ಮನರಂಜನೆ

‘ಬಾಸ್‍’ ಆಗಿ ಬಂದ ತನುಷ್ ಶಿವಣ್ಣ; ಈ ಚಿತ್ರಕ್ಕೂ ದರ್ಶನ್‍ ಪ್ರಕರಣಕ್ಕೂ ಸಂಬಂಧವಿದೆಯಾ?

ಕಳೆದ ವರ್ಷ ‘ನಟ್ವರ್ ಲಾಲ್‍’ ಚಿತ್ರದಲ್ಲಿ ನಟಿಸಿದ್ದ ತನುಷ್‍ ಶಿವಣ್ಣ ಈಗ ಹೊಸ ಚಿತ್ರದೊಂದಿಗೆ ಬಂದಿದ್ದಾರೆ. ಈ ಬಾರಿ ಅವರು ‘ಬಾಸ್‍’ ಎಂಬ ಚಿತ್ರದಲ್ಲಿ ನಟಿಸಿದ್ದು, ಚಿತ್ರೀಕರಣ ಸಹ ಮುಗಿದಿದೆ. ಎಲ್ಲಾ ಅಂದುಕಕೊಂಡಂತೆ ಆದರೆ, ಡಿಸೆಂಬರ್‍ ತಿಂಗಳಲ್ಲೇ ಚಿತ್ರ ಬಿಡುಗಡೆಯಾಗಲಿದೆ.

‘ಬಾಸ್‍’ ಚಿತ್ರದ ಪೋಸ್ಟರ್ ನೋಡುತ್ತಿದ್ದರೆ, ದರ್ಶನ್‍ ಪ್ರಕರಣಕ್ಕೆ ಸಂಬಂಧವಿರುವ ಅನುಮಾನ ಬರುತ್ತದೆ. ಮೊದಲಿಗೆ ಅಭಿಮಾನಿಗಳು ದರ್ಶನ್‍ ಅವರನ್ನು ‘ಬಾಸ್‍’ ಎಂದು ಕರೆಯುತ್ತಾರೆ. ಎರಡನೆಯದಾಗಿ, ಚಿತ್ರವು ನೈಜ ಘಟನೆಯನ್ನಾಧರಿಸಿದ ಕೊಲೆ ಪ್ರಕರಣದ ಸುತ್ತ ಸುತ್ತುತ್ತದೆ. ಇಲ್ಲೂ ನಾಯಕ ಒಬ್ಬ ಸೆಲೆಬ್ರಿಟಿಯಾಗಿದ್ದು, ಆತನ ಅಭಿಮಾನಿಗಳು ‘ಬಾಸ್‍’ ಎಂದು ಸಂಬೋಧಿಸುತ್ತಿರುತ್ತಾರಂತೆ. ಹಾಗಾಗಿ, ದರ್ಶನ್‍ ಪ್ರಕರಣವನ್ನು ಆಧರಿಸಿ ಚಿತ್ರ ಮಾಡಿರುವ ಸಾಧ್ಯತೆ ಇದೆ ಎಂದು ಮೇಲ್ನೋಟಕ್ಕೆ ಅನಿಸುವ ಸಾಧ್ಯತೆ ಇದೆ. ಆದರೆ, ಈ ವಿಷಯವನ್ನು ನಿರ್ದೇಶಕ ಲವ ಬಹಿರಂಗಪಡಿಸುವುದಿಲ್ಲ. ಚಿತ್ರವನ್ನು ನೋಡಿ ಎನ್ನುತ್ತಾರೆ.

ಇದನ್ನು ಓದಿ: ಕನ್ನಡದ ಅತೀ ಹೆಚ್ಚು ಗಳಿಕೆ ಮಾಡಿದ ಚಿತ್ರವಾದ ‘ಕಾಂತಾರ – ಚಾಪ್ಟರ್ 1’

‘ಬಾಸ್‍’ ಬಗ್ಗೆ ಮಾಹಿತಿ ನೀಡುವ ಅವರು, ‘ಇದೊಂದು ಕ್ರೈಮ್ ಥ್ರಿಲ್ಲರ್ ಆಧಾರಿತ ಚಿತ್ರ. ನಾನೇ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದೇನೆ. ಈಗಾಗಲೇ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರಿನಲ್ಲಿ ಒಂದೇ ಹಂತದಲ್ಲಿ ಚಿತ್ರೀಕರಣ ನಡೆದಿದೆ. ಕೆಲವೇ ದಿನಗಳಲ್ಲಿ ಟೀಸರ್ ಬಿಡುಗಡೆಯಾಗಲಿದೆ. ಡಿಸೆಂಬರ್ ತಿಂಗಳಲ್ಲಿ ತೆರೆಗೆ ತರುವ ಪ್ರಯತ್ನ ನಡೆಯತ್ತಿದೆ. ತನುಷ್ ಶಿವಣ್ಣ ಚಿತ್ರದ ನಾಯಕನಾಗಿ ನಟಿಸಿದ್ದು, ಮೋನಿಕಾ ಗೌಡ ನಾಯಕಿಯಾಗಿ ನಟಿಸಿದ್ದಾರೆ. ಚಿತ್ರಕ್ಕೆ ‘ಸತ್ಯಮೇವ ಜಯತೇ’ ಎಂಬ ಅಡಿಬರಹವಿದೆ’ ಎಂದರು.

