ಮನರಂಜನೆ

ತಮಿಳು, ಮಲಯಾಳಂ ಆಯ್ತು; ಇದೀಗ ತೆಲುಗಿಗೆ ಹೊರಟ KVN ಪ್ರೊಡಕ್ಷನ್ಸ್

ಕನ್ನಡದ ಜನಪ್ರಿಯ ನಿರ್ಮಾಣ ಮತ್ತು ವಿತರಣಾ ಸಂಸ್ಥೆಯಾದ ಕೆವಿಎನ್‍ ಪ್ರೊಡಕ್ಷನ್ಸ್, ಸದ್ಯ ಕನ್ನಡವಲ್ಲದೆ ತಮಿಳು ಮತ್ತು ಮಲಯಾಳಂನಲ್ಲಿ ಚಿತ್ರಗಳನ್ನು ನಿರ್ಮಿಸುತ್ತಿದೆ. ಇದೀಗ ತೆಲುಗು ಚಿತ್ರರಂಗಕ್ಕೂ KVN ಪ್ರೊಡಕ್ಷನ್ಸ್ ಸಂಸ್ಥೆಯು ಕಾಲಿಟ್ಟಿದ್ದು, ಚಿರಂಜೀವಿ ಅಭಿನಯದ ಚಿತ್ರವೊಂದನ್ನು ಸದ್ಯದಲ್ಲೇ ನಿರ್ಮಿಸಲಿದೆ ಎಂಬ ಮಾತೊಂದು ಕೇಳಿ ಬರುತ್ತಿದೆ.

ಹೌದು, ಟಾಲಿವುಡ್‍ಗೆ ಎಂಟ್ರಿ ಕೊಡುವುದಕ್ಕೆ KVN ಪ್ರೊಡಕ್ಷನ್ಸ್ ಸಂಸ್ಥೆಯು ಸಜ್ಜಾಗಿದ್ದು, ಸಂಸ್ಥೆಯ ಮೊದಲ ಚಿತ್ರದಲ್ಲಿ ಚಿರಂಜೀವಿ ನಟಿಸಲಿದ್ದಾರಂತೆ. ಇನ್ನು, ಚಿರಂಜೀವಿ ಅಭಿನಯದಲ್ಲಿ ‘ವಾಲ್ಟರ್ ವೀರಯ್ಯ’ ಎಂಬ ಚಿತ್ರವನ್ನು ನಿರ್ದೇಶಿಸಿದ್ದ ಬಾಬಿ ಕೊಲ್ಲಿ, ಈ ಚಿತ್ರವನ್ನು ನಿರ್ದೇಶಿಸಲಿದ್ದಾರೆ. ಸದ್ಯಕ್ಕೆ ಚಿತ್ರದ ಸ್ಕ್ರಿಪ್ಟ್ ಕೆಲಸಗಳು ನಡೆಯುತ್ತಿದ್ದು, ಆಗಸ್ಟ್.15ರಂದು ಚಿತ್ರದ ಅಧಿಕೃತ ಘೋಷಣೆ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಇದಕ್ಕೂ ಮೊದಲು, KVN ಪ್ರೊಡಕ್ಷನ್ಸ್ ವೆಂಕಟ್‍ನಾರಾಯಣ್‍, ಈ ವರ್ಷದ ಆರಂಭದಲ್ಲಿ ಮಲಯಾಳಂನಲ್ಲಿ ಚಿತ್ರವೊಂದನ್ನು ನಿರ್ಮಿಸುವುದಕ್ಕೆ ಹೆಜ್ಜೆ ಇಟ್ಟಿದ್ದಾರೆ. ಈ ಚಿತ್ರವನ್ನು ಅವರು ತೆಸ್ಪಿಯನ್ ಫಿಲ್ಮ್ಸ್ ಜೊತೆಗೆ ಸೇರಿ ಜಂಟಿಯಾಗಿ ನಿರ್ಮಿಸುತ್ತಿದ್ದಾರೆ. ಈ ಚಿತ್ರವನ್ನು ಚಿದಂಬರಂ ನಿರ್ದೇಶನ ಮಾಡುತ್ತಿದ್ದಾರೆ. ಕಳೆದ ವರ್ಷ ಮಲಯಾಳಂನಲ್ಲಿ ಬಿಡುಗಡೆಯಾದ ಅತ್ಯಂತ ಯಶಸ್ವಿ ಚಿತ್ರ ‘ಮಂಜುಮ್ಮೆಲ್ ಬಾಯ್ಸ್’ ನಿರ್ಮಿಸಿದ್ದು, ಇದೇ ಚಿದಂಬರಂ. ಇನ್ನು, ‘ರೋಮಾಂಚನಂ’, ‘ಆವೇಶಂ’ ಮುಂತಾದ ಚಿತ್ರಗಳಿಗೆ ಕಥೆ ಬರೆದಿರುವ ಜೀತು ಮಾಧವನ್ ಈ ಚಿತ್ರಕ್ಕೆ ಕಥೆ ಬರೆದಿದ್ದಾರೆ.

