ಮನರಂಜನೆ

ರಚಿತಾ ರಾಮ್ ಹುಟ್ಟುಹಬ್ಬಕ್ಕೆ ‘ಲ್ಯಾಂಡ್ ಲಾರ್ಡ್’ ಚಿತ್ರದ ಟೀಸರ್‍ ಉಡುಗೊರೆ

ಸಾಮಾನ್ಯವಾಗಿ ರಚಿತಾ ರಾಮ್ ತಮ್ಮ ಹುಟ್ಟುಹಬ್ಬವನ್ನು ಹೆಚ್ಚು ಸದ್ದುಗದ್ದಲವಿಲ್ಲದೆ ಆಚರಿಸಿಕೊಳ್ಳುತ್ತಿದ್ದರು. ಈ ವರ್ಷ, ರಾಜರಾಜೇಶ್ವರಿ ನಗರದಲ್ಲಿರುವ ತಮ್ಮ‌ನಿವಾಸದಲ್ಲಿ ಅಭಿಮಾನಿಗಳೊಂದಿಗೆ ಕೇಕ್ ಕಟ್ ಮಾಡುವ ಮೂಲಕ ಹುಟ್ಟುಹಬ್ಬ ಆಚರಿಸಿಕೊಂಡರು. ಇದೇ ಸಂದರ್ಭದಲ್ಲಿ ರಚಿತಾ ರಾಮ್ ನಾಯಕಿಯಾಗಿ ಅಭಿನಯಿಸಿರುವ ‘ಲ್ಯಾಂಡ್‍ಲಾರ್ಡ್’ ಚಿತ್ರದ ಪಾತ್ರ ಪರಿಚಯಿಸುವ ಟೀಸರ್‍ ಬಿಡುಗಡೆ ಮಾಡಲಾಯಿತು.

‘ಲ್ಯಾಂಡ್‍ಲಾರ್ಡ್’ ಚಿತ್ರದಲ್ಲಿ ರಚಿತಾ ನಟಿಸುತ್ತಿರುವ ಸುದ್ದಿ ಇದ್ದೇ ಹೊರತು, ಅವರ ಪಾತ್ರವೇನು? ಅವರು ಹೇಗೆ ಕಾಣುತ್ತಾರೆ? ಮುಂತಾದ ವಿಷಯಗಳನ್ನು ಚಿತ್ರತಂಡ ಬಿಟ್ಟುಕೊಟ್ಟಿರಲಿಲ್ಲ. ರಚಿತಾ ಸಹ ಚಿತ್ರದ ಪತ್ರಿಕಾಗೋಷ್ಠಿಗಳಿಗೆ ಬಂದಿರಲಿಲ್ಲ. ಇದೀಗ ರಚಿತಾ ಪಾತ್ರದ ಟೀಸರ್‍ ಬಿಡುಗಡೆಯಾಗಿದೆ.

ಕೆ.ವಿ. ಸತ್ಯಪ್ರಕಾಶ್ ಮತ್ತು ಹೇಮಂತ್ ಗೌಡ ಕೆ.ಎಸ್ ನಿರ್ಮಾಣದ, ಜಡೇಶ್ ಕೆ. ಹಂಪಿ ಅವರನಿರ್ದೇಶನದ ‘ಲ್ಯಾಂಡ್‍ಲಾರ್ಡ್’ ಚಿತ್ರದಲ್ಲಿ ‘ದುನಿಯಾ’ ವಿಜಯ್, ರಚಿತಾ ರಾಮ್, ರಿತನ್ಯಾ, ಶಿಶಿರ್‍ ಮುಂತಾದವರು ಅಭಿನಯಿಸುತ್ತಿದ್ದಾರೆ.

ಟೀಸರ್‍ ಬಿಡುಗಡೆ ಬಳಿಕ ಮಾತನಾಡಿದ ರಚಿತಾ ರಾಮ್, ‘ಈ ವರ್ಷದ ಹುಟ್ಟುಹಬ್ಬ ನನಗೆ ತುಂಬಾ ಸ್ಪೆಷಲ್. ‘ಲ್ಯಾಂಡ್‍ಲಾರ್ಡ್’ ಚಿತ್ರತಂಡದ ಕಡೆಯಿಂದ ಈ ಟೀಸರ್ ನನಗೆ ಸರ್ ಪ್ರೈಸ್ ‌ಗಿಫ್ಟ್. ಇದೊಂದು ವಿಭಿನ್ನ ಪಾತ್ರ’ ಎಂದು ಹೇಳಿದರು.

ನಿರ್ದೇಶಕ ಜಡೇಶ್ ಕೆ ಹಂಪಿ ಮಾತನಾಡಿ, ‘ಇಂಥಹ ಪಾತ್ರವನ್ನು ರಚಿತಾ ರಾಮ್ ಅವರು ಒಪ್ಪುತ್ತಾರಾ? ಎಂಬ ಆತಂಕವಿತ್ತು. ಅವರು ಒಪ್ಪಿಕೊಂಡು ಅಭಿನಯಿಸಿದ್ದು ತುಂಬಾ ಸಂತೋಷ. ‘ಕೂಲಿ’ ಚಿತ್ರದಲ್ಲಿ ಕಲ್ಯಾಣಿಯಾಗಿ ನಟಿಸಿದ್ದರು. ಅದಕ್ಕಿಂತ ಬೇರೆ ಥರದಲ್ಲಿ ಈ ಪಾತ್ರ ಮೂಡಿ ಬಂದಿದೆ. ಇದರಲ್ಲಿ ಅವರು ಚಿನ್ನಮ್ಮ ಆಗಿದ್ದಾರೆ’ ಎಂದು ಹೇಳಿದರು.

ನಿರ್ಮಾಪಕ ಕೆ.ವಿ. ಸತ್ಯಪ್ರಕಾಶ್ ಮಾತನಾಡಿ, ‘ನಮ್ಮ ಚಿತ್ರದಲ್ಲಿ ರಚಿತಾ ರಾಮ್ ಅವರು ಅದ್ಭುತ ಪಾತ್ರ ನಿರ್ವಹಿಸಿದ್ದಾರೆ. ಇದು ನೈಜ ಘಟನೆಯನ್ನು ಆಧರಿಸಿ ನಿರ್ಮಿಸಿದ ಚಿತ್ರ. ಈ ಚಿತ್ರದ ಅಭಿನಯಕ್ಕೆ ರಚಿತಾ ರಾಮ್ ಅವರಿಗೆ ರಾಷ್ಟ್ರಮಟ್ಟದ ಪ್ರಶಸ್ತಿ ಸಿಗುತ್ತದೆ’ ಎಂದು ಹೇಳಿದರು.

‘ಲ್ಯಾಂಡ್‍ಲಾರ್ಡ್’ ಚಿತ್ರಕ್ಕೆ ಸ್ಚಾಮಿ ಗೌಡ ಛಾಯಾಗ್ರಹಣ, ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ಇದೆ. ಮಾಸ್ತಿ ಮಂಜು ಹಾಗೂ ಶ್ರೀಕಾಂತ್ ಜೊತೆಯಾಗಿ ಸಂಭಾಷಣೆ ರಚಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

2 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

2 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

2 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

2 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

3 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

3 hours ago