ಮನರಂಜನೆ

ದಿ ರಾಜಾಸಾಬ್ ಚಿತ್ರದ ಟೀಸರ್‌ ಬಿಡುಗಡೆ: ನಗಿಸುತ್ತಾ, ಹೆದರಿಸುವ ಪ್ರಭಾಸ್‍ ಚಿತ್ರ

ತೆಲುಗು ನಟ ಪ್ರಭಾಸ್‍ ಇತ್ತೀಚೆಗೆ ಹೆಚ್ಚಾಗಿಯೇ ಆ್ಯಕ್ಷನ್‍ ಚಿತ್ರಗಳಲ್ಲೇ ನಟಿಸುತ್ತಿದ್ದರು. ಒಂದು ಕಾಲಕ್ಕೆ ಫ್ಯಾಮಿಲಿ ಚಿತ್ರಗಳಿಗೆ ಹೆಸರಾಗಿದ್ದ ಪ್ರಭಾಸ್‍, ಈಗ ಬಹಳ ದಿನಗಳ ನಂತರ ಅದೇ ಜಾನರ್‍ಗೆ ವಾಪಸ್ಸಾಗಿದ್ದಾರೆ. ಈ ಬಾರಿ ಅವರು ‘ ದಿ ರಾಜಾಸಾಬ್‍’ ಎಂಬ ಹಾರರ್‍ ಕಾಮಿಡಿ ಚಿತ್ರದಲ್ಲಿ ನಟಿಸಿದ್ದು, ಚಿತ್ರವು ಡಿ.05ರಂದು ಪ್ಯಾನ್ ಇಂಡಿಯಾ ಚಿತ್ರವಾಗಿ ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದೆ.

ಅದಕ್ಕೂ ಮೊದಲು ಸೋಮವಾರ, ಹೈದರಾಬಾದ್‍ನ ಪ್ರಸಾದ್ ‍ಸಿನಿಮಾಸ್‍ನಲ್ಲಿ ಚಿತ್ರದಲ್ಲಿ ಚಿತ್ರದ ಟೀಸರ್‌ ನೂರಾರು ಅಭಿಮಾನಿಗಳ ಸಮ್ಮುಖದಲ್ಲಿ ಬಿಡುಗಡೆಯಾಗಿದೆ. ಐದು ಭಾಷೆಗಳ ಟೀಸರ್‍ ಏಕಕಾಲಕ್ಕೆ ಬಿಡುಗಡೆಯಾಗಿರುವುದು ವಿಶೇಷ. ಈ ಚಿತ್ರವನ್ನು ತೆಲುಗಿನ ಖ್ಯಾತ ಚಿತ್ರ ನಿರ್ಮಾಣ ಸಂಸ್ಥೆ ಪೀಪಲ್‌ ಮೀಡಿಯಾ ಫ್ಯಾಕ್ಟರಿ ನಿರ್ಮಿಸಿದೆ. ಟಿ.ಜಿ.ವಿಶ್ವ ಪ್ರಸಾದ್ ಚಿತ್ರದ ನಿರ್ಮಾಣ ಮಾಡಿದರೆ, ಮಾರುತಿ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ.

ವಿಶೇಷವೆಂದರೆ, ಈ ಚಿತ್ರದಲ್ಲಿ ಪ್ರಭಾಸ್‍ಗೆ ಮೂವರು ನಾಯಕಿಯರಿದ್ದಾರೆ. ಪ್ರಭಾಸ್ ಎಂಟ್ರಿ, ಕಾಮಿಡಿ, ಹಾರರ್‍ ಅಂಶಗಳು ಇವೆಲ್ಲವೂ ಪ್ರೇಕ್ಷಕರನ್ನು ಸೆಳೆಯುತ್ತಿದೆ. ಪ್ರಭಾಸ್‍ ಜೊತೆಗೆ ಬಾಲಿವುಡ್‌ ನಟ ಸಂಜಯ್ ದತ್ ಸಹ ಈ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅವರಿಂದಲೇ ಚಿತ್ರದ ಟೀಸರ್‍ ಪ್ರಾರಂಭವಾಗುತ್ತದೆ. ಅವರ ಗೆಟಪ್‌, ರಾಜಮನೆತನದ ಸುತ್ತ ನಡೆಯುವ ಕಥೆ ಮತ್ತು ಹಾರರ್ ಅಂಶಗಳು ಚಿತ್ರದ ಮೇಲಿನ ನಿರೀಕ್ಷೆಯನ್ನು ಹೆಚ್ಚಿಸಿದೆ.

‘ಪ್ರತಿ ರೋಜು ಪಂಡಗ’, ‘ಪ್ರೇಮ ಕಥಾ ಚಿತ್ರಂ’, ‘ಮಹಾನುಭಾವುಡು’ ಸೇರಿ ಹಲವು ಯಶಸ್ವಿ ಚಿತ್ರಗಳನ್ನು ನಿರ್ದೇಶಿಸಿರುವ ಮಾರುತಿ, ಬರೆದು ನಿರ್ದೇಶನ ಮಾಡುತ್ತಿರುವ ಈ ಚಿತ್ರದಲ್ಲಿ ಪ್ರಭಾಸ್‍ ಜೊತೆಗೆ ಸಂಜಯ್‍ ದತ್‍, ನಿಧಿ ಅಗರ್ವಾಲ್‍, ಮಾಳವಿಕಾ ಮೋಹನ್‍, ರಿದ್ಧಿ ಕುಮಾರ್‍, ಯೋಗಿ ಬಾಬು ಮುಂತಾದವರು ನಟಿಸುತ್ತಿದ್ದಾರೆ.

