ಮನರಂಜನೆ

ರಚಿತಾ ರಾಮ್ ಹುಟ್ಟುಹಬ್ಬಕ್ಕೆ ‘ಲ್ಯಾಂಡ್ ಲಾರ್ಡ್’ ಚಿತ್ರದ ಟೀಸರ್‍ ಉಡುಗೊರೆ

ಸಾಮಾನ್ಯವಾಗಿ ರಚಿತಾ ರಾಮ್ ತಮ್ಮ ಹುಟ್ಟುಹಬ್ಬವನ್ನು ಹೆಚ್ಚು ಸದ್ದುಗದ್ದಲವಿಲ್ಲದೆ ಆಚರಿಸಿಕೊಳ್ಳುತ್ತಿದ್ದರು. ಈ ವರ್ಷ, ರಾಜರಾಜೇಶ್ವರಿ ನಗರದಲ್ಲಿರುವ ತಮ್ಮ‌ನಿವಾಸದಲ್ಲಿ ಅಭಿಮಾನಿಗಳೊಂದಿಗೆ ಕೇಕ್ ಕಟ್ ಮಾಡುವ ಮೂಲಕ ಹುಟ್ಟುಹಬ್ಬ ಆಚರಿಸಿಕೊಂಡರು. ಇದೇ ಸಂದರ್ಭದಲ್ಲಿ ರಚಿತಾ ರಾಮ್ ನಾಯಕಿಯಾಗಿ ಅಭಿನಯಿಸಿರುವ ‘ಲ್ಯಾಂಡ್‍ಲಾರ್ಡ್’ ಚಿತ್ರದ ಪಾತ್ರ ಪರಿಚಯಿಸುವ ಟೀಸರ್‍ ಬಿಡುಗಡೆ ಮಾಡಲಾಯಿತು.

‘ಲ್ಯಾಂಡ್‍ಲಾರ್ಡ್’ ಚಿತ್ರದಲ್ಲಿ ರಚಿತಾ ನಟಿಸುತ್ತಿರುವ ಸುದ್ದಿ ಇದ್ದೇ ಹೊರತು, ಅವರ ಪಾತ್ರವೇನು? ಅವರು ಹೇಗೆ ಕಾಣುತ್ತಾರೆ? ಮುಂತಾದ ವಿಷಯಗಳನ್ನು ಚಿತ್ರತಂಡ ಬಿಟ್ಟುಕೊಟ್ಟಿರಲಿಲ್ಲ. ರಚಿತಾ ಸಹ ಚಿತ್ರದ ಪತ್ರಿಕಾಗೋಷ್ಠಿಗಳಿಗೆ ಬಂದಿರಲಿಲ್ಲ. ಇದೀಗ ರಚಿತಾ ಪಾತ್ರದ ಟೀಸರ್‍ ಬಿಡುಗಡೆಯಾಗಿದೆ.

ಕೆ.ವಿ. ಸತ್ಯಪ್ರಕಾಶ್ ಮತ್ತು ಹೇಮಂತ್ ಗೌಡ ಕೆ.ಎಸ್ ನಿರ್ಮಾಣದ, ಜಡೇಶ್ ಕೆ. ಹಂಪಿ ಅವರನಿರ್ದೇಶನದ ‘ಲ್ಯಾಂಡ್‍ಲಾರ್ಡ್’ ಚಿತ್ರದಲ್ಲಿ ‘ದುನಿಯಾ’ ವಿಜಯ್, ರಚಿತಾ ರಾಮ್, ರಿತನ್ಯಾ, ಶಿಶಿರ್‍ ಮುಂತಾದವರು ಅಭಿನಯಿಸುತ್ತಿದ್ದಾರೆ.

ಟೀಸರ್‍ ಬಿಡುಗಡೆ ಬಳಿಕ ಮಾತನಾಡಿದ ರಚಿತಾ ರಾಮ್, ‘ಈ ವರ್ಷದ ಹುಟ್ಟುಹಬ್ಬ ನನಗೆ ತುಂಬಾ ಸ್ಪೆಷಲ್. ‘ಲ್ಯಾಂಡ್‍ಲಾರ್ಡ್’ ಚಿತ್ರತಂಡದ ಕಡೆಯಿಂದ ಈ ಟೀಸರ್ ನನಗೆ ಸರ್ ಪ್ರೈಸ್ ‌ಗಿಫ್ಟ್. ಇದೊಂದು ವಿಭಿನ್ನ ಪಾತ್ರ’ ಎಂದು ಹೇಳಿದರು.

ನಿರ್ದೇಶಕ ಜಡೇಶ್ ಕೆ ಹಂಪಿ ಮಾತನಾಡಿ, ‘ಇಂಥಹ ಪಾತ್ರವನ್ನು ರಚಿತಾ ರಾಮ್ ಅವರು ಒಪ್ಪುತ್ತಾರಾ? ಎಂಬ ಆತಂಕವಿತ್ತು. ಅವರು ಒಪ್ಪಿಕೊಂಡು ಅಭಿನಯಿಸಿದ್ದು ತುಂಬಾ ಸಂತೋಷ. ‘ಕೂಲಿ’ ಚಿತ್ರದಲ್ಲಿ ಕಲ್ಯಾಣಿಯಾಗಿ ನಟಿಸಿದ್ದರು. ಅದಕ್ಕಿಂತ ಬೇರೆ ಥರದಲ್ಲಿ ಈ ಪಾತ್ರ ಮೂಡಿ ಬಂದಿದೆ. ಇದರಲ್ಲಿ ಅವರು ಚಿನ್ನಮ್ಮ ಆಗಿದ್ದಾರೆ’ ಎಂದು ಹೇಳಿದರು.

