ಬೆಂಗಳೂರು: ಸ್ಯಾಂಡಲ್ವುಡ್ನ ಮತ್ತೊಂದು ಕ್ಯೂಟ್ ಜೋಡಿ ವೈವಾಹಿಕ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ.
ಕಳೆದ ಕೆಲವು ವರ್ಷಗಳಿಂದ ಪ್ರೀತಿಯಲ್ಲಿ ಮುಳುಗಿದ್ದ ತರುಣ್ ಸುಧೀರ್ ಹಾಗೂ ಸೋನಲ್ ಜೋಡಿ ತಮ್ಮ ಮ್ಯಾಟರ್ ಅನ್ನು ರಹಸ್ಯವಾಗಿಯೇ ಇಟ್ಟಿತ್ತು. ಮದುವೆಗೆ ಬೇಕಿರುವ ತಯಾರಿಗಳನ್ನು ಕೂಡ ಗುಟ್ಟಾಗಿಯೇ ಮಾಡಿಕೊಳ್ಳುತ್ತಿದ್ದರು. ಆದರೂ ಇವರಿಬ್ಬರ ಮದುವೆ ವಿಚಾರ ಹೊರಬಂದು ಲೀಕ್ ಆಗಿತ್ತು.
ಕೆಲ ದಿನಗಳ ಹಿಂದೆ ಸೋನಾಲ್ ಮಂಥೆರೋ ಜೊತೆ ಮದುವೆ ಆಗುತ್ತಿರುವ ವಿಷಯವನ್ನು ನಟ ತರುಣ್ ಸುಧೀರ್ ಅವರೇ ಅಧಿಕೃತಗೊಳಿಸಿದ್ದರು.
ಈ ಜೋಡಿ ನಾಳೆ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದು, ಅದಕ್ಕೂ ಮುನ್ನ ಇಂದು ಚಿತ್ರರಂಗದ ಗಣ್ಯರಿಗಾಗಿ, ಆತ್ಮೀಯರರಿಗಾಗಿ ಆರತಕ್ಷತೆಯನ್ನು ಹಮ್ಮಿಕೊಳ್ಳಲಾಗಿದೆ. ಇದಕ್ಕೂ ಮುನ್ನವೇ ಮದುವೆ ಸಂಭ್ರಮ ಹಾಗೂ ಶಾಸ್ತ್ರಗಳು ಆರಂಭ ಆಗಿವೆ.
ಆರತಕ್ಷತೆಗೂ ಮುನ್ನ ತರುಣ್ ಸುಧೀರ್ ಹಾಗೂ ಸೋನಲ್ ಮಾಂಥೆರೋ ಹಳದಿ ಶಾಸ್ತ್ರ ಮಾಡಿಕೊಂಡಿದ್ದಾರೆ. ಅಭಿಮಾನಿಗಳು ತರುಣ್-ಸೋನಾಲ್ ಹಸೆಮಣೆ ಏರುವುದನ್ನು ಕಣ್ತುಂಬಿಕೊಳ್ಳಲು ಫ್ಯಾನ್ಸ್ ತುದಿಗಾಲಲ್ಲಿ ನಿಂತಿದ್ದಾರೆ.
ಹಳದಿ ಸಂಭ್ರಮದಲ್ಲಿ ಸ್ಯಾಂಡಲ್ವುಡ್ ನಟರಾದ ಶರಣ್, ನೆನಪಿರಲಿ ಪ್ರೇಮ್ ಸೇರಿದಂತೆ ಹಲವರು ಜೋಡಿಯ ಸಂಭ್ರಮದಲ್ಲಿ ಭಾಗಿಯಾಗಿದ್ದಾರೆ. ಪ್ರೇಮ್ ಹಾಗೂ ಶರಣ್ ಕೂಡ ಹಳದಿ ಹಚ್ಚಿಕೊಂಡು ಖುಷಿ ಪಟ್ಟಿದ್ದಾರೆ.
ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…
ನವೀನ್ ಕುಮಾರ್: ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…
ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…
ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್…