ಮನರಂಜನೆ

ವೀಡಿಯೋ ಮೂಲಕ ಮದುವೆಯ ಸುದ್ದಿ ಹಂಚಿಕೊಂಡ ತರುಣ್‍-ಸೋನಲ್

ತರುಣ್‍ ಸುಧೀರ್ ಹಾಗೂ ಸೋನಲ್‍ ಮುಂದಿನ ತಿಂಗಳು ಮದುವೆಯಾಗುತ್ತಿರುವ ವಿಷಯ ಗೊತ್ತೇ ಇದೆ. ಆದರೆ, ಇಬ್ಬರೂ ಈ ವಿಷಯವನ್ನು ಅಧಿಕೃತವಾಗಿ ಘೋಷಿಸಿರಲಿಲ್ಲ. ಸೋಮವಾರ ಬೆಳಿಗ್ಗೆ ಹೊಸ ವೀಡಿಯೋ ಬಿಡುಗಡೆ ಮಾಡುವ ಮೂಲಕ ಸೋನಲ್‍ ಮತ್ತು ತರುಣ್‍ ತಮ್ಮ ಮದುವೆ ಸುದ್ದಿಯನ್ನು ಖಾತ್ರಿಪಡಿಸಿದ್ದಾರೆ.

ಪ್ರತಿ ಸಿನಿಮಾದಲ್ಲಿಯೂ ತಮ್ಮ ಕ್ರಿಯೆಟಿವಿಟಿ ಮೂಲಕ ಪ್ರೇಕ್ಷಕರ ಮುಂದೆ ಹೊಸ ಹೊಸ ಕಥೆ ತರುವ ನಿರ್ದೇಶಕ ತರುಣ್ ಸುಧೀರ್ ಈಗ ತಮ್ಮ ಜೀವನದ ರಿಯಲ್ ನಾಯಕಿಯನ್ನು ಪರಿಚಯಿಸುವುದಕ್ಕೂ ಒಂದು ವೀಡಿಯೋ ಮಾಡಿದ್ದಾರೆ.

ತರುಣ್‍ ಮತ್ತು ಸೋನಲ್‍ ಇಬ್ಬರೂ ಚಿತ್ರರಂಗದವರೇ ಆದ್ದರಿಂದ ಇಬ್ಬರೂ ತಮ್ಮ ಪ್ರೀ-ವೆಡ್ಡಿಂಗ್‍ ವೀಡಿಯೋವನ್ನು ಚಿತ್ರಮಂದಿರದಲ್ಲಿ ಚಿತ್ರೀಕರಣ ಮಾಡಲಾಗಿದೆ. ನವರಂಗ್‍ ಚಿತ್ರಮಂದಿರದಲ್ಲಿ ತರುಣ್‍ ಹಲವು ಚಿತ್ರಗಳನ್ನು ನೋಡಿದವರು. ಅಷ್ಟೇ ಅಲ್ಲ, ಆ ಚಿತ್ರಮಂದಿರದಲ್ಲೇ ಅವರ ಚಿತ್ರಗಳು ಬಿಡುಗಡೆಯಾಗಿ ಯಶಸ್ವಿಯಾಗಿ ಪ್ರದರ್ಶನ ಕಂಡಿವೆ. ಹಾಗಾಗಿ, ಈ ಚಿತ್ರಮಂದಿರದಲ್ಲೇ ಚಿತ್ರೀಕರಣ ಮಾಡಲಾಗಿದೆ. ಛಾಯಾಗ್ರಾಹಕ ಎ.ಜೆ ಶೆಟ್ಟಿ ಈ ವಿಡಿಯೋ ಚಿತ್ರೀಕರಣ ಮಾಡಿದ್ದಾರೆ.

ಇನ್ನು, ಪ್ರೀ-ವೆಡ್ಡಿಂಗ್ ವೀಡಿಯೋದಲ್ಲಿ ತರುಣ್ ಮತ್ತು ಸೋನಾಲ್ ಬ್ಲಾಕ್ ಅಂಡ್ ಬ್ಲಾಕ್ ವಸ್ತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ತರುಣ್‍ಗೆ ಚೇತನ್ ಕಾಸ್ಟ್ಯೂಮ್ಸ್ ಡಿಸೈನ್ ಮಾಡಿದ್ದು ಸೋನಾಲ್ ಅವರಿಗೆ ರಶ್ಮಿ ಡಿಸೈನ್ ಮಾಡಿದ್ದಾರೆ.

ತರುಣ್ ಮತ್ತು ಸೋನಲ್‍ ಮದುವೆ ವಿಷಯ ದರ್ಶನ್‍ ಅವರಿಗೆ ತರುಣ್ ಮದುವೆ ಮೊದಲೇ ಗೊತ್ತಿತ್ತು. ತರುಣ್ ಇತ್ತೀಚೆಗೆ ಜೈಲಿಗೆ ಭೇಟಿ ಕೊಟ್ಟು ದರ್ಶನ್ ‍ಅವರನ್ನು ಮಾತನಾಡಿಸಿ ಬಂದಿದ್ದಾರೆ. ಜೈಲಿನಲ್ಲಿ ದರ್ಶನ್‍ ಇರುವುದರಿಂದ ಮದುವೆ ಮುಂದೂಡುವ ಮಾತಾಡಿದರಂತೆ ತರುಣ್‍. ಈ ಸಂದರ್ಭದಲ್ಲಿ, ಯಾವುದೇ ಕಾರಣಕ್ಕೂ ಮದುವೆ ಡೇಟ್‍ ಮುಂದೂಡಬಾರದು ಎಂದು ದರ್ಶನ್‍ ಹೇಳಿ ಕಳುಹಿಸಿದ್ದಾರಂತೆ. ಹಾಗಾಗಿ, ದರ್ಶನ್‍ ಅನುಪಸ್ಥಿತಿಯಲ್ಲೇ ತರುಣ್ ಮತ್ತು ಸೋನಲ್‍ ಮದುವೆಯು ಆಗಸ್ಟ್ 11ರಂದು ಬೆಂಗಳೂರಿನ ಕೆಂಗೇರಿ ಬಳಿ ಇರೋ ಪೂರ್ಣಿಮಾ ಫ್ಯಾಲೆಸ್ ನಲ್ಲಿ ನಡೆಯಲಿದೆ.

ಭೂಮಿಕಾ

Recent Posts

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

14 mins ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

16 mins ago

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…

18 mins ago

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

20 mins ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

26 mins ago