ಮನರಂಜನೆ

‘ಪೆನ್‍ಡ್ರೈವ್’ ಹಿಡಿದು ಬಂದ ತನಿಷಾ ಕುಪ್ಪಂಡ

‘ಬಿಗ್‍ ಬಾಸ್‍ ಮನೆಯಿಂದ ಹೊರಬಂದ ನಂತರ ನಟಿ ತನಿಷಾ ಕಪ್ಪಂಡ ಯಾವೊಂದು ಹೊಸ ಚಿತ್ರವನ್ನೂ ಒಪ್ಪಿಕೊಂಡಿರಲಿಲ್ಲ. ಒಪ್ಪಿಕೊಂಡಿದ್ದರೂ ಹೆಚ್ಚು ಸುದ್ದಿಯಾಗಿರಿಲಿಲ್ಲ. ಇದೀಗ ತನಿಷಾ, ‘ಪೆನ್‍ಡ್ರೈವ್’ ಎಂಬ ಚಿತ್ರದಲ್ಲಿ ನಟಿಸುತ್ತಿದ್ದು, ಈ ಚಿತ್ರದ ಶೀರ್ಷಿಕೆ ಅನಾವರಣ ಗುರುವಾರ ನಡೆಯಲಿದೆ.

‘ಪೆನ್‍ಡ್ರೈವ್‍’ ಚಿತ್ರವನ್ನು ಲಯನ್‍ ಆರ್ ವೆಂಕಟೇಶ್‍ ಮತ್ತು ಲಯನ್‍ ಎಸ್‍ ವೆಂಕಟೇಶ್‍ ಜೊತೆಯಾಗಿ ನಿರ್ಮಿಸುತ್ತಿದ್ದಾರೆ. ಇನ್ನು, ಸೆಬಾಸ್ಟಿಯನ್‍ ಡೇವಿಡ್‍ ಈ ಚಿತ್ರದ ನಿರ್ದೇಶಕರು. ಕಥೆ, ಚಿತ್ರಕಥೆಯನ್ನೂ ಅವರೇ ಬರೆದಿದ್ದಾರಂತೆ.

‘ಪೆನ್‍ಡ್ರೈವ್‍’ ಎಂದರೆ ತಕ್ಷಣ ನೆನಪಿಗೆ ಬರುವುದು ಪ್ರಜ್ವಲ್‍ ರೇವಣ್ಣ ಪ್ರಕರಣ. ಈ ಚಿತ್ರಕ್ಕೂ, ಆ ಚಿತ್ರಕ್ಕೂ ಏನಾದರೂ ಸಂಬಂಧಿವಿದ್ದಿರಬಹುದಾ? ಎಂದನಿಸಬಹುದು. ಆದರೆ, ಆ ಪ್ರಕರಣಕ್ಕೂ, ಈ ಚಿತ್ರಕ್ಕೂ ಯಾವುದೇ ಸಂಬಂಧವಿಲ್ಲವಂತೆ. ಚಿತ್ರತಂಸಡದವರು ಹೆಳುವ ಪ್ರಕಾರ ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ. ಈ ಚಿತ್ರವನ್ನು ಮಾಡಬೇಕು ಎನ್ನುವ ಯೋಚನೆ ನಿರ್ದೇಶಕರಿಗೆ ಮೊದಲೇ ಇತ್ತಂತೆ. ಈಗ ಪೆನ್ಡ್ರೈವ್ ವಿಚಾರ ಚರ್ಚೆಯಲ್ಲಿರುವುದರಿಂದ ಈಗ ಚಿತ್ರಕ್ಕೆ ಕೈ ಹಾಕಿದ್ದಾರೆ ಡೇವಿಡ್‍.

ಈ ಚಿತ್ರದಲ್ಲಿ ತನಿಷಾ ಮಾತ್ರವಲ್ಲ, ರಾಧಿಕಾ, ಸಂಜನಾ ನಾಯ್ಡು, ಅರ್ಚನ, ರೇಣುಕಾ, ಭಾಗ್ಯ, ಗೀತಪ್ರಿಯಾ, ಗೀತಾ ಮುಂತಾದವತರು ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ಜುಲೈ 4ರ ಬೆಳಿಗ್ಗೆ ಈ ಚಿತ್ರದ ಶೀರ್ಷಿಕೆ ಅನಾವರಣ ಆಗಲಿದೆ. ‘ಬಿಗ್ ಬಾಸ್’ ಖ್ಯಾತಿಯ ವರ್ತೂರು ಸಂತೋಷ್ ಶೀರ್ಷಿಕೆ ಅನಾವರಣ ಮಾಡಲಿದ್ದಾರೆ. ಮುಖ್ಯ ಅತಿಥಿಯಾಗಿ ಚಿತ್ರಸಾಹಿತಿ ವಿ. ನಾಗೇಂದ್ರ ಪ್ರಸಾದ್‍ ಸಹ ಇರಲಿದ್ದಾರೆ.

ಸದ್ಯಕ್ಕೆ ಚಿತ್ರತಂಡ ಚಿತ್ರದ ಬಗ್ಗೆ ಯಾವುದೇ ವಿಷಯವನ್ನೂ ಬಹಿರಂಗಗೊಳಿಸಿಲ್ಲ. ಬಹುಶಃ ಚಿತ್ರದ ಶೀರ್ಷಿಕೆ ಬಿಡುಗಡೆ ಸಮಾರಂಭದಲ್ಲಾದರೂ ಚಿತ್ರದ ಬಗ್ಗೆ ಇನ್ನಷ್ಟು ಮಾಹಿತಿ ಹೊರಬೀಳಬಹುದೇನೋ?

