ಮನರಂಜನೆ

ತಮಿಳು, ಮಲಯಾಳಂ ಆಯ್ತು; ಇದೀಗ ತೆಲುಗಿಗೆ ಹೊರಟ KVN ಪ್ರೊಡಕ್ಷನ್ಸ್

ಕನ್ನಡದ ಜನಪ್ರಿಯ ನಿರ್ಮಾಣ ಮತ್ತು ವಿತರಣಾ ಸಂಸ್ಥೆಯಾದ ಕೆವಿಎನ್‍ ಪ್ರೊಡಕ್ಷನ್ಸ್, ಸದ್ಯ ಕನ್ನಡವಲ್ಲದೆ ತಮಿಳು ಮತ್ತು ಮಲಯಾಳಂನಲ್ಲಿ ಚಿತ್ರಗಳನ್ನು ನಿರ್ಮಿಸುತ್ತಿದೆ. ಇದೀಗ ತೆಲುಗು ಚಿತ್ರರಂಗಕ್ಕೂ KVN ಪ್ರೊಡಕ್ಷನ್ಸ್ ಸಂಸ್ಥೆಯು ಕಾಲಿಟ್ಟಿದ್ದು, ಚಿರಂಜೀವಿ ಅಭಿನಯದ ಚಿತ್ರವೊಂದನ್ನು ಸದ್ಯದಲ್ಲೇ ನಿರ್ಮಿಸಲಿದೆ ಎಂಬ ಮಾತೊಂದು ಕೇಳಿ ಬರುತ್ತಿದೆ.

ಹೌದು, ಟಾಲಿವುಡ್‍ಗೆ ಎಂಟ್ರಿ ಕೊಡುವುದಕ್ಕೆ KVN ಪ್ರೊಡಕ್ಷನ್ಸ್ ಸಂಸ್ಥೆಯು ಸಜ್ಜಾಗಿದ್ದು, ಸಂಸ್ಥೆಯ ಮೊದಲ ಚಿತ್ರದಲ್ಲಿ ಚಿರಂಜೀವಿ ನಟಿಸಲಿದ್ದಾರಂತೆ. ಇನ್ನು, ಚಿರಂಜೀವಿ ಅಭಿನಯದಲ್ಲಿ ‘ವಾಲ್ಟರ್ ವೀರಯ್ಯ’ ಎಂಬ ಚಿತ್ರವನ್ನು ನಿರ್ದೇಶಿಸಿದ್ದ ಬಾಬಿ ಕೊಲ್ಲಿ, ಈ ಚಿತ್ರವನ್ನು ನಿರ್ದೇಶಿಸಲಿದ್ದಾರೆ. ಸದ್ಯಕ್ಕೆ ಚಿತ್ರದ ಸ್ಕ್ರಿಪ್ಟ್ ಕೆಲಸಗಳು ನಡೆಯುತ್ತಿದ್ದು, ಆಗಸ್ಟ್.15ರಂದು ಚಿತ್ರದ ಅಧಿಕೃತ ಘೋಷಣೆ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಇದಕ್ಕೂ ಮೊದಲು, KVN ಪ್ರೊಡಕ್ಷನ್ಸ್ ವೆಂಕಟ್‍ನಾರಾಯಣ್‍, ಈ ವರ್ಷದ ಆರಂಭದಲ್ಲಿ ಮಲಯಾಳಂನಲ್ಲಿ ಚಿತ್ರವೊಂದನ್ನು ನಿರ್ಮಿಸುವುದಕ್ಕೆ ಹೆಜ್ಜೆ ಇಟ್ಟಿದ್ದಾರೆ. ಈ ಚಿತ್ರವನ್ನು ಅವರು ತೆಸ್ಪಿಯನ್ ಫಿಲ್ಮ್ಸ್ ಜೊತೆಗೆ ಸೇರಿ ಜಂಟಿಯಾಗಿ ನಿರ್ಮಿಸುತ್ತಿದ್ದಾರೆ. ಈ ಚಿತ್ರವನ್ನು ಚಿದಂಬರಂ ನಿರ್ದೇಶನ ಮಾಡುತ್ತಿದ್ದಾರೆ. ಕಳೆದ ವರ್ಷ ಮಲಯಾಳಂನಲ್ಲಿ ಬಿಡುಗಡೆಯಾದ ಅತ್ಯಂತ ಯಶಸ್ವಿ ಚಿತ್ರ ‘ಮಂಜುಮ್ಮೆಲ್ ಬಾಯ್ಸ್’ ನಿರ್ಮಿಸಿದ್ದು, ಇದೇ ಚಿದಂಬರಂ. ಇನ್ನು, ‘ರೋಮಾಂಚನಂ’, ‘ಆವೇಶಂ’ ಮುಂತಾದ ಚಿತ್ರಗಳಿಗೆ ಕಥೆ ಬರೆದಿರುವ ಜೀತು ಮಾಧವನ್ ಈ ಚಿತ್ರಕ್ಕೆ ಕಥೆ ಬರೆದಿದ್ದಾರೆ.

