ಮನರಂಜನೆ

ದಿ ರಾಜಾಸಾಬ್ ಚಿತ್ರದ ಟೀಸರ್‌ ಬಿಡುಗಡೆ: ನಗಿಸುತ್ತಾ, ಹೆದರಿಸುವ ಪ್ರಭಾಸ್‍ ಚಿತ್ರ

ತೆಲುಗು ನಟ ಪ್ರಭಾಸ್‍ ಇತ್ತೀಚೆಗೆ ಹೆಚ್ಚಾಗಿಯೇ ಆ್ಯಕ್ಷನ್‍ ಚಿತ್ರಗಳಲ್ಲೇ ನಟಿಸುತ್ತಿದ್ದರು. ಒಂದು ಕಾಲಕ್ಕೆ ಫ್ಯಾಮಿಲಿ ಚಿತ್ರಗಳಿಗೆ ಹೆಸರಾಗಿದ್ದ ಪ್ರಭಾಸ್‍, ಈಗ ಬಹಳ ದಿನಗಳ ನಂತರ ಅದೇ ಜಾನರ್‍ಗೆ ವಾಪಸ್ಸಾಗಿದ್ದಾರೆ. ಈ ಬಾರಿ ಅವರು ‘ ದಿ ರಾಜಾಸಾಬ್‍’ ಎಂಬ ಹಾರರ್‍ ಕಾಮಿಡಿ ಚಿತ್ರದಲ್ಲಿ ನಟಿಸಿದ್ದು, ಚಿತ್ರವು ಡಿ.05ರಂದು ಪ್ಯಾನ್ ಇಂಡಿಯಾ ಚಿತ್ರವಾಗಿ ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದೆ.

ಅದಕ್ಕೂ ಮೊದಲು ಸೋಮವಾರ, ಹೈದರಾಬಾದ್‍ನ ಪ್ರಸಾದ್ ‍ಸಿನಿಮಾಸ್‍ನಲ್ಲಿ ಚಿತ್ರದಲ್ಲಿ ಚಿತ್ರದ ಟೀಸರ್‌ ನೂರಾರು ಅಭಿಮಾನಿಗಳ ಸಮ್ಮುಖದಲ್ಲಿ ಬಿಡುಗಡೆಯಾಗಿದೆ. ಐದು ಭಾಷೆಗಳ ಟೀಸರ್‍ ಏಕಕಾಲಕ್ಕೆ ಬಿಡುಗಡೆಯಾಗಿರುವುದು ವಿಶೇಷ. ಈ ಚಿತ್ರವನ್ನು ತೆಲುಗಿನ ಖ್ಯಾತ ಚಿತ್ರ ನಿರ್ಮಾಣ ಸಂಸ್ಥೆ ಪೀಪಲ್‌ ಮೀಡಿಯಾ ಫ್ಯಾಕ್ಟರಿ ನಿರ್ಮಿಸಿದೆ. ಟಿ.ಜಿ.ವಿಶ್ವ ಪ್ರಸಾದ್ ಚಿತ್ರದ ನಿರ್ಮಾಣ ಮಾಡಿದರೆ, ಮಾರುತಿ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ.

ವಿಶೇಷವೆಂದರೆ, ಈ ಚಿತ್ರದಲ್ಲಿ ಪ್ರಭಾಸ್‍ಗೆ ಮೂವರು ನಾಯಕಿಯರಿದ್ದಾರೆ. ಪ್ರಭಾಸ್ ಎಂಟ್ರಿ, ಕಾಮಿಡಿ, ಹಾರರ್‍ ಅಂಶಗಳು ಇವೆಲ್ಲವೂ ಪ್ರೇಕ್ಷಕರನ್ನು ಸೆಳೆಯುತ್ತಿದೆ. ಪ್ರಭಾಸ್‍ ಜೊತೆಗೆ ಬಾಲಿವುಡ್‌ ನಟ ಸಂಜಯ್ ದತ್ ಸಹ ಈ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅವರಿಂದಲೇ ಚಿತ್ರದ ಟೀಸರ್‍ ಪ್ರಾರಂಭವಾಗುತ್ತದೆ. ಅವರ ಗೆಟಪ್‌, ರಾಜಮನೆತನದ ಸುತ್ತ ನಡೆಯುವ ಕಥೆ ಮತ್ತು ಹಾರರ್ ಅಂಶಗಳು ಚಿತ್ರದ ಮೇಲಿನ ನಿರೀಕ್ಷೆಯನ್ನು ಹೆಚ್ಚಿಸಿದೆ.

