ಸಾಮಾನ್ಯವಾಗಿ ತರುಣ್ ಸುಧೀರ್ ನಿರ್ದೇಶನದ ಚಿತ್ರಗಳೆಂದರೆ, ಅದರಲ್ಲಿ ದರ್ಶನ್ ನಾಯಕನಾಗಿ ಇರಬೇಕು. ಇಲ್ಲ, ಅವರು ಚಿತ್ರ ನಿರ್ಮಾಣಕ್ಕಿಳಿಯುತ್ತಾರೆ ಎಂದರೆ ಅದರಲ್ಲಿ ಶರಣ್ ಇರಲೇಬೇಕು. ಈಗ ದರ್ಶನ್ ಮತ್ತು ಶರಣ್ ಇಬ್ಬರನ್ನೂ ಬಿಟ್ಟು, ಬೇರೆಯವರೊಂದಿಗೆ ಚಿತ್ರ ಮಾಡುವುದಕ್ಕೆ ಹೊರಟಿದ್ದಾರೆ ತರುಣ್ ಸುಧೀರ್.
‘ಕಾಟೇರ’ ಚಿತ್ರ ಬಿಡುಗಡೆಯಾಗಿ ಒಂದು ವರ್ಷವಾಗುತ್ತಾ ಬಂತು. ಆದರೆ, ತರುಣ್ ಸುಧೀರ್ ಯಾವೊಂದು ಹೊಸ ಚಿತ್ರವನ್ನೂ ಘೋಷಿಸಿರಲಿಲ್ಲ. ಇಷ್ಟರಲ್ಲಿ ಶುರುವಾಗಬೇಕಿದ್ದು, ದರ್ಶನ್ ಅಭಿನಯದಲ್ಲಿ ‘ವೀರ ಸಿಂಧೂರ ಲಕ್ಷ್ಮಣ’ ದರ್ಶನ್ ಜೈಲು ಪಾಲಾಗಿದ್ದರಿಂದ ತಡವಾಗಿದೆ. ಆ ಚಿತ್ರ ಇನ್ನೊಂದು ವರ್ಷ ಶುರುವಾಗುವುದು ಸಂಶಯವೇ. ಹೀಗಿರುವಾಗಲೇ, ತರುಣ್ ನಿರ್ದೇಶನವನ್ನು ಪಕ್ಕಕ್ಕಿಟ್ಟು, ನಿರ್ಮಾಣದಲ್ಲಿ ತೊಡಗಿಸಿಕೊಂಡಿದ್ದಾರೆ.
ತರುಣ್ ಈ ಹಿಂದೆ ಅಟ್ಲಾಂಟ ನಾಗೇಂದ್ರ ಜೊತೆಗೆ ಸೇರಿ ’Rambo 2’ ನಿರ್ಮಾಣದಲ್ಲಿ ತೊಡಗಿಸಿಕೊಂಡಿದ್ದರು. ಈ ಬಾರಿಯೂ ನಾಗೇಂದ್ರ ಜೊತೆಗೆ ಕೈಜೋಡಿಸಿರುವ ತರುಣ್, ಒಂದು ಹೊಸ ಚಿತ್ರವನ್ನು ನಿರ್ಮಿಸುವುದಕ್ಕೆ ಅಣಿಯಾಗುತ್ತಿದ್ದಾರೆ. ಈ ಚಿತ್ರವನ್ನು ಪುನೀತ್ ರಂಗಸ್ವಾಮಿ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಪುನೀತ್ ಈ ಹಿಂದೆ ‘ಕಾಟೇರ’ ಚಿತ್ರದಲ್ಲಿ ಸಹನಿರ್ದೇಶಕರಾಗಿ ಕೆಲಸ ಮಾಡಿದ್ದರು. ಈಗ ಹೊಸ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಭಡ್ತಿ ಪಡೆಯುತ್ತಿದ್ದಾರೆ. ಈ ಚಿತ್ರವು ಕನ್ನಡವಲ್ಲದೆ, ತೆಲುಗು ಮತ್ತು ತಮಿಳಿನಲ್ಲೂ ಬಿಡುಗಡೆಯಾಗುತ್ತಿದೆ.
ಈ ಚಿತ್ರವು ನೈಜ ಘಟನೆಯನ್ನು ಆಧರಿಸಿದ್ದು, ಕರ್ನಾಟಕ ಮತ್ತು ತಮಿಳುನಾಡಿನ ಗಡಿಯಲ್ಲಿ ನಡೆಯುವ ಕಥೆಯಾಗಲಿದೆಯಂತೆ. ಚಿತ್ರಕ್ಕೆ ‘ಏಳುಮಲೆಯ ಮಡಿಲಲ್ಲಿ ಎದೆ ನಡುಗಿಸುವ ಪ್ರೇಮಕಥೆ’ ಎಂಬ ಟ್ಯಾಗ್ಲೈನ್ ನೀಡಲಾಗಿದೆ.
ಈ ಹೊಸ ಚಿತ್ರದಲ್ಲಿ ಹೆಚ್ಚಾಗಿ ಹೊಸಬರೇ ಇರಲಿದ್ದು, ಡಿಸೆಂಬರ್.25ರಿಂದ ಚಿತ್ರೀಕರಣ ಪ್ರಾರಂಭವಾಗಲಿದೆಯಂತೆ. ಇನ್ನು, ಸಂಕ್ರಾಂತಿ ಹಬ್ಬಕ್ಕೆ ಚಿತ್ರದ ಶೀರ್ಷಿಕೆ ಘೋಷಣೆ ಆಗಲಿದ್ದು, ತರುಣ್ ಚಿತ್ರಗಳಿಗೆ ಕೆಲಸ ಮಾಡುವ ಪ್ರಮುಖ ತಂತ್ರಜ್ಞರು ಈ ಚಿತ್ರದಲ್ಲೂ ಕೆಲಸ ಮಾಡಲಿದ್ದಾರೆ. ಚಿತ್ರಕ್ಕೆ ಸುಧಾಕರ್ ರಾಜ್ ಛಾಯಾಗ್ರಹಣ ಮತ್ತು ಕೆ.ಎಂ.ಪ್ರಕಾಶ್ ಸಂಕಲನವಿದೆ.
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…
ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…
ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…
ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…
ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…