ಸಾಮಾನ್ಯವಾಗಿ ತರುಣ್ ಸುಧೀರ್ ನಿರ್ದೇಶನದ ಚಿತ್ರಗಳೆಂದರೆ, ಅದರಲ್ಲಿ ದರ್ಶನ್ ನಾಯಕನಾಗಿ ಇರಬೇಕು. ಇಲ್ಲ, ಅವರು ಚಿತ್ರ ನಿರ್ಮಾಣಕ್ಕಿಳಿಯುತ್ತಾರೆ ಎಂದರೆ ಅದರಲ್ಲಿ ಶರಣ್ ಇರಲೇಬೇಕು. ಈಗ ದರ್ಶನ್ ಮತ್ತು ಶರಣ್ ಇಬ್ಬರನ್ನೂ ಬಿಟ್ಟು, ಬೇರೆಯವರೊಂದಿಗೆ ಚಿತ್ರ ಮಾಡುವುದಕ್ಕೆ ಹೊರಟಿದ್ದಾರೆ ತರುಣ್ ಸುಧೀರ್.
‘ಕಾಟೇರ’ ಚಿತ್ರ ಬಿಡುಗಡೆಯಾಗಿ ಒಂದು ವರ್ಷವಾಗುತ್ತಾ ಬಂತು. ಆದರೆ, ತರುಣ್ ಸುಧೀರ್ ಯಾವೊಂದು ಹೊಸ ಚಿತ್ರವನ್ನೂ ಘೋಷಿಸಿರಲಿಲ್ಲ. ಇಷ್ಟರಲ್ಲಿ ಶುರುವಾಗಬೇಕಿದ್ದು, ದರ್ಶನ್ ಅಭಿನಯದಲ್ಲಿ ‘ವೀರ ಸಿಂಧೂರ ಲಕ್ಷ್ಮಣ’ ದರ್ಶನ್ ಜೈಲು ಪಾಲಾಗಿದ್ದರಿಂದ ತಡವಾಗಿದೆ. ಆ ಚಿತ್ರ ಇನ್ನೊಂದು ವರ್ಷ ಶುರುವಾಗುವುದು ಸಂಶಯವೇ. ಹೀಗಿರುವಾಗಲೇ, ತರುಣ್ ನಿರ್ದೇಶನವನ್ನು ಪಕ್ಕಕ್ಕಿಟ್ಟು, ನಿರ್ಮಾಣದಲ್ಲಿ ತೊಡಗಿಸಿಕೊಂಡಿದ್ದಾರೆ.
ತರುಣ್ ಈ ಹಿಂದೆ ಅಟ್ಲಾಂಟ ನಾಗೇಂದ್ರ ಜೊತೆಗೆ ಸೇರಿ ’Rambo 2’ ನಿರ್ಮಾಣದಲ್ಲಿ ತೊಡಗಿಸಿಕೊಂಡಿದ್ದರು. ಈ ಬಾರಿಯೂ ನಾಗೇಂದ್ರ ಜೊತೆಗೆ ಕೈಜೋಡಿಸಿರುವ ತರುಣ್, ಒಂದು ಹೊಸ ಚಿತ್ರವನ್ನು ನಿರ್ಮಿಸುವುದಕ್ಕೆ ಅಣಿಯಾಗುತ್ತಿದ್ದಾರೆ. ಈ ಚಿತ್ರವನ್ನು ಪುನೀತ್ ರಂಗಸ್ವಾಮಿ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಪುನೀತ್ ಈ ಹಿಂದೆ ‘ಕಾಟೇರ’ ಚಿತ್ರದಲ್ಲಿ ಸಹನಿರ್ದೇಶಕರಾಗಿ ಕೆಲಸ ಮಾಡಿದ್ದರು. ಈಗ ಹೊಸ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಭಡ್ತಿ ಪಡೆಯುತ್ತಿದ್ದಾರೆ. ಈ ಚಿತ್ರವು ಕನ್ನಡವಲ್ಲದೆ, ತೆಲುಗು ಮತ್ತು ತಮಿಳಿನಲ್ಲೂ ಬಿಡುಗಡೆಯಾಗುತ್ತಿದೆ.
ಈ ಚಿತ್ರವು ನೈಜ ಘಟನೆಯನ್ನು ಆಧರಿಸಿದ್ದು, ಕರ್ನಾಟಕ ಮತ್ತು ತಮಿಳುನಾಡಿನ ಗಡಿಯಲ್ಲಿ ನಡೆಯುವ ಕಥೆಯಾಗಲಿದೆಯಂತೆ. ಚಿತ್ರಕ್ಕೆ ‘ಏಳುಮಲೆಯ ಮಡಿಲಲ್ಲಿ ಎದೆ ನಡುಗಿಸುವ ಪ್ರೇಮಕಥೆ’ ಎಂಬ ಟ್ಯಾಗ್ಲೈನ್ ನೀಡಲಾಗಿದೆ.
ಈ ಹೊಸ ಚಿತ್ರದಲ್ಲಿ ಹೆಚ್ಚಾಗಿ ಹೊಸಬರೇ ಇರಲಿದ್ದು, ಡಿಸೆಂಬರ್.25ರಿಂದ ಚಿತ್ರೀಕರಣ ಪ್ರಾರಂಭವಾಗಲಿದೆಯಂತೆ. ಇನ್ನು, ಸಂಕ್ರಾಂತಿ ಹಬ್ಬಕ್ಕೆ ಚಿತ್ರದ ಶೀರ್ಷಿಕೆ ಘೋಷಣೆ ಆಗಲಿದ್ದು, ತರುಣ್ ಚಿತ್ರಗಳಿಗೆ ಕೆಲಸ ಮಾಡುವ ಪ್ರಮುಖ ತಂತ್ರಜ್ಞರು ಈ ಚಿತ್ರದಲ್ಲೂ ಕೆಲಸ ಮಾಡಲಿದ್ದಾರೆ. ಚಿತ್ರಕ್ಕೆ ಸುಧಾಕರ್ ರಾಜ್ ಛಾಯಾಗ್ರಹಣ ಮತ್ತು ಕೆ.ಎಂ.ಪ್ರಕಾಶ್ ಸಂಕಲನವಿದೆ.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…