ಮನರಂಜನೆ

‘ಐ ಆ್ಯಮ್ ಕಮಿಂಗ್…’ ಅಂತ ಬರ್ತಿದ್ದಾರೆ ಶಿವರಾಜ್‌ಕುಮಾರ್

ಶಿವರಾಜಕುಮಾರ್ ಹುಟ್ಟುಹಬ್ಬಕ್ಕೆ ಹಲವು ಚಿತ್ರಗಳ ಟೀಸರ್ ಮತ್ತು ಪೋಸ್ಟರ್‍ಗಳು ಬಿಡುಗಡೆಯಾಗಿವೆ. ಈ ಮಧ್ಯೆ, ಶಿವರಾಜಕುಮಾರ್‍ ಅಭಿನಯದ 131ನೇ ಚಿತ್ರದ ಟೀಸರ್ ಮತ್ತು ಮೊದಲ ನೋಟವೂ ಬಿಡುಗಡೆಯಾಗಿದೆ.

ಈ ಹಿಂದೆ ಕನ್ನಡ ಚಿತ್ರರಂಗಕ್ಕೆ ರಾಮ್ ಗೋಪಾಲ್ ವರ್ಮಾ ಅವರನ್ನು ಕರೆ ತಂದು, ಅವರಿಂದ ಶಿವರಾಜಕುಮಾರ್‍ ಅಭಿನಯದಲ್ಲಿ ‘ಕಿಲ್ಲಿಂಗ್‍ ವೀರಪ್ಪನ್‍’ ಚಿತ್ರವನ್ನು ಮಾಡಿಸಿದ ಸುಶೀರ್‍, ಈಗ ಶಿವರಾಜಕುಮಾರ್ ಅಭಿನಯದ ಹೊಸ ಚಿತ್ರವೊಂದನ್ನು ನಿರ್ಮಿಸುತ್ತಿದ್ದು, ಕಾರ್ತಿಕ್ ಅದ್ವೈತ್ ನಿರ್ದೇಶನ ಮಾಡುತ್ತಿದ್ದಾರೆ.

ಮೂರು ನಿಮಿಷ 49 ಸೆಕೆಂಡ್‍ನ ಟೀಸರ್‍ನ ವಿಶೇಷತೆಯೆಂದರೆ, ಎಲ್ಲೂ ಶಿವರಾಜಕುಮಾರ್‍ ಕಾಣುವುದಿಲ್ಲ. ಪೊಲೀಸ್‍ ಸ್ಟೇಶನ್‍ನಲ್ಲಿ ಚಿತ್ರೀಕರಣಗೊಂಡಿರುವ ಈ ಟೀಸರ್‍ನಲ್ಲಿ ಅಚ್ಯುತ್‍ ಕುಮಾರ್‍, ರವೀಂದ್ರ ವಿಜಯ್‍ ಮುಂತಾದವರು ನಟಿಸಿದ್ದಾರೆ. ರೌಡಿಯೊಬ್ಬನ ಕುರಿತು ಅಚ್ಯುತ್ ಕುಮಾರ್ ವರ್ಣನೆ ಮಾಡುವ ಮತ್ತು ಆತನ ಸ್ಕೆಚ್‍ ಸಿದ್ಧಪಡಿಸುವ ಈ ಟೀಸರ್‍ನಲ್ಲಿ ಮಾತಿನಲ್ಲಿ ಶಿವರಾಜಕುಮಾರ್ ಅವರಿಗೆ ಬಿಲ್ಡಪ್‍ ನೀಡಲಾಗಿದೆ. ಲಾಂಗನ್ನು ಲಾಂಗೆಸ್ಟ್ ಟೈಮ್‍ ಹಿಡಿದಿರುವ ವ್ಯಕ್ತಿ ಎಂಬ ವಿಷಯ ಪ್ರಸ್ತಾಪವಾಗಲಿದ್ದು, ‘ಓಂ’ ಮತ್ತು ‘ಜೋಗಿ’ ಚಿತ್ರಗಳನ್ನು ನೆನಪಿಸುತ್ತದೆ. ‘ಐ ಆ್ಯಮ್ ಕಮಿಂಗ್’ ಎಂದು ಶಿವರಾಜಕುಮಾರ್ ಧ್ವನಿ ಮತ್ತು ಸ್ಕೆಚ್ ಬರುವ ಮೂಲಕ ಈ ಟೀಸರ್ ಅಂತ್ಯವಾಗುತ್ತದೆ.