ಇದಲ್ಲದೆ, ತಮಿಳಿನಲ್ಲಿ ಈ ಸಂಸ್ಥೆಯು, ವಿಜಯ್‍ ಅಭಿನಯದಲ್ಲಿ ‘ಜನ ನಾಯಗನ್‍’ ಚಿತ್ರವನ್ನು ನಿರ್ಮಿಸುತ್ತಿದೆ. ವಿನೋದ್‍ ನಿರ್ದೇಶನದ ಈ ಚಿತ್ರದಲ್ಲಿ ಚಿತ್ರದಲ್ಲಿ ವಿಜಯ್‍ ಜೊತೆಗೆ ಪೂಜಾ ಹೆಗ್ಡೆ, ಬಾಬ್ಬಿ ಡಿಯೋಲ್‍, ಗೌತಮ್‍ ಮೆನನ್, ಪ್ರಕಾಶ್‍ ರೈ, ಪ್ರಿಯಾಮಣಿ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಸತ್ಯನ್‍ ಸೂರ್ಯನ್‍ ಛಾಯಾಗ್ರಹಣ ಮತ್ತು ಅನಿರುದ್ಧ್ ರವಿಚಂದರ್ ಅವರ ಸಂಗೀತವಿದೆ.

ಕನ್ನಡದಲ್ಲಂತೂ KVN ಪ್ರೊಡಕ್ಷನ್ಸ್ನ ವೆಂಕಟ್‍ನಾರಾಯಣ್‍ ಎರಡು ಬಿಗ್‍ ಬಜೆಟ್‍ ಚಿತ್ರಗಳನ್ನು ನಿರ್ಮಿಸುತ್ತಿದ್ದಾರೆ. ಈ ಪೈಕಿ ಮೊದಲನೆಯದು ಧ್ರುವ ಸರ್ಜಾ ಅಭಿನಯದ ‘ಕೆಡಿ – ದಿ ಡೆವಿಲ್‍’. ‘ಜೋಗಿ’ ಪ್ರೇಮ್‍ ನಿರ್ದೇಶನದ ಈ ಚಿತ್ರವು ಅಕ್ಟೋಬರ್‌ನಲ್ಲಿ ಬಿಡುಗಡೆಯಾಗಲಿದೆ. ಇನ್ನು, ಯಶ್‍ ಅಭಿನಯದ ‘ಟಾಕ್ಸಿಕ್‍’ ಚಿತ್ರದ ಕೆಲಸಗಳು ಭರದಿಂದ ಸಾಗಿದ್ದು, ಚಿತ್ರವು ಮುಂದಿನ ವರ್ಷ ಬಿಡುಗಡೆಯಾಗಲಿದೆ.