ಇದಲ್ಲದೆ, ತಮಿಳಿನಲ್ಲಿ ಈ ಸಂಸ್ಥೆಯು, ವಿಜಯ್‍ ಅಭಿನಯದಲ್ಲಿ ‘ಜನ ನಾಯಗನ್‍’ ಚಿತ್ರವನ್ನು ನಿರ್ಮಿಸುತ್ತಿದೆ. ವಿನೋದ್‍ ನಿರ್ದೇಶನದ ಈ ಚಿತ್ರದಲ್ಲಿ ಚಿತ್ರದಲ್ಲಿ ವಿಜಯ್‍ ಜೊತೆಗೆ ಪೂಜಾ ಹೆಗ್ಡೆ, ಬಾಬ್ಬಿ ಡಿಯೋಲ್‍, ಗೌತಮ್‍ ಮೆನನ್, ಪ್ರಕಾಶ್‍ ರೈ, ಪ್ರಿಯಾಮಣಿ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಸತ್ಯನ್‍ ಸೂರ್ಯನ್‍ ಛಾಯಾಗ್ರಹಣ ಮತ್ತು ಅನಿರುದ್ಧ್ ರವಿಚಂದರ್ ಅವರ ಸಂಗೀತವಿದೆ.

ಕನ್ನಡದಲ್ಲಂತೂ KVN ಪ್ರೊಡಕ್ಷನ್ಸ್ನ ವೆಂಕಟ್‍ನಾರಾಯಣ್‍ ಎರಡು ಬಿಗ್‍ ಬಜೆಟ್‍ ಚಿತ್ರಗಳನ್ನು ನಿರ್ಮಿಸುತ್ತಿದ್ದಾರೆ. ಈ ಪೈಕಿ ಮೊದಲನೆಯದು ಧ್ರುವ ಸರ್ಜಾ ಅಭಿನಯದ ‘ಕೆಡಿ – ದಿ ಡೆವಿಲ್‍’. ‘ಜೋಗಿ’ ಪ್ರೇಮ್‍ ನಿರ್ದೇಶನದ ಈ ಚಿತ್ರವು ಅಕ್ಟೋಬರ್‌ನಲ್ಲಿ ಬಿಡುಗಡೆಯಾಗಲಿದೆ. ಇನ್ನು, ಯಶ್‍ ಅಭಿನಯದ ‘ಟಾಕ್ಸಿಕ್‍’ ಚಿತ್ರದ ಕೆಲಸಗಳು ಭರದಿಂದ ಸಾಗಿದ್ದು, ಚಿತ್ರವು ಮುಂದಿನ ವರ್ಷ ಬಿಡುಗಡೆಯಾಗಲಿದೆ.

ಆಂದೋಲನ ಡೆಸ್ಕ್

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

9 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

9 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

20 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

20 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

20 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

20 hours ago