ಮನರಂಜನೆ

‘ಪೆನ್‍ಡ್ರೈವ್’ ಹಿಡಿದು ಬಂದ ತನಿಷಾ ಕುಪ್ಪಂಡ

‘ಬಿಗ್‍ ಬಾಸ್‍ ಮನೆಯಿಂದ ಹೊರಬಂದ ನಂತರ ನಟಿ ತನಿಷಾ ಕಪ್ಪಂಡ ಯಾವೊಂದು ಹೊಸ ಚಿತ್ರವನ್ನೂ ಒಪ್ಪಿಕೊಂಡಿರಲಿಲ್ಲ. ಒಪ್ಪಿಕೊಂಡಿದ್ದರೂ ಹೆಚ್ಚು ಸುದ್ದಿಯಾಗಿರಿಲಿಲ್ಲ. ಇದೀಗ ತನಿಷಾ, ‘ಪೆನ್‍ಡ್ರೈವ್’ ಎಂಬ ಚಿತ್ರದಲ್ಲಿ ನಟಿಸುತ್ತಿದ್ದು, ಈ ಚಿತ್ರದ ಶೀರ್ಷಿಕೆ ಅನಾವರಣ ಗುರುವಾರ ನಡೆಯಲಿದೆ.

‘ಪೆನ್‍ಡ್ರೈವ್‍’ ಚಿತ್ರವನ್ನು ಲಯನ್‍ ಆರ್ ವೆಂಕಟೇಶ್‍ ಮತ್ತು ಲಯನ್‍ ಎಸ್‍ ವೆಂಕಟೇಶ್‍ ಜೊತೆಯಾಗಿ ನಿರ್ಮಿಸುತ್ತಿದ್ದಾರೆ. ಇನ್ನು, ಸೆಬಾಸ್ಟಿಯನ್‍ ಡೇವಿಡ್‍ ಈ ಚಿತ್ರದ ನಿರ್ದೇಶಕರು. ಕಥೆ, ಚಿತ್ರಕಥೆಯನ್ನೂ ಅವರೇ ಬರೆದಿದ್ದಾರಂತೆ.

‘ಪೆನ್‍ಡ್ರೈವ್‍’ ಎಂದರೆ ತಕ್ಷಣ ನೆನಪಿಗೆ ಬರುವುದು ಪ್ರಜ್ವಲ್‍ ರೇವಣ್ಣ ಪ್ರಕರಣ. ಈ ಚಿತ್ರಕ್ಕೂ, ಆ ಚಿತ್ರಕ್ಕೂ ಏನಾದರೂ ಸಂಬಂಧಿವಿದ್ದಿರಬಹುದಾ? ಎಂದನಿಸಬಹುದು. ಆದರೆ, ಆ ಪ್ರಕರಣಕ್ಕೂ, ಈ ಚಿತ್ರಕ್ಕೂ ಯಾವುದೇ ಸಂಬಂಧವಿಲ್ಲವಂತೆ. ಚಿತ್ರತಂಸಡದವರು ಹೆಳುವ ಪ್ರಕಾರ ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ. ಈ ಚಿತ್ರವನ್ನು ಮಾಡಬೇಕು ಎನ್ನುವ ಯೋಚನೆ ನಿರ್ದೇಶಕರಿಗೆ ಮೊದಲೇ ಇತ್ತಂತೆ. ಈಗ ಪೆನ್ಡ್ರೈವ್ ವಿಚಾರ ಚರ್ಚೆಯಲ್ಲಿರುವುದರಿಂದ ಈಗ ಚಿತ್ರಕ್ಕೆ ಕೈ ಹಾಕಿದ್ದಾರೆ ಡೇವಿಡ್‍.

ಈ ಚಿತ್ರದಲ್ಲಿ ತನಿಷಾ ಮಾತ್ರವಲ್ಲ, ರಾಧಿಕಾ, ಸಂಜನಾ ನಾಯ್ಡು, ಅರ್ಚನ, ರೇಣುಕಾ, ಭಾಗ್ಯ, ಗೀತಪ್ರಿಯಾ, ಗೀತಾ ಮುಂತಾದವತರು ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ಜುಲೈ 4ರ ಬೆಳಿಗ್ಗೆ ಈ ಚಿತ್ರದ ಶೀರ್ಷಿಕೆ ಅನಾವರಣ ಆಗಲಿದೆ. ‘ಬಿಗ್ ಬಾಸ್’ ಖ್ಯಾತಿಯ ವರ್ತೂರು ಸಂತೋಷ್ ಶೀರ್ಷಿಕೆ ಅನಾವರಣ ಮಾಡಲಿದ್ದಾರೆ. ಮುಖ್ಯ ಅತಿಥಿಯಾಗಿ ಚಿತ್ರಸಾಹಿತಿ ವಿ. ನಾಗೇಂದ್ರ ಪ್ರಸಾದ್‍ ಸಹ ಇರಲಿದ್ದಾರೆ.

