ಮನರಂಜನೆ

ಆಗಸ್ಟ್ ತಿಂಗಳಲ್ಲಿ ಮದುವೆಯಾಗಲಿದ್ದಾರೆ ತರುಣ್, ಸೋನಲ್‍

‘ಕಾಟೇರ’ ಚಿತ್ರದದ ನಿರ್ದೇಶಕ ತರುಣ್ ಸುಧೀರ್‍ ಮತ್ತು ನಟಿ ಸೋನಲ್‍ ಮಾಂತೆರೋ ಪರಸ್ಪರ ಪ್ರೀತಿಸಿ ಮದುವೆಯಾಗುತ್ತಿರುವ ಸುದ್ದಿ ಗೊತ್ತೇ ಇದೆ. ಆದರೆ, ಅವರಿಬ್ಬರ ಮದುವೆ ಯಾವಾಗ ಎಂಬ ವಿಷಯ ಬಹಿರಂಗವಾಗಿರಲಿಲ್ಲ. ಈಗ ಮದುವೆ ದಿನಾಂಕ ಹೊರಬಿದ್ದಿದ್ದು, ಆಗಸ್ಟ್ 10 ಮತ್ತು 11ರಂದು ತರುಣ್ ಮತ್ತು ಸೋನಲ್‍ ಮದುವೆ ಆಗಲಿದೆ ಎಂದು ಹೇಳಲಾಗುತ್ತಿದೆ.

‘ಕಾಟೇರ’ ಚಿತ್ರದ ಸಂದರ್ಭದಲ್ಲೇ ತರುಣ್‍ ಅವರ ಮದುವೆ ಯಾವಾಗ ಎಂಬ ಪ್ರಶ್ನೆ ಕೇಳಿಬಂದಿತ್ತು. ಈ ಬಗ್ಗೆ ತರುಣ್ ನಾಚಿನೀರಾಗಿದ್ದರೂ, ಆದಷ್ಟು ಬೇಗ ಎಂದು ದರ್ಶನ್ ಹೇಳಿದ್ದರು. ಆದರೆ, ಹುಡುಗಿ ಯಾರು ಎಂಬ ವಿಷಯ ಗೊತ್ತಾಗಿರಲಿಲ್ಲ. ಆ ನಂತರ ತರುಣ್‍ ಮತ್ತು ಸೋನಲ್‍ ಪರಸ್ಫರ ಪ್ರೀತಿಸಿ ಮದುವೆಯಾಗುತ್ತಿದ್ದಾರೆ ಎಂಬ ಸುದ್ದಿ ಬಂತು. ಇದಕ್ಕೆ ತಮ್ಮ ಸಂಪೂರ್ಣ ಸಮ್ಮತಿ ಇದೆ ಎಂದು ತರುಣ್ ತಾಯಿ ಮಾಲತಿ ಸಹ ಹೇಳಿದ್ದರು.

ಈ ನಡುವೆ ಅವರಿಬ್ಬರ ಮದುವೆ ಆಗಸ್ಟ್ 10 ಮತ್ತು 11ಕ್ಕೆ ನಿಗದಿಯಾಗಿದೆ. ಆದರೆ, ಸದ್ಯ ದರ್ಶನ್‍ ಜೈಲಿನಲ್ಲಿರುವುದರಿಂದ, ಅವರ ಅನುಪಸ್ಥಿತಿಯಲ್ಲಿ ಮದುವೆಯನ್ನು ಮುಂದಕ್ಕೆ ಹಾಕಲು ತರುಣ್‍ ತೀರ್ಮಾನಿಸಿದ್ದಂತೆ. ಆದರೆ, ದರ್ಶನ್ ಒತ್ತಾಯದ ಮೇರೆಗೆ ಮದುವೆಗೆ ಮುಂದಾಗಿದ್ದಾರೆ.

ದರ್ಶನ್‍ ಅವರಿಗೆ ತರುಣ್ ಮದುವೆ ಮೊದಲೇ ಗೊತ್ತಿತ್ತು. ಆದರೆ, ಈ ಬಗ್ಗೆ ಎಲ್ಲೂ ಮಾತಾಡಿರಲಿಲ್ಲ. ಇದೀಗ ಮದುವೆ ದಿನಾಂಕ ಹತ್ತಿರ ಬರುತ್ತಿದ್ದಂತೆಯೇ ತರುಣ್ ಇತ್ತೀಚೆಗೆ ಜೈಲಿಗೆ ಭೇಟಿ ಕೊಟ್ಟು ದರ್ಶನ್ ‍ಅವರನ್ನು ಮಾತನಾಡಿಸಿ ಬಂದಿದ್ದಾರೆ. ಕೆಲವೇ ಜನರಿಗೆ ಅನುಮತಿ ಇದ್ದುದರಿಂದ ಸೋನಲ್ ಈ ಸಂದರ್ಭದಲ್ಲಿ ಹಾಜರಿರಲಿಲ್ಲ.

