಪಾರ್ಹವಾಗಿದೆ’ ಎಂದು ಅಸಮಾಧಾನವನ್ನು ಹೊರಹಾಕಿದ್ದಾರೆ.

ಈ ಮಧ್ಯೆ, ತಮನ್ನಾ ಅವರನ್ನು ರಾಯಭಾರಿಯನ್ನಾಗಿ ನೇಮಿಸಿರುವ ಸರ್ಕಾರದ ನಿರ್ಧಾರವನ್ನು ಕೆಲವರು ಬೆಂಬಲಿಸಿದ್ದಾರೆ. ‘ಕರ್ನಾಟಕದ ಹೊರಗೆ ಮೈಸೂರು ಸ್ಯಾಂಡಲ್‍ ಮಾರಾಟ ಮಾಡಲು ಜನಪ್ರಿಯ ಮುಖದ ಅವಶ್ಯಕತೆ ಇರುವುದರಿಂದ, ತಮನ್ನಾ ಅವರನ್ನು ಆಯ್ಕೆ ಮಾಡಿರುವುದು ಸರಿಯಾದ ಕ್ರಮ ಎಂದಿದ್ದಾರೆ.

ಆಂದೋಲನ ಡೆಸ್ಕ್

Recent Posts

ವೆನೆಜುವೆಲಾದಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ ತುರ್ತು ಪರಿಸ್ಥಿತಿ ಘೋಷಣೆ

ಕ್ಯಾರಕಾಸ್‌ : ವೆನೆಜುವೆಲಾ ಕರಾವಳಿಯ ಸಮೀಪ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳು ದೇಶವನ್ನು ಬೆಚ್ಚಿಬೀಳಿಸಿವೆ. ರಿಕ್ಟರ್ ಮಾಪಕದಲ್ಲಿ…

2 hours ago

ಸಮ ಸಮಾಜದ ಕನಸು ಕಂಡಿದ್ದ ಹೋರಾಟಗಾರ ಜವರಪ್ಪಗೌಡ

ಪ್ರೊ.ಬಿ.ಜಯಪ್ರಕಾಶ್‌ಗೌಡ ಬದುಕಿದ್ದರೆ ೧೦೯ ವರ್ಷಗಳನ್ನು ಪೂರೈಸುತ್ತಿದ್ದ ಸ್ವಾತಂತ್ರ್ಯ ಹೋರಾಟಗಾರ ಪಿ. ಎನ್. ಜವರಪ್ಪಗೌಡರು ನಮಗೆಲ್ಲರಿಗೂ ಮಾರ್ಗದರ್ಶಕರಾಗಿದ್ದವರು. ಜವರಪ್ಪಗೌಡರು ಗಾಂಧೀಜಿಯಿಂದ ಪ್ರಭಾವಿತರಾಗಿದ್ದರು.…

2 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 25  ಗುರುವಾರ  

4 hours ago

ಮುತ್ತತ್ತಿಯಲ್ಲಿ ಘೋರ ದುರಂತ: ಒಂದೇ ಕುಟುಂಬದ ನಾಲ್ವರು ಮಹಿಳೆಯರು ಸೇರಿ ಐವರು ನೀರುಪಾಲು

ಹಲಗೂರು: ಸಮೀಪದ ಪ್ರವಾಸಿ ತಾಣವಾದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ನೀರಿನ ಪ್ರಬಲ ಸೆಳೆತಕ್ಕೆ…

15 hours ago

ಚಾಮರಾಜನಗರ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ

ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…

17 hours ago

ಬಿಆರ್‌ಟಿ ವ್ಯಾಪ್ತಿಯಲ್ಲಿ ಕಾಡಾನೆ ಕಳೇಬರ ಪತ್ತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…

18 hours ago