ನಿರ್ಮಾಪಕ ಕೆ.ವಿ. ಸತ್ಯಪ್ರಕಾಶ್ ಮಾತನಾಡಿ, ‘ನಮ್ಮ ಚಿತ್ರದಲ್ಲಿ ರಚಿತಾ ರಾಮ್ ಅವರು ಅದ್ಭುತ ಪಾತ್ರ ನಿರ್ವಹಿಸಿದ್ದಾರೆ. ಇದು ನೈಜ ಘಟನೆಯನ್ನು ಆಧರಿಸಿ ನಿರ್ಮಿಸಿದ ಚಿತ್ರ. ಈ ಚಿತ್ರದ ಅಭಿನಯಕ್ಕೆ ರಚಿತಾ ರಾಮ್ ಅವರಿಗೆ ರಾಷ್ಟ್ರಮಟ್ಟದ ಪ್ರಶಸ್ತಿ ಸಿಗುತ್ತದೆ’ ಎಂದು ಹೇಳಿದರು.

‘ಲ್ಯಾಂಡ್‍ಲಾರ್ಡ್’ ಚಿತ್ರಕ್ಕೆ ಸ್ಚಾಮಿ ಗೌಡ ಛಾಯಾಗ್ರಹಣ, ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ಇದೆ. ಮಾಸ್ತಿ ಮಂಜು ಹಾಗೂ ಶ್ರೀಕಾಂತ್ ಜೊತೆಯಾಗಿ ಸಂಭಾಷಣೆ ರಚಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹನೂರು| ಕಾಡಾನೆ ದಾಳಿಗೆ ಬೆಳೆ ನಾಶ: ಆತ್ಮಹತ್ಯೆ ಎಚ್ಚರಿಕೆ ನೀಡಿದ ಅನ್ನದಾತ

ಹನೂರು: ಜಮೀನಿನಲ್ಲಿ ಬೆಳೆದಿರುವ ತರಕಾರಿ ಬೆಳೆಗಳನ್ನು ಕಾಡಾನೆಗಳ ಹಿಂಡು ಕಳೆದ ಮೂರು ದಿನಗಳಿಂದ ರಾತ್ರಿ ವೇಳೆ ದಾಳಿ ನಡೆಸಿ ಬೆಳೆ…

28 mins ago

ಬ್ಯಾಡ್ಮಿಂಟನ್‌ ಅಂಗಳಕ್ಕೆ ಸೈನಾ ನೆಹ್ವಾಲ್‌ ವಿದಾಯ

ಹೈದರಾಬಾದ್: ಭಾರತದ ಖ್ಯಾತ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಅವರು ಅಂತರರಾಷ್ಟೀಯ ಪಂದ್ಯಾವಳಿಗೆ ನಿವೃತ್ತಿ ಘೋಷಿಸಿದ್ದಾರೆ. ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ…

40 mins ago

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್‌ ನಬಿನ್‌ ಅಧಿಕಾರ ಸ್ವೀಕಾರ

ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದ ನಿತಿನ್ ನಬಿನ್ ಅವರು ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರ ಹರ್ಷೋದ್ಘಾರದ ನಡುವೆ…

57 mins ago

ಮೈಸೂರಿನಲ್ಲಿ ಯುವಕನ ಬರ್ಬರ ಹತ್ಯೆ

ಮೈಸೂರು: ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮೈಸೂರಿನ ಉದಯಗಿರಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಶಹಬಾಜ್‌ ಎಂಬಾತನೇ ಕೊಲೆಯಾದ ಯುವಕನಾಗಿದ್ದಾನೆ.…

1 hour ago

ಎಚ್.ಡಿ.ಕೋಟೆ: ಕಬಿನಿ ಉಳಿಸುವಂತೆ ಒತ್ತಾಯಿಸಿ ರೈತ ಸಂಘಟನೆ ಪ್ರತಿಭಟನೆ

ಎಚ್.ಡಿ.ಕೋಟೆ: ಕಬಿನಿ ಜಲಾಶಯವನ್ನು ಉಳಿಸುವಂತೆ ಒತ್ತಾಯಿಸಿ ರೈತ ಸಂಘಟನೆಯಿಂದ ಪ್ರತಿಭಟನೆ ನಡೆಸಲಾಯಿತು. ಎಚ್.ಡಿ.ಕೋಟೆ ತಾಲ್ಲೂಕು ಕಚೇರಿ ಮುಂದೆ ಜಮಾಯಿಸಿದ ರೈತ…

1 hour ago

ಈಗಿರುವ ಬಿಜೆಪಿ ನಾಯಕರಿಗೆ ಮೆಚ್ಯುರಿಟಿ ಇಲ್ಲ: ಸಚಿವ ಭೋಸರಾಜು ವ್ಯಂಗ್ಯ

ಮಡಿಕೇರಿ: ವಿಪಕ್ಷ ನಾಯಕ ಆರ್.ಅಶೋಕ್ ಅವರಿಗೆ ಮೆಚ್ಯುರಿಟಿ ಇಲ್ಲ ಅಂತಾ ಬಿಜೆಪಿಯವರೇ ಹೇಳುತ್ತಾರೆ ಎಂದು ಸಚಿವ ಭೋಸರಾಜು ವ್ಯಂಗ್ಯವಾಡಿದ್ದಾರೆ. ಅಬಕಾರಿ…

2 hours ago