ಆಂದೋಲನ ಡೆಸ್ಕ್

Recent Posts

ನಟಿ ಮೇಲೆ ಅತ್ಯಾಚಾರ ಕೇಸ್‌: ಮಲಯಾಳಂ ಸ್ಟಾರ್‌ ನಟ ದಿಲೀಪ್‌ ಖುಲಾಸೆ

ಕೇರಳ: ಸುಮಾರು ಎಂಟು ವರ್ಷಗಳ ಕಾಲ ನಡೆದ ಕಾನೂನು ಹೋರಾಟದ ನಂತರ, 2017ರಲ್ಲಿ ನಟಿಯ ಮೇಲಿನ ಹಲ್ಲೆ ಪ್ರಕರಣದಲ್ಲಿ ಮಲಯಾಳಂ…

13 mins ago

ಜೈಲಿನ ಕಠಿಣ ನಿಯಮಗಳಿಗೆ ತತ್ತರಿಸಿ ಹೋದ ನಟ ದರ್ಶನ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಜೈಲಿನ ಕಠಿಣ ನಿಯಮಗಳಿಗೆ ತತ್ತರಿಸಿ ಹೋಗಿದ್ದಾರೆ ಎನ್ನಲಾಗಿದೆ.…

19 mins ago

ಬೆಳಗಾವಿ ಅಧಿವೇಶನ ವಿರೋಧಿಸಿ ಎಂಇಎಸ್‌ ಪುಂಡರಿಂದ ಮಹಾಮೇಳಾವ್:‌ ಹಲವರು ಪೊಲೀಸ್‌ ವಶಕ್ಕೆ

ಬೆಳಗಾವಿ: ಬೆಳಗಾವಿ ಅಧಿವೇಶನ ವಿರೋಧಿಸಿ ಎಂಇಎಸ್‌ ಪುಂಡರು ಮಹಾಮೇಳಾವ್‌ ನಡೆಸಲು ಸಿದ್ಧತೆ ನಡೆಸಿದ್ದು, ಹಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇಂದಿನಿಂದ…

30 mins ago

ಅಧಿವೇಶನದ ಮೊದಲ ದಿನವೇ ಡಿಸಿಎಂ ಡಿ.ಕೆ.ಶಿವಕುಮಾರ್‌ ಗೈರು

ಬೆಂಗಳೂರು: ಇಂದಿನಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಿದೆ. ಅಧಿವೇಶನದ ಮೊದಲ ದಿನವೇ ಡಿಸಿಎಂ ಡಿ.ಕೆ.ಶಿವಕುಮಾರ್‌ ಗೈರಾಗಿದ್ದಾರೆ. ಇಂದಿನಿಂದ ಡಿಸೆಂಬರ್.‌19ರವರೆಗೆ ಅಧಿವೇಶನ…

1 hour ago

ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಮುಗಿಬೀಳಲು ವಿಪಕ್ಷಗಳು ಸಜ್ಜು

ಬೆಂಗಳೂರು: ನಾಯಕತ್ವ ಬದಲಾವಣೆ ಗೊಂದಲ, ಸರ್ಕಾರದಲ್ಲಿ ಶೇಕಡಾ.63 ರ್ಷಟು ಕಮಿಷನ್‌ ಕುರಿತು ಉಪಲೋಕಾಯುಕ್ತರ ಹೇಳಿಕೆ, ವಿವಿಧ ಇಲಾಖೆಗಳಲ್ಲಿ ನಡೆದಿರುವ ಭ್ರಷ್ಟಾಚಾರ…

1 hour ago

ಕಾವೇರಿ ನದಿ ಪಾತ್ರಕ್ಕೆ ಮಾರಕವಾದ ಪ್ರವಾಸೋದ್ಯಮ

ರಾಜ್ಯದಲ್ಲಿ ರಿಯಲ್ ಎಸ್ಟೇಟ್ ಉದ್ಯಮ ಗರಿಗೆದರಿದ ಬಳಿಕ ಅಲ್ಲಲ್ಲಿ ಕೆರೆ-ಕಟ್ಟೆ, ಸರ್ಕಾರಿ ಜಾಗಗಳ ಒತ್ತುವರಿ ಪ್ರಕರಣ ಮೇಲಿಂದ ಮೇಲೆ ಭಾರೀ…

2 hours ago