ಜೈಲಿನಲ್ಲಿ ದರ್ಶನ್‍ ಇರುವುದರಿಂದ ಮದುವೆ ಮುಂದೂಡುವ ಮಾತಾಡಿದರಂತೆ ತರುಣ್‍. ಈ ಸಂದರ್ಭದಲ್ಲಿ, ಯಾವುದೇ ಕಾರಣಕ್ಕೂ ಮದುವೆ ಡೇಟ್‍ ಮುಂದೂಡಬಾರದು ಎಂದು ದರ್ಶನ್‍ ಹೇಳಿ ಕಳುಹಿಸಿದ್ದಾರಂತೆ ಮತ್ತು ಪತ್ನಿ ವಿಜಯಲಕ್ಷ್ಮೀ ಅವರಿಂದಲೂ ಈ ಮಾತು ಹೇಳಿಸಿದ್ದಾರಂತೆ. ದರ್ಶನ್ ಇಚ್ಛೆಯಂತೆ ಆಗಸ್ಟ್‌ 10,11ರಂದು ತರುಣ್ ಮದುವೆ ಜರುಗಲಿದೆ.

ಮದುವೆ ದಿನಾಂಕವೇನೋ ನಿಗದಿಯಾಗಿದೆ. ಆದರೆ, ಎಲ್ಲಿ ಮುಂತಾದ ವಿಷಯಗಳೆಲ್ಲಾ ಇನ್ನಷ್ಟೇ ಬಹಿರಂಗವಾಗಬೇಕಿದೆ.

ಭೂಮಿಕಾ

Recent Posts

ಪೂರ್ಣ ಸಿದ್ಧವಾಗದ ಎಕ್ಸ್‌ಪ್ರೇಸ್‌ ವೇ : ಟೋಲ್‌ ಕಡಿತ

ಹೊಸದಿಲ್ಲಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸುದ್ದಿಯೊಂದನ್ನು ನೀಡಿದೆ.…

7 hours ago

ಸೇವಾ ತೀರ್ಥ ಸಂಕೀರ್ಣ ಉದ್ಘಾಟಿಸಿದ ಪ್ರಧಾನಿ ಮೋದಿ

ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…

8 hours ago

T20 World Cup | ಕೆನಡಾ ವಿರುದ್ಧ ಯುಎಇಗೆ ರೋಚಕ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು…

8 hours ago

ದಳಪತಿ ವಿಜಯ್‌ ರ‍್ಯಾಲಿಯಲ್ಲಿ ನಿಲ್ಲದ ದುರಂತ : ಮತ್ತೊಬ್ಬನ ಸಾವು

ಸೇಲಂ : ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ‍್ಯಾಲಿ ವೇಳೆ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ…

9 hours ago

ರೈಲ್‌ಒನ್‌ ಆಪ್‌ : ಒಂದೇ ಕಡೆ ಸಿಗಲಿದೆ ರೈಲು ಸೌಲಭ್ಯಗಳು

ಬೆಂಗಳೂರು : ಭಾರತೀಯ ರೈಲ್ವೆಯು ತನ್ನ ಅಧಿಕೃತ ಆಪ್ ‘ರೈಲ್‌ಒನ್’ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಇದರಲ್ಲಿ ರೈಲ್ವೆ ಸೇವೆಗಳೆಲ್ಲವೂ…

9 hours ago

ತಾರಿಖ್‌ ರೆಹಮಾನ್‌ ಬಾಂಗ್ಲಾದೇಶದ ನೂತನ ಪ್ರಧಾನಿ

ಢಾಕಾ : ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ(ಬಿಎನ್‌ಪಿ) ಗೆದ್ದು ಬೀಗಿದೆ. ಸಂಸತ್ತಿನ ಒಟ್ಟು 300 ಸ್ಥಾನಗಳ ಪೈಕಿ…

9 hours ago