ಇದು ನಾನು ನಾಯಕನಾಗಿ ನಟಿಸಿರುವ ಐದನೇ ಚಿತ್ರ ಎಂದು ಮಾತನಾಡಿದ ನಾಯಕ ತನುಷ್ ಶಿವಣ್ಣ, ‘ನಿರ್ದೇಶಕರು ಒಳ್ಳೆಯ ಕಥೆ ಮಾಡಿಕೊಂಡಿದ್ದಾರೆ. ನಾನು ಈ ಚಿತ್ರದಲ್ಲಿ ಸೆಲೆಬ್ರಿಟಿ ಪಾತ್ರ ಮಾಡಿದ್ದೇನೆ. ಚಿತ್ರದಲ್ಲಿ ಎಲ್ಲರೂ ನನ್ನ ‘ಬಾಸ್’ ಎನ್ನುತ್ತಾರೆ’ ಎಂದರು.

ಸಿರಿ ಪ್ರೊಡಕ್ಷನ್ಸ್ ನಿರ್ಮಾಣದ ಈ ಚಿತ್ರಕ್ಕೆ ಡೆವಿ ಸುರೇಶ್ ಸಂಗೀತ ನಿರ್ದೇಶನ, ಶರತ್ ಎನ್.ಆರ್ ಪುರ ಛಾಯಾಗ್ರಹಣ, ಮಹೇಶ್ ರೆಡ್ಡಿ ಸಂಕಲನವಿದೆ. ಚಿತ್ರದಲ್ಲಿ ಸಂದೀಪ್, ವೀರೇನ್ ಕೇಶವ್, ಸುಜನ್ ಶೆಟ್ಟಿ, ‘ದುನಿಯಾ’ ಮಹೇಶ್, ‘ಜೋಶ್’ ಅಕ್ಷಯ್‍ ಮುಂತಾದವರು ನಟಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಪರಿಷತ್‌ ಚುನಾವಣೆಯಲ್ಲಿ ಕ್ರಾಸ್‌ ವೋಟ್‌ ಮಾಡಿದ ಶಾಸಕರು ಗೊತ್ತಿದೆ ; ಎಚ್‌.ಡಿ.ಕುಮಾರಸ್ವಾಮಿ

ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ.…

56 mins ago

ಮಂಡ್ಯ | ಐವರು ಅಂತರ್‌ ಜಿಲ್ಲಾ ಕಳ್ಳರ ಬಂಧನ

ಮಂಡ್ಯ : ಜಿಲ್ಲೆಯ ವಿವಿಧೆಡೆ ನಡೆದ 21 ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ 553 ಗ್ರಾಂ…

1 hour ago

ಜೂನ್‌ 21ರಂದು ನೀಟ್‌ ಮರುಪರೀಕ್ಷೆ ; ಮೈಸೂರು ಜಿಲ್ಲೆಯಲ್ಲಿ 7886 ಪರೀಕ್ಷಾರ್ಥಿಗಳ ನೋಂದಣಿ

ಮೈಸೂರು : ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ…

2 hours ago

ನೀಟ್‌ಗಾಗಿ ಟೆಲಿಗ್ರಾಂ ನಿಷೇಧ ; ಕೇಂದ್ರದ ನಿರ್ಧಾರ ಎತ್ತಿ ಹಿಡಿದ ಕೋರ್ಟ್‌

ಹೊಸದಿಲ್ಲಿ : ನೀಟ್‌-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…

3 hours ago

ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ ; ಡಾ.ಎಚ್.ಸಿ.ಮಹದೇವಪ್ಪ

ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…

3 hours ago

ಮೈಸೂರು | ಠಾಣಾ ಮಟ್ಟದಲ್ಲಿ ರೌಡಿ ಪ್ರತಿಬಂಧಕ ದಳ ಸ್ಥಾಪನೆ

ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…

11 hours ago