ಕಳೆದ ವರ್ಷ ‘ನಟ್ವರ್ ಲಾಲ್’ ಚಿತ್ರದಲ್ಲಿ ನಟಿಸಿದ್ದ ತನುಷ್ ಶಿವಣ್ಣ ಈಗ ಹೊಸ ಚಿತ್ರದೊಂದಿಗೆ ಬಂದಿದ್ದಾರೆ. ಈ ಬಾರಿ ಅವರು ‘ಬಾಸ್’ ಎಂಬ ಚಿತ್ರದಲ್ಲಿ ನಟಿಸಿದ್ದು, ಚಿತ್ರೀಕರಣ ಸಹ ಮುಗಿದಿದೆ. ಎಲ್ಲಾ ಅಂದುಕಕೊಂಡಂತೆ ಆದರೆ, ಡಿಸೆಂಬರ್ ತಿಂಗಳಲ್ಲೇ ಚಿತ್ರ ಬಿಡುಗಡೆಯಾಗಲಿದೆ.
‘ಬಾಸ್’ ಚಿತ್ರದ ಪೋಸ್ಟರ್ ನೋಡುತ್ತಿದ್ದರೆ, ದರ್ಶನ್ ಪ್ರಕರಣಕ್ಕೆ ಸಂಬಂಧವಿರುವ ಅನುಮಾನ ಬರುತ್ತದೆ. ಮೊದಲಿಗೆ ಅಭಿಮಾನಿಗಳು ದರ್ಶನ್ ಅವರನ್ನು ‘ಬಾಸ್’ ಎಂದು ಕರೆಯುತ್ತಾರೆ. ಎರಡನೆಯದಾಗಿ, ಚಿತ್ರವು ನೈಜ ಘಟನೆಯನ್ನಾಧರಿಸಿದ ಕೊಲೆ ಪ್ರಕರಣದ ಸುತ್ತ ಸುತ್ತುತ್ತದೆ. ಇಲ್ಲೂ ನಾಯಕ ಒಬ್ಬ ಸೆಲೆಬ್ರಿಟಿಯಾಗಿದ್ದು, ಆತನ ಅಭಿಮಾನಿಗಳು ‘ಬಾಸ್’ ಎಂದು ಸಂಬೋಧಿಸುತ್ತಿರುತ್ತಾರಂತೆ. ಹಾಗಾಗಿ, ದರ್ಶನ್ ಪ್ರಕರಣವನ್ನು ಆಧರಿಸಿ ಚಿತ್ರ ಮಾಡಿರುವ ಸಾಧ್ಯತೆ ಇದೆ ಎಂದು ಮೇಲ್ನೋಟಕ್ಕೆ ಅನಿಸುವ ಸಾಧ್ಯತೆ ಇದೆ. ಆದರೆ, ಈ ವಿಷಯವನ್ನು ನಿರ್ದೇಶಕ ಲವ ಬಹಿರಂಗಪಡಿಸುವುದಿಲ್ಲ. ಚಿತ್ರವನ್ನು ನೋಡಿ ಎನ್ನುತ್ತಾರೆ.
ಇದನ್ನು ಓದಿ: ಕನ್ನಡದ ಅತೀ ಹೆಚ್ಚು ಗಳಿಕೆ ಮಾಡಿದ ಚಿತ್ರವಾದ ‘ಕಾಂತಾರ – ಚಾಪ್ಟರ್ 1’
‘ಬಾಸ್’ ಬಗ್ಗೆ ಮಾಹಿತಿ ನೀಡುವ ಅವರು, ‘ಇದೊಂದು ಕ್ರೈಮ್ ಥ್ರಿಲ್ಲರ್ ಆಧಾರಿತ ಚಿತ್ರ. ನಾನೇ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದೇನೆ. ಈಗಾಗಲೇ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರಿನಲ್ಲಿ ಒಂದೇ ಹಂತದಲ್ಲಿ ಚಿತ್ರೀಕರಣ ನಡೆದಿದೆ. ಕೆಲವೇ ದಿನಗಳಲ್ಲಿ ಟೀಸರ್ ಬಿಡುಗಡೆಯಾಗಲಿದೆ. ಡಿಸೆಂಬರ್ ತಿಂಗಳಲ್ಲಿ ತೆರೆಗೆ ತರುವ ಪ್ರಯತ್ನ ನಡೆಯತ್ತಿದೆ. ತನುಷ್ ಶಿವಣ್ಣ ಚಿತ್ರದ ನಾಯಕನಾಗಿ ನಟಿಸಿದ್ದು, ಮೋನಿಕಾ ಗೌಡ ನಾಯಕಿಯಾಗಿ ನಟಿಸಿದ್ದಾರೆ. ಚಿತ್ರಕ್ಕೆ ‘ಸತ್ಯಮೇವ ಜಯತೇ’ ಎಂಬ ಅಡಿಬರಹವಿದೆ’ ಎಂದರು.
ಇದು ನಾನು ನಾಯಕನಾಗಿ ನಟಿಸಿರುವ ಐದನೇ ಚಿತ್ರ ಎಂದು ಮಾತನಾಡಿದ ನಾಯಕ ತನುಷ್ ಶಿವಣ್ಣ, ‘ನಿರ್ದೇಶಕರು ಒಳ್ಳೆಯ ಕಥೆ ಮಾಡಿಕೊಂಡಿದ್ದಾರೆ. ನಾನು ಈ ಚಿತ್ರದಲ್ಲಿ ಸೆಲೆಬ್ರಿಟಿ ಪಾತ್ರ ಮಾಡಿದ್ದೇನೆ. ಚಿತ್ರದಲ್ಲಿ ಎಲ್ಲರೂ ನನ್ನ ‘ಬಾಸ್’ ಎನ್ನುತ್ತಾರೆ’ ಎಂದರು.
ಸಿರಿ ಪ್ರೊಡಕ್ಷನ್ಸ್ ನಿರ್ಮಾಣದ ಈ ಚಿತ್ರಕ್ಕೆ ಡೆವಿ ಸುರೇಶ್ ಸಂಗೀತ ನಿರ್ದೇಶನ, ಶರತ್ ಎನ್.ಆರ್ ಪುರ ಛಾಯಾಗ್ರಹಣ, ಮಹೇಶ್ ರೆಡ್ಡಿ ಸಂಕಲನವಿದೆ. ಚಿತ್ರದಲ್ಲಿ ಸಂದೀಪ್, ವೀರೇನ್ ಕೇಶವ್, ಸುಜನ್ ಶೆಟ್ಟಿ, ‘ದುನಿಯಾ’ ಮಹೇಶ್, ‘ಜೋಶ್’ ಅಕ್ಷಯ್ ಮುಂತಾದವರು ನಟಿಸಿದ್ದಾರೆ.
ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…
ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…
ಬೆಂಗಳೂರು : 2026ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…
ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…
ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…
ಚಾಮರಾಜನಗರ : ರಾಜ್ಯದಲ್ಲಿ ಬೇಸಿಗೆಯ ತಾಪ ದಿನದಿಂದ ದಿನಕ್ಕೆ ಏರುತ್ತಿರುವ ಬೆನ್ನಲ್ಲೇ, ವರುಣ ದಿಢೀರ್ ಪ್ರತ್ಯಕ್ಷನಾಗಿ ಧರೆಗೆ ತಂಪೆರೆದಿದ್ದಾನೆ. ರಾಜ್ಯದ…