‘ಬಿಗ್ ಬಾಸ್ ಮನೆಯಿಂದ ಹೊರಬಂದ ನಂತರ ನಟಿ ತನಿಷಾ ಕಪ್ಪಂಡ ಯಾವೊಂದು ಹೊಸ ಚಿತ್ರವನ್ನೂ ಒಪ್ಪಿಕೊಂಡಿರಲಿಲ್ಲ. ಒಪ್ಪಿಕೊಂಡಿದ್ದರೂ ಹೆಚ್ಚು ಸುದ್ದಿಯಾಗಿರಿಲಿಲ್ಲ. ಇದೀಗ ತನಿಷಾ, ‘ಪೆನ್ಡ್ರೈವ್’ ಎಂಬ ಚಿತ್ರದಲ್ಲಿ ನಟಿಸುತ್ತಿದ್ದು, ಈ ಚಿತ್ರದ ಶೀರ್ಷಿಕೆ ಅನಾವರಣ ಗುರುವಾರ ನಡೆಯಲಿದೆ.
‘ಪೆನ್ಡ್ರೈವ್’ ಚಿತ್ರವನ್ನು ಲಯನ್ ಆರ್ ವೆಂಕಟೇಶ್ ಮತ್ತು ಲಯನ್ ಎಸ್ ವೆಂಕಟೇಶ್ ಜೊತೆಯಾಗಿ ನಿರ್ಮಿಸುತ್ತಿದ್ದಾರೆ. ಇನ್ನು, ಸೆಬಾಸ್ಟಿಯನ್ ಡೇವಿಡ್ ಈ ಚಿತ್ರದ ನಿರ್ದೇಶಕರು. ಕಥೆ, ಚಿತ್ರಕಥೆಯನ್ನೂ ಅವರೇ ಬರೆದಿದ್ದಾರಂತೆ.
‘ಪೆನ್ಡ್ರೈವ್’ ಎಂದರೆ ತಕ್ಷಣ ನೆನಪಿಗೆ ಬರುವುದು ಪ್ರಜ್ವಲ್ ರೇವಣ್ಣ ಪ್ರಕರಣ. ಈ ಚಿತ್ರಕ್ಕೂ, ಆ ಚಿತ್ರಕ್ಕೂ ಏನಾದರೂ ಸಂಬಂಧಿವಿದ್ದಿರಬಹುದಾ? ಎಂದನಿಸಬಹುದು. ಆದರೆ, ಆ ಪ್ರಕರಣಕ್ಕೂ, ಈ ಚಿತ್ರಕ್ಕೂ ಯಾವುದೇ ಸಂಬಂಧವಿಲ್ಲವಂತೆ. ಚಿತ್ರತಂಸಡದವರು ಹೆಳುವ ಪ್ರಕಾರ ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ. ಈ ಚಿತ್ರವನ್ನು ಮಾಡಬೇಕು ಎನ್ನುವ ಯೋಚನೆ ನಿರ್ದೇಶಕರಿಗೆ ಮೊದಲೇ ಇತ್ತಂತೆ. ಈಗ ಪೆನ್ಡ್ರೈವ್ ವಿಚಾರ ಚರ್ಚೆಯಲ್ಲಿರುವುದರಿಂದ ಈಗ ಚಿತ್ರಕ್ಕೆ ಕೈ ಹಾಕಿದ್ದಾರೆ ಡೇವಿಡ್.
ಈ ಚಿತ್ರದಲ್ಲಿ ತನಿಷಾ ಮಾತ್ರವಲ್ಲ, ರಾಧಿಕಾ, ಸಂಜನಾ ನಾಯ್ಡು, ಅರ್ಚನ, ರೇಣುಕಾ, ಭಾಗ್ಯ, ಗೀತಪ್ರಿಯಾ, ಗೀತಾ ಮುಂತಾದವತರು ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ಜುಲೈ 4ರ ಬೆಳಿಗ್ಗೆ ಈ ಚಿತ್ರದ ಶೀರ್ಷಿಕೆ ಅನಾವರಣ ಆಗಲಿದೆ. ‘ಬಿಗ್ ಬಾಸ್’ ಖ್ಯಾತಿಯ ವರ್ತೂರು ಸಂತೋಷ್ ಶೀರ್ಷಿಕೆ ಅನಾವರಣ ಮಾಡಲಿದ್ದಾರೆ. ಮುಖ್ಯ ಅತಿಥಿಯಾಗಿ ಚಿತ್ರಸಾಹಿತಿ ವಿ. ನಾಗೇಂದ್ರ ಪ್ರಸಾದ್ ಸಹ ಇರಲಿದ್ದಾರೆ.
ಸದ್ಯಕ್ಕೆ ಚಿತ್ರತಂಡ ಚಿತ್ರದ ಬಗ್ಗೆ ಯಾವುದೇ ವಿಷಯವನ್ನೂ ಬಹಿರಂಗಗೊಳಿಸಿಲ್ಲ. ಬಹುಶಃ ಚಿತ್ರದ ಶೀರ್ಷಿಕೆ ಬಿಡುಗಡೆ ಸಮಾರಂಭದಲ್ಲಾದರೂ ಚಿತ್ರದ ಬಗ್ಗೆ ಇನ್ನಷ್ಟು ಮಾಹಿತಿ ಹೊರಬೀಳಬಹುದೇನೋ?
ಅಂದಹಾಗೆ, ಕನ್ನಡದಲ್ಲಿ ಇದೊಂದೇ ‘ಪೆನ್ಡ್ರೈವ್’ ಅಲ್ಲ, ಈ ಹಿಂದೆ ’ಪಾತರಗಿತ್ತಿ’ ಎಂಬ ಚಿತ್ರವನ್ನು ನಿರ್ಮಿಸಿ-ನಿರ್ದೇಶಿಸಿದ್ದ ಕೆರ್ನಳ್ಳಿ ಈಶ್ವರ್ ಸಹ ‘ಪೆನ್ಡ್ರೈವ್’ ಎಂಬ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಇತ್ತೀಚೆಗೆ ಚಿತ್ರದ ಪೋಸ್ಟರ್ ಬಿಡುಗಡೆ ಆಗಿದ್ದು, ಕರಿಕೋಟು ಧರಿಸಿರುವ ಮುಖವಾಡ ಹಾಕಿಕೊಂಡು ಪೆನ್ ಡ್ರೈವ್ ಹಿಡಿದುಕೊಂಡಿರುವುದು ವಿಷಯ ಸಾಕಷ್ಟು ಕುತೂಹಲ ಹೆಚ್ಚಿಸಿದೆ.
ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…
ಬೆಂಗಳೂರು: ಮುಡಾ ಕೇಸ್ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…
ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್ಐಟಿ…
ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…
ಬೆಂಗಳೂರು: ನಟ ದರ್ಶನ್ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಮಧ್ಯೆ ಹಳೆ…