ತಮಿಳು ಚಿತ್ರರಂಗದ ಖ್ಯಾತ ಖಳನಟ ಡ್ಯಾನಿಯಲ್ ಬಾಲಾಜಿ ಅವರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ‘ಕಾಖ ಕಾಖ’ ಸಿನಿಮಾದಲ್ಲಿ ನಟ ಸೂರ್ಯರೊಂದಿಗೆ ತೆರೆ ಹಂಚಿಕೊಂಡು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದರು. ಅವರ ಅಗಲಿಕೆಗೆ ತಮಿಳು ಚಿತ್ರರಂಗ ಕಂಬನಿ ಮಿಡಿದಿದೆ.
ಡ್ಯಾನಿಯಲ್ ಬಾಲಾಜಿ ಅವರು ಅವರು ಪ್ರೊಡಕ್ಷನ್ ಮ್ಯಾನೇಜರ್ ಆಗಿ ಬಣ್ಣದ ಲೋಕಕ್ಕೆ ಎಂಟ್ರಿಕೊಟ್ಟರು. ಕಮಲ್ ಹಾಸನ್ ನಟನೆಯ ‘ವೆಟ್ಟೈಯಾಡು ವಿಲೈಯಾಡು’ ಸಿನಿಮಾದಲ್ಲಿ ವಿಲನ್ ಪಾತ್ರ ಮಾಡಿ ಎಲ್ಲರ ಮೆಚ್ಚುಗೆಗೆ ಪಾತ್ರರಾದರು. ತಮಿಳು ಚಿತ್ರರಂಗ ಮಾತ್ರವಲ್ಲದೇ ಮಲಯಾಳಂ ಚಿತ್ರರಂಗದಲ್ಲಿಯೂ ಗಮನ ಸೆಳೆದಿದ್ದರು. ತಮಿಳಿನ ಸ್ಟಾರ್ ನಟ ವಿಜಯ್ ನಟನೆಯ ಬಿಗಿಲ್, ಭೈರವ ಚಿತ್ರಗಳಲ್ಲಿ ವಿಲನ್ ಆಗಿ ಎಲ್ಲರ ಮನೆ ಮಾತನಾಗಿದ್ದರು.
ಡ್ಯಾನಿಯಲ್ ಅವರು ಎದೆನೋವಿನಿಂದ ಇತ್ತೀಚೆಗೆ ಚೆನ್ನೈ ಆಸ್ಪತ್ರೆಗೆ ದಾಖಲಾದರು. ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದರು. ಇಂದು (ಮಾರ್ಚ್ 30) ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…