ಅಂದಹಾಗೆ, ಕನ್ನಡದಲ್ಲಿ ಇದೊಂದೇ ‘ಪೆನ್‍ಡ್ರೈವ್‍’ ಅಲ್ಲ, ಈ ಹಿಂದೆ ’ಪಾತರಗಿತ್ತಿ’ ಎಂಬ ಚಿತ್ರವನ್ನು ನಿರ್ಮಿಸಿ-ನಿರ್ದೇಶಿಸಿದ್ದ ಕೆರ್ನಳ್ಳಿ ಈಶ್ವರ್‍ ಸಹ ‘ಪೆನ್‍ಡ್ರೈವ್‍’ ಎಂಬ ಚಿತ್ರವನ್ನು ನಿರ್ದೇಶಿಸುತ್ತಿದ್‍ದಾರೆ. ಇತ್ತೀಚೆಗೆ ಚಿತ್ರದ ಪೋಸ್ಟರ್‍ ಬಿಡುಗಡೆ ಆಗಿದ್ದು, ಕರಿಕೋಟು ಧರಿಸಿರುವ ಮುಖವಾಡ ಹಾಕಿಕೊಂಡು ಪೆನ್ ಡ್ರೈವ್ ಹಿಡಿದುಕೊಂಡಿರುವುದು ವಿಷಯ ಸಾಕಷ್ಟು ಕುತೂಹಲ ಹೆಚ್ಚಿಸಿದೆ.

ಭೂಮಿಕಾ

Recent Posts

ರೈತರ ನಿದ್ದೆಗೆಡಿಸಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಕಿಕ್ಕೇರಿ: ಹೋಬಳಿಯ ಗೊಲ್ಲರಕೊಪ್ಪಲು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಳೆದ ಹಲವು ದಿನಗಳಿಂದ ರೈತರಿಗೆ ಆತಂಕ ಸೃಷ್ಟಿಸಿ ಜಾನುವಾರುಗಳು ಹಾಗೂ ಸಾಕು…

9 hours ago

ಶಿವಶಂಕರಪ್ಪ ಸಾಹುಕಾರ್‌ಗೆ ಹೊಸ ಕಾನೂನು ಸಂಕಷ್ಟ

ಬೆಂಗಳೂರು: ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಹುದ್ದೆಯಿಂದ ಅಮಾನತುಗೊಳಿಸಿದ ಬೆನ್ನಲ್ಲೇ ಈ ಹೊಸ ಕಾನೂನು ಸಂಕಷ್ಟ ಎದುರಾಗಿದೆ.…

12 hours ago

ಗೋಪಾಲಸ್ವಾಮಿ ಬೆಟ್ಟ: ಕೊನೆಗೂ ಭಕ್ತರಿಗೆ ಸಿಕ್ಕಿತು ನೆರಳು!

ಬೆಟ್ಟದಲ್ಲಿ ಬಸ್ ನಿಲ್ದಾಣದ ಉದ್ಘಾಟನೆ ನೆರವೇರಿಸಿದ ಶಾಸಕ; ಸಮಸ್ಯೆ ಕುರಿತು ಬೆಳಕು ಚೆಲ್ಲಿದ್ದ ‘ಆಂದೋಲನ’ ಗುಂಡ್ಲುಪೇಟೆ: ತಾಲ್ಲೂಕಿನ ಹಿಮವದ್ ಗೋಪಾಲಸ್ವಾಮಿ…

16 hours ago

ಓದುಗರ ಪತ್ರ: ಅಧ್ಯಾತ್ಮ ದುರಂತ!

ಅಧ್ಯಾತ್ಮ ದುರಂತ! ಲೌಕಿಕ ಬದುಕಿನ ಆಶೆ ಆಮಿಷಗಳ ಸೆರೆಮನೆಯಿಂದ ಬಿಡಿಸಿಕೊಳುವ ಸನ್ಮಾರ್ಗವನು ಅಧ್ಯಾತ್ಮವೆನ್ನುವರು ಪ್ರಾಜ್ಞರು! ಆದರೀಗ ಲೌಕಿಕದ ಆಶೆ ಆಮಿಷಗಳ…

19 hours ago

ಓದುಗರ ಪತ್ರ: ರಸ್ತೆ, ಉದ್ಯಾನಕ್ಕೆ ಎಸ್. ಜಾನಕಿ ಅವರ ಹೆಸರಿಡಿ

ಭಾರತೀಯ ಚಿತ್ರರಂಗದ ಗಾನಕೋಗಿಲೆ ಎಸ್.ಜಾನಕಿ ಅವರ ಸಾಧನೆ ಎಂದೆಂದಿಗೂ ಅಜರಾಮರ. ಅವರ ಹೆಸರನ್ನು ಮುಂದಿನ ಪೀಳಿಗೆಗೂ ಪರಿಚಯಿಸುವ ಮೂಲಕ ಚಿರಸ್ಥಾಯಿಯಾಗಿಸಲು…

19 hours ago

ಓದುಗರ ಪತ್ರ: ಚಾಮರಾಜಪುರಂನಲ್ಲಿ ರೈಲುಗಳ ನಿಲುಗಡೆಯಾಗಲಿ

ಮೈಸೂರಿನ ಅಶೋಕಪುರಂನಿಂದ ಚೆನ್ನೆ ಗೆ ತೆರಳುವ ಚೆನ್ನೆ ನಿಂದ - ಅಶೋಕಪುರಂಗೆ ಆಗಮಿಸುವ ೧೬೫೫೧ ಎಂಜಿಆರ್ ಚೆನ್ನೈಎಕ್ಸ್ ಪ್ರೆಸ್, ೨೦೬೨೪…

19 hours ago