ಸದ್ಯಕ್ಕೆ ಚಿತ್ರತಂಡ ಚಿತ್ರದ ಬಗ್ಗೆ ಯಾವುದೇ ವಿಷಯವನ್ನೂ ಬಹಿರಂಗಗೊಳಿಸಿಲ್ಲ. ಬಹುಶಃ ಚಿತ್ರದ ಶೀರ್ಷಿಕೆ ಬಿಡುಗಡೆ ಸಮಾರಂಭದಲ್ಲಾದರೂ ಚಿತ್ರದ ಬಗ್ಗೆ ಇನ್ನಷ್ಟು ಮಾಹಿತಿ ಹೊರಬೀಳಬಹುದೇನೋ?

ಅಂದಹಾಗೆ, ಕನ್ನಡದಲ್ಲಿ ಇದೊಂದೇ ‘ಪೆನ್‍ಡ್ರೈವ್‍’ ಅಲ್ಲ, ಈ ಹಿಂದೆ ’ಪಾತರಗಿತ್ತಿ’ ಎಂಬ ಚಿತ್ರವನ್ನು ನಿರ್ಮಿಸಿ-ನಿರ್ದೇಶಿಸಿದ್ದ ಕೆರ್ನಳ್ಳಿ ಈಶ್ವರ್‍ ಸಹ ‘ಪೆನ್‍ಡ್ರೈವ್‍’ ಎಂಬ ಚಿತ್ರವನ್ನು ನಿರ್ದೇಶಿಸುತ್ತಿದ್‍ದಾರೆ. ಇತ್ತೀಚೆಗೆ ಚಿತ್ರದ ಪೋಸ್ಟರ್‍ ಬಿಡುಗಡೆ ಆಗಿದ್ದು, ಕರಿಕೋಟು ಧರಿಸಿರುವ ಮುಖವಾಡ ಹಾಕಿಕೊಂಡು ಪೆನ್ ಡ್ರೈವ್ ಹಿಡಿದುಕೊಂಡಿರುವುದು ವಿಷಯ ಸಾಕಷ್ಟು ಕುತೂಹಲ ಹೆಚ್ಚಿಸಿದೆ.

ಭೂಮಿಕಾ

Recent Posts

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಈ ಬಾರಿ ಮೆರವಣಿಗೆಗೆ ಸೇನೆಗೆ ಆಹ್ವಾನ ಎಂದ ಸಿಎಂ ಡಿಕೆಶಿ

ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್‌…

4 hours ago

ಮೈಕ್ರೋ ಫೈನಾನ್ಸ್‌ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…

7 hours ago

ರಾಜ್ಯದ 101 ತಾಲ್ಲೂಕುಗಳು ಬರ ತಾಲ್ಲೂಕುಗಳೆಂದು ಘೋಷಣೆ: ಡಿಸಿಎಂ ಜಿ.ಪರಮೇಶ್ವರ್‌

ಮೈಸೂರು: ರೈತರಿಗೆ ಬರ ಪರಿಹಾರ ನೀಡುವ ವಿಚಾರವಾಗಿ ಮಾತನಾಡಿರುವ ಡಿಸಿಎಂ ಪರಮೇಶ್ವರ್‌, ರಾಜ್ಯದ 101 ತಾಲೂಕುಗಳನ್ನು ಬರ ತಾಲೂಕುಗಳೆಂದು ಘೋಷಣೆ…

7 hours ago

ಓದುಗರ ಪತ್ರ: ಉಳುವ ‘ಯೋಗಿ’ ಕೂಗಿಗೆ ಸರ್ಕಾರ ತರ್ತಾಗಿ ಸ್ಪಂದಿಸಲಿ

ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…

8 hours ago

ಓದುಗರ ಪತ್ರ: ರಾಷ್ಟ್ರಕವಿ ಶ್ಲಾಘನೆಯ ಸ್ಮರಣೆ

೧೯೮೬ರ ಆಗಸ್ಟ್ ೨೯ರಂದು (ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನ ಮಠದ ೨೩ ನೇ ಮಠಾಧಿಪತಿ) ಶಿವರಾತ್ರಿ ರಾಜೇಂದ್ರ ಶ್ರೀಗಳ ಅಮೃತ ಮಹೋತ್ಸವದ…

8 hours ago

ಓದುಗರ ಪತ್ರ: ಸೈಬರ್ ವಂಚನೆ: ಜಾಗೃತಿಯೂ ಫಲ ನೀಡುತ್ತಿಲ್ಲವಲ್ಲ…

ರಾಜ್ಯದಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ಏಳು ತಿಂಗಳ ಅವಧಿಯಲ್ಲಿ ಸುಮಾರು ರೂ.೬೦೦ ಕೋಟಿಯಷ್ಟು ಹಣ ಸೈಬರ್ ವಂಚಕರ…

8 hours ago