‘ದಿ ರಾಜಸಾಬ್‍’ ಚಿತ್ರಕ್ಕಾಗಿ ಹೈದರಾಬಾದ್‍ನಲ್ಲಿ ಬೃಹತ್‍ ಬಂಗಲೆಯ ಸೆಟ್‍ ನಿರ್ಮಿಸಲಾಗಿದ್ದು, ಆ ಸೆಟ್‍ನಲ್ಲೇ ಚಿತ್ರದ ಬಹುತೇಕ ಚಿತ್ರೀಕರಣ ನಡೆಸಲಾಗಿದೆ. ಮೂರು ಹಾಡು ಮತ್ತು ಸ್ವಲ್ಪ ಮಾತಿನ ಭಾಗದ ಚಿತ್ರೀಕರಣ ಬಾಕಿ ಇದ್ದು, ಸದ್ಯದಲ್ಲೇ ಚಿತ್ರೀಕರಣ ಮುಗಿಸಿ, ಡಿ.05ರಂದು ಚಿತ್ರ ಬಿಡುಗಡೆ ಮಾಡುವುದಕ್ಕೆ ಚಿತ್ರತಂಡ ಸಜ್ಜಾಗಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ವಾಲ್ಮೀಕಿ ಭವನ ಉದ್ಘಾಟಿಸಿ

ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ಅರಸಿನಕೆರೆ ಗ್ರಾಮದಲ್ಲಿ ವಾಲ್ಮೀಕಿ ಭವನ ನಿರ್ಮಾಣವಾಗಿ ಎರಡು ವರ್ಷ ಕಳೆದಿದ್ದರೂ ಉದ್ಘಾಟನೆಯಾಗದೇ ಇರುವುದರಿಂದ ಸಾರ್ವಜನಿಕರು…

8 mins ago

ಓದುಗರ ಪತ್ರ: ಬಾಳೆಕೆರೆ ಗ್ರಾಮದಲ್ಲಿ ರಸ್ತೆ ನಿರ್ಮಿಸಿ

ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ರಸ್ತೆ ಹಾಳಾಗಿದ್ದು, ಮಳೆಗಾಲದಲ್ಲಿ ಗ್ರಾಮಸ್ಥರು ಓಡಾಡಲು ಸಾಧ್ಯವಾಗುತ್ತಿಲ್ಲ. ಗ್ರಾಮದ ಹೊಸ ಬಡಾವಣೆಗಳಿಗೆ…

10 mins ago

ಓದುಗರ ಪತ್ರ: ಸಾರಿಗೆ ಬಸ್ಸುಗಳು ಸಕಾಲಕ್ಕೆ ನಿಗದಿತ ಸ್ಥಳ ತಲುಪಲಿ

ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಸಂಚರಿಸುವ ಕೆಲವು ಸಾರಿಗೆ ನಿಗಮದ ಬಸ್ಸುಗಳು ಹಾಗೂ ಮೈಸೂರು ಮತ್ತು, ಬೆಂಗಳೂರು ನಗರ ಸಾರಿಗೆ ಬಸ್ಸುಗಳಲ್ಲಿ…

12 mins ago

ಓದುಗರ ಪತ್ರ: ಮಕ್ಕಳಲ್ಲಿ ಸ್ವಯಂ ಪ್ರೇರಿತ ಓದು ಅವಶ್ಯ

ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳು ಸಮೀಪಿಸುತ್ತಿದ್ದು, ಅದಕ್ಕೆ ಪೂರಕವಾಗಿ ಸಂಜೆ ೭ರಿಂದ ರಾತ್ರಿ ೯ ರವರೆಗೆ ಎಲ್ಲ ಮನೆಗಳಲ್ಲೂ ಟಿವಿ…

14 mins ago

ನಿಯಮ ಮೀರಿ ನಿರ್ಮಿಸಿರುವ ಕಟ್ಟಡ ತೆರವಿಗೆ ಸೂಚನೆ

ಗಾಲ್ಫ್ ಕ್ಲಬ್ ಆಡಳಿತ ಮಂಡಳಿಗೆ ಮೈಸೂರು ನಗರಪಾಲಿಕೆ ನೋಟಿಸ್ ಮೈಸೂರು: ನಗರದ ಜಯಚಾಮರಾಜ ಒಡೆಯರ್ ಗಾಲ್ಛ್ ಕ್ಲಬ್ ಆವರಣದಲ್ಲಿ ನಿಯ ಮಾವಳಿ…

20 mins ago

ಸುವರ್ಣಾವತಿಯಲ್ಲಿ ಇಂದಿನಿಂದ ಜಲಸಾಹಸ ಕ್ರೀಡೋತ್ಸವ

ರಿವರ್ ರಾಫ್ಟಿಂಗ್, ಮೋಟಾರ್ ಬೋಟ್, ಬನಾನಾ ರೈಡ್, ಕಯಾಕಿಂಗ್, ಜೆಟ್ ಸ್ಕೀ ಆಯೋಜನೆ ಚಾಮರಾಜನಗರ: ಯುವಜನರಲ್ಲಿ ಸಾಹಸ, ಶೌರ್ಯ ಪ್ರವೃತ್ತಿಯನ್ನು…

26 mins ago