ತಮಿಳಿನಲ್ಲಿ ವಿಕ್ರಂ ಪ್ರಭು ಅಭಿನಯದ ‘ಪಾಯುಮ್ ಒಲಿ ನೀ ಎನಕ್ಕು’ ಚಿತ್ರವನ್ನು ನಿರ್ದೇಶಿಸಿದ್ದ ಕಾರ್ತಿಕ್ ಅದ್ವೈತ್, ಈ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಇದೊಂದು ಆ್ಯಕ್ಷನ್ ಥ್ರಿಲ್ಲರ್ ಚಿತ್ರವಾಗಿದ್ದು, ಶಿವಣ್ಣ ವಿಭಿನ್ನ ಲುಕ್‍ ಮತ್ತು ವಿಭಿನ್ನ ಪಾತ್ರದಲ್ಲಿ ಕಾಣಸಿಕೊಳ್ಳಲಿದ್ದಾರೆ. ಆಗಸ್ಟ್ ತಿಂಗಳಲ್ಲಿ ಮುಹೂರ್ತ ನಡೆಯಲಿದೆ.

ಈ ಚಿತ್ರಕ್ಕೆ ‘ದೇವ’ ಎಂಬ ಹೆಸರು ಇಡುವ ಸಾಧ್ಯತೆ ಇದ್ದು, ಸಿ.ಎಸ್ ಸಂಗೀತ ಮತ್ತು ಎ.ಜೆ ಶೆಟ್ಟಿ ಛಾಯಾಗ್ರಹಣವಿದೆ. ಭುವನೇಶ್ವರಿ ಪ್ರೊಡಕ್ಷನ್ ಸಂಸ್ಥೆಯಡಿ ಎಸ್.ಎನ್. ರೆಡ್ಡಿ ಹಾಗೂ ಸುಧೀರ್ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.

ಭೂಮಿಕಾ

Recent Posts

ಕೇಂದ್ರ ಬಜೆಟ್‌ | ಯಾವುದು ಅಗ್ಗ, ಯಾವುದು ದುಬಾರಿ ?

ಹೊಸದಿಲ್ಲಿ : ಹಲವು ಉತ್ಪನ್ನಗಳ ಮೇಲಿನ ತೆರಿಗೆಯನ್ನು ಇಳಿಕೆ ಮಾಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಆಯವ್ಯಯದಲ್ಲಿ…

7 mins ago

ಕರ್ನಾಟಕ ವಿರೋಧಿ ಬಜೆಟ್‌ : ಎಚ್‌ಸಿಎಂ ವ್ಯಂಗ್ಯ

ಬೆಂಗಳೂರು : ಹಣಕಾಸು ತಜ್ಞೆ ಅಲ್ಲದ ಕೇಂದ್ರದ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸುತ್ತಿರುವ ೯ನೇ ಕಳಪೆ ಬಜೆಟ್ ಇದಾಗಿದೆ.…

14 mins ago

ಸರ್ಕಾರ ಮಕ್ಕಳಿಗೆ ವೈಚಾರಿಕ ಶಿಕ್ಷಣ ನೀಡಲಿ: ಪ್ರೊ.ಕೆ.ಎಸ್ ಭಗವಾನ್

ಮೈಸೂರು : ಸರ್ಕಾರ ಸರ್ಕಾರಿ ಶಾಲೆಗಳ ಮುಚ್ಚುವ ಬದಲು, ಉನ್ನತಿಕರಣಗೊಳಿಸಿ ವೈಚಾರಿಕ ಶಿಕ್ಷಣ ನೀಡುವಂತಗಲಿ ಎಂದು ಚಿಂತಕ ಪ್ರೊ. ಕೆ…

2 hours ago

ಮಂಗನ ಕಾಯಿಲೆಗೆ ಮತ್ತೊಂದು ಬಲಿ

ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಮಂಗನ ಕಾಯಿಲೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಶಿವಮೊಗ್ಗದಲ್ಲಿ ಮಂಗನ ಕಾಯಿಲೆಗೆ ಮತ್ತೋರ್ವ ಬಲಿಯಾಗಿದ್ದಾನೆ. ಈ ಬಗ್ಗೆ…

3 hours ago

ಕೇಂದ್ರ ಬಜೆಟ್‌ನಿಂದ ರಾಜ್ಯಕ್ಕೆ ಯಾವುದೇ ಅನುಕೂಲವಾಗಿಲ್ಲ: ಡಿಸಿಎಂ ಡಿ.ಕೆ.ಶಿ ಆಕ್ರೋಶ

ರಾಮನಗರ: ರಾಜ್ಯಕ್ಕೆ ಇಷ್ಟರ ಮಟ್ಟಿಗೆ ಅನ್ಯಾಯ ಮಾಡುತ್ತಾರೆ ಎಂದು ಯಾರು ಕೂಡ ನಿರೀಕ್ಷೆ ಮಾಡಿರಲಿಲ್ಲ ಎಂದು ಕೇಂದ್ರ ಬಜೆಟ್‌ ಬಗ್ಗೆ…

3 hours ago

ಹನೂರು: ಪಾದಯಾತ್ರಿಕರು ಬಿಸಾಡುವ ಕಸ ಸಂಗ್ರಹಣೆ ಡಬ್ಬ ನಿರ್ಮಾಣ ಕಾಮಗಾರಿಗೆ ಚಾಲನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿರುವ…

6 hours ago