ಮನರಂಜನೆ

ದಿ ರಾಜಾಸಾಬ್ ಚಿತ್ರದ ಟೀಸರ್‌ ಬಿಡುಗಡೆ: ನಗಿಸುತ್ತಾ, ಹೆದರಿಸುವ ಪ್ರಭಾಸ್‍ ಚಿತ್ರ

ತೆಲುಗು ನಟ ಪ್ರಭಾಸ್‍ ಇತ್ತೀಚೆಗೆ ಹೆಚ್ಚಾಗಿಯೇ ಆ್ಯಕ್ಷನ್‍ ಚಿತ್ರಗಳಲ್ಲೇ ನಟಿಸುತ್ತಿದ್ದರು. ಒಂದು ಕಾಲಕ್ಕೆ ಫ್ಯಾಮಿಲಿ ಚಿತ್ರಗಳಿಗೆ ಹೆಸರಾಗಿದ್ದ ಪ್ರಭಾಸ್‍, ಈಗ ಬಹಳ ದಿನಗಳ ನಂತರ ಅದೇ ಜಾನರ್‍ಗೆ ವಾಪಸ್ಸಾಗಿದ್ದಾರೆ. ಈ ಬಾರಿ ಅವರು ‘ ದಿ ರಾಜಾಸಾಬ್‍’ ಎಂಬ ಹಾರರ್‍ ಕಾಮಿಡಿ ಚಿತ್ರದಲ್ಲಿ ನಟಿಸಿದ್ದು, ಚಿತ್ರವು ಡಿ.05ರಂದು ಪ್ಯಾನ್ ಇಂಡಿಯಾ ಚಿತ್ರವಾಗಿ ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದೆ.

ಅದಕ್ಕೂ ಮೊದಲು ಸೋಮವಾರ, ಹೈದರಾಬಾದ್‍ನ ಪ್ರಸಾದ್ ‍ಸಿನಿಮಾಸ್‍ನಲ್ಲಿ ಚಿತ್ರದಲ್ಲಿ ಚಿತ್ರದ ಟೀಸರ್‌ ನೂರಾರು ಅಭಿಮಾನಿಗಳ ಸಮ್ಮುಖದಲ್ಲಿ ಬಿಡುಗಡೆಯಾಗಿದೆ. ಐದು ಭಾಷೆಗಳ ಟೀಸರ್‍ ಏಕಕಾಲಕ್ಕೆ ಬಿಡುಗಡೆಯಾಗಿರುವುದು ವಿಶೇಷ. ಈ ಚಿತ್ರವನ್ನು ತೆಲುಗಿನ ಖ್ಯಾತ ಚಿತ್ರ ನಿರ್ಮಾಣ ಸಂಸ್ಥೆ ಪೀಪಲ್‌ ಮೀಡಿಯಾ ಫ್ಯಾಕ್ಟರಿ ನಿರ್ಮಿಸಿದೆ. ಟಿ.ಜಿ.ವಿಶ್ವ ಪ್ರಸಾದ್ ಚಿತ್ರದ ನಿರ್ಮಾಣ ಮಾಡಿದರೆ, ಮಾರುತಿ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ.

ವಿಶೇಷವೆಂದರೆ, ಈ ಚಿತ್ರದಲ್ಲಿ ಪ್ರಭಾಸ್‍ಗೆ ಮೂವರು ನಾಯಕಿಯರಿದ್ದಾರೆ. ಪ್ರಭಾಸ್ ಎಂಟ್ರಿ, ಕಾಮಿಡಿ, ಹಾರರ್‍ ಅಂಶಗಳು ಇವೆಲ್ಲವೂ ಪ್ರೇಕ್ಷಕರನ್ನು ಸೆಳೆಯುತ್ತಿದೆ. ಪ್ರಭಾಸ್‍ ಜೊತೆಗೆ ಬಾಲಿವುಡ್‌ ನಟ ಸಂಜಯ್ ದತ್ ಸಹ ಈ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅವರಿಂದಲೇ ಚಿತ್ರದ ಟೀಸರ್‍ ಪ್ರಾರಂಭವಾಗುತ್ತದೆ. ಅವರ ಗೆಟಪ್‌, ರಾಜಮನೆತನದ ಸುತ್ತ ನಡೆಯುವ ಕಥೆ ಮತ್ತು ಹಾರರ್ ಅಂಶಗಳು ಚಿತ್ರದ ಮೇಲಿನ ನಿರೀಕ್ಷೆಯನ್ನು ಹೆಚ್ಚಿಸಿದೆ.