‘ಪ್ರತಿ ರೋಜು ಪಂಡಗ’, ‘ಪ್ರೇಮ ಕಥಾ ಚಿತ್ರಂ’, ‘ಮಹಾನುಭಾವುಡು’ ಸೇರಿ ಹಲವು ಯಶಸ್ವಿ ಚಿತ್ರಗಳನ್ನು ನಿರ್ದೇಶಿಸಿರುವ ಮಾರುತಿ, ಬರೆದು ನಿರ್ದೇಶನ ಮಾಡುತ್ತಿರುವ ಈ ಚಿತ್ರದಲ್ಲಿ ಪ್ರಭಾಸ್‍ ಜೊತೆಗೆ ಸಂಜಯ್‍ ದತ್‍, ನಿಧಿ ಅಗರ್ವಾಲ್‍, ಮಾಳವಿಕಾ ಮೋಹನ್‍, ರಿದ್ಧಿ ಕುಮಾರ್‍, ಯೋಗಿ ಬಾಬು ಮುಂತಾದವರು ನಟಿಸುತ್ತಿದ್ದಾರೆ.

‘ದಿ ರಾಜಸಾಬ್‍’ ಚಿತ್ರಕ್ಕಾಗಿ ಹೈದರಾಬಾದ್‍ನಲ್ಲಿ ಬೃಹತ್‍ ಬಂಗಲೆಯ ಸೆಟ್‍ ನಿರ್ಮಿಸಲಾಗಿದ್ದು, ಆ ಸೆಟ್‍ನಲ್ಲೇ ಚಿತ್ರದ ಬಹುತೇಕ ಚಿತ್ರೀಕರಣ ನಡೆಸಲಾಗಿದೆ. ಮೂರು ಹಾಡು ಮತ್ತು ಸ್ವಲ್ಪ ಮಾತಿನ ಭಾಗದ ಚಿತ್ರೀಕರಣ ಬಾಕಿ ಇದ್ದು, ಸದ್ಯದಲ್ಲೇ ಚಿತ್ರೀಕರಣ ಮುಗಿಸಿ, ಡಿ.05ರಂದು ಚಿತ್ರ ಬಿಡುಗಡೆ ಮಾಡುವುದಕ್ಕೆ ಚಿತ್ರತಂಡ ಸಜ್ಜಾಗಿದೆ.

ಆಂದೋಲನ ಡೆಸ್ಕ್

Recent Posts

ಮೋಟಾರ್ ವಾಹನ ಸೆಸ್ ಕೈಬಿಟ್ಟ ಮೈಸೂರು ಮಹಾನಗರ ಪಾಲಿಕೆ

ಮೈಸೂರು : ಮೈಸೂರು ಮಹಾನಗರಪಾಲಿಕೆ 2026-27ನೇ ಹಣಕಾಸು ವರ್ಷಕ್ಕೆ ಜಾರಿಗೊಳಿಸಲು ಘೋಷಿಸಿದ್ದ ಮೋಟಾರ್ ವಾಹನ ಸೆಸ್ ಅನ್ನು ರದ್ದುಗೊಳಿಸಿದೆ. ಇತ್ತೀಚಿಗೆ…

8 hours ago

ದಿಢೀರ್‌ ಕುಸಿದುಬಿದ್ದ ಲೋಕಾಯುಕ್ತ ನಿ.ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ, ಆಸ್ಪತ್ರೆಗೆ ದಾಖಲು

ಬೆಂಗಳೂರು : ಕರ್ನಾಟಕದ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರೆ ಉಂಟಾಗಿ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ…

9 hours ago

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ : ಮಾಜಿ ಸಚಿವ ಸಾ.ರಾ.ಮಹೇಶ್‌ ಹೇಳಿದಿಷ್ಟು?

ಮೈಸೂರು : ಬಟ್ಟೆ ಬ್ಯಾಗ್ ಖರೀದಿಯಲ್ಲಿ ಆಗಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ಹೈಕೋರ್ಟ್ ಅನುಮತಿ ನೀಡಿರುವ ಕುರಿತು ಪ್ರತಿಕ್ರಿಯಿಸಿದ…

10 hours ago

ಆರ್‌ಸಿಬಿ ವಿರುದ್ಧದ ಪಂದ್ಯಕ್ಕೆ ಧೋನಿ ಲಭ್ಯ?

ಬೆಂಗಳೂರು : ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಲ್ಲಿ ಹೊಸ ಆಶಾಕಿರಣ ಮೂಡಿಸಿದ್ದಾರೆ. ಸ್ನಾಯು ಸೆಳೆತದಿಂದ…

11 hours ago

24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಜೆಟ್‌ಗಳನ್ನು ಹೊಡೆದುರುಳಿಸಿದ್ದೇವೆ : ಇರಾನ್

ಟೆಹ್ರಾನ್ : ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕಳೆದ 24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಸ್ಟೆಲ್ತ್…

11 hours ago

ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು : ಮುಖ್ಯಮಂತ್ರಿ ಟೀಕೆ

ಬಾಗಲಕೋಟೆ : ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.…

11 hours ago