‘ಪ್ರತಿ ರೋಜು ಪಂಡಗ’, ‘ಪ್ರೇಮ ಕಥಾ ಚಿತ್ರಂ’, ‘ಮಹಾನುಭಾವುಡು’ ಸೇರಿ ಹಲವು ಯಶಸ್ವಿ ಚಿತ್ರಗಳನ್ನು ನಿರ್ದೇಶಿಸಿರುವ ಮಾರುತಿ, ಬರೆದು ನಿರ್ದೇಶನ ಮಾಡುತ್ತಿರುವ ಈ ಚಿತ್ರದಲ್ಲಿ ಪ್ರಭಾಸ್‍ ಜೊತೆಗೆ ಸಂಜಯ್‍ ದತ್‍, ನಿಧಿ ಅಗರ್ವಾಲ್‍, ಮಾಳವಿಕಾ ಮೋಹನ್‍, ರಿದ್ಧಿ ಕುಮಾರ್‍, ಯೋಗಿ ಬಾಬು ಮುಂತಾದವರು ನಟಿಸುತ್ತಿದ್ದಾರೆ.

‘ದಿ ರಾಜಸಾಬ್‍’ ಚಿತ್ರಕ್ಕಾಗಿ ಹೈದರಾಬಾದ್‍ನಲ್ಲಿ ಬೃಹತ್‍ ಬಂಗಲೆಯ ಸೆಟ್‍ ನಿರ್ಮಿಸಲಾಗಿದ್ದು, ಆ ಸೆಟ್‍ನಲ್ಲೇ ಚಿತ್ರದ ಬಹುತೇಕ ಚಿತ್ರೀಕರಣ ನಡೆಸಲಾಗಿದೆ. ಮೂರು ಹಾಡು ಮತ್ತು ಸ್ವಲ್ಪ ಮಾತಿನ ಭಾಗದ ಚಿತ್ರೀಕರಣ ಬಾಕಿ ಇದ್ದು, ಸದ್ಯದಲ್ಲೇ ಚಿತ್ರೀಕರಣ ಮುಗಿಸಿ, ಡಿ.05ರಂದು ಚಿತ್ರ ಬಿಡುಗಡೆ ಮಾಡುವುದಕ್ಕೆ ಚಿತ್ರತಂಡ ಸಜ್ಜಾಗಿದೆ.

ಆಂದೋಲನ ಡೆಸ್ಕ್

Recent Posts

ಮಂಡ್ಯ | ಕೊಬ್ಬರಿ ಶೆಡ್‌ಗೆ ಬೆಂಕಿ : ಲಕ್ಷಾಂತರ ರೂ.ಮೌಲ್ಯದ ಕೊಬ್ಬರಿ ನಾಶ

ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…

8 hours ago

ಹನೂರು | ಅಲಗುಮೂಲೆ ಅರಣ್ಯದಲ್ಲಿ ಬೆಂಕಿ ; ಧಗಧಗಿಸಿದ ಕಾಡು

ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…

9 hours ago

ತಂಬಾಕು ಮುಕ್ತ ಗ್ರಾಮಕ್ಕಾಗಿ ಗುಲಾಬಿ ಚಳುವಳಿ

ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…

10 hours ago

ಆಂಬುಲೆನ್ಸ್‌ ತುರ್ತು ಮೀಸಲು ಮಾರ್ಗಕ್ಕೆ ಜಯಾ ಬಚ್ಚನ್‌ ಒತ್ತಾಯ

ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…

10 hours ago

ಗುಂಡ್ಲುಪೇಟೆ | ದನಗಾಹಿ ಮೇಲೆ ಹುಲಿ ದಾಳಿ ; ಪ್ರಾಣಾಪಾಯದಿಂದ ಪಾರು

ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…

10 hours ago

ಏಕತಾ ಮಾಲ್‌ ನಿರ್ಮಾಣಕ್ಕೆ ಹೈಕೋರ್ಟ್ ತಡೆ‌

ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…

10 hours ago