ಮನರಂಜನೆ

ದಿ ರಾಜಾಸಾಬ್ ಚಿತ್ರದ ಟೀಸರ್‌ ಬಿಡುಗಡೆ: ನಗಿಸುತ್ತಾ, ಹೆದರಿಸುವ ಪ್ರಭಾಸ್‍ ಚಿತ್ರ

ತೆಲುಗು ನಟ ಪ್ರಭಾಸ್‍ ಇತ್ತೀಚೆಗೆ ಹೆಚ್ಚಾಗಿಯೇ ಆ್ಯಕ್ಷನ್‍ ಚಿತ್ರಗಳಲ್ಲೇ ನಟಿಸುತ್ತಿದ್ದರು. ಒಂದು ಕಾಲಕ್ಕೆ ಫ್ಯಾಮಿಲಿ ಚಿತ್ರಗಳಿಗೆ ಹೆಸರಾಗಿದ್ದ ಪ್ರಭಾಸ್‍, ಈಗ ಬಹಳ ದಿನಗಳ ನಂತರ ಅದೇ ಜಾನರ್‍ಗೆ ವಾಪಸ್ಸಾಗಿದ್ದಾರೆ. ಈ ಬಾರಿ ಅವರು ‘ ದಿ ರಾಜಾಸಾಬ್‍’ ಎಂಬ ಹಾರರ್‍ ಕಾಮಿಡಿ ಚಿತ್ರದಲ್ಲಿ ನಟಿಸಿದ್ದು, ಚಿತ್ರವು ಡಿ.05ರಂದು ಪ್ಯಾನ್ ಇಂಡಿಯಾ ಚಿತ್ರವಾಗಿ ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದೆ.

ಅದಕ್ಕೂ ಮೊದಲು ಸೋಮವಾರ, ಹೈದರಾಬಾದ್‍ನ ಪ್ರಸಾದ್ ‍ಸಿನಿಮಾಸ್‍ನಲ್ಲಿ ಚಿತ್ರದಲ್ಲಿ ಚಿತ್ರದ ಟೀಸರ್‌ ನೂರಾರು ಅಭಿಮಾನಿಗಳ ಸಮ್ಮುಖದಲ್ಲಿ ಬಿಡುಗಡೆಯಾಗಿದೆ. ಐದು ಭಾಷೆಗಳ ಟೀಸರ್‍ ಏಕಕಾಲಕ್ಕೆ ಬಿಡುಗಡೆಯಾಗಿರುವುದು ವಿಶೇಷ. ಈ ಚಿತ್ರವನ್ನು ತೆಲುಗಿನ ಖ್ಯಾತ ಚಿತ್ರ ನಿರ್ಮಾಣ ಸಂಸ್ಥೆ ಪೀಪಲ್‌ ಮೀಡಿಯಾ ಫ್ಯಾಕ್ಟರಿ ನಿರ್ಮಿಸಿದೆ. ಟಿ.ಜಿ.ವಿಶ್ವ ಪ್ರಸಾದ್ ಚಿತ್ರದ ನಿರ್ಮಾಣ ಮಾಡಿದರೆ, ಮಾರುತಿ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ.

ವಿಶೇಷವೆಂದರೆ, ಈ ಚಿತ್ರದಲ್ಲಿ ಪ್ರಭಾಸ್‍ಗೆ ಮೂವರು ನಾಯಕಿಯರಿದ್ದಾರೆ. ಪ್ರಭಾಸ್ ಎಂಟ್ರಿ, ಕಾಮಿಡಿ, ಹಾರರ್‍ ಅಂಶಗಳು ಇವೆಲ್ಲವೂ ಪ್ರೇಕ್ಷಕರನ್ನು ಸೆಳೆಯುತ್ತಿದೆ. ಪ್ರಭಾಸ್‍ ಜೊತೆಗೆ ಬಾಲಿವುಡ್‌ ನಟ ಸಂಜಯ್ ದತ್ ಸಹ ಈ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅವರಿಂದಲೇ ಚಿತ್ರದ ಟೀಸರ್‍ ಪ್ರಾರಂಭವಾಗುತ್ತದೆ. ಅವರ ಗೆಟಪ್‌, ರಾಜಮನೆತನದ ಸುತ್ತ ನಡೆಯುವ ಕಥೆ ಮತ್ತು ಹಾರರ್ ಅಂಶಗಳು ಚಿತ್ರದ ಮೇಲಿನ ನಿರೀಕ್ಷೆಯನ್ನು ಹೆಚ್ಚಿಸಿದೆ.

‘ಪ್ರತಿ ರೋಜು ಪಂಡಗ’, ‘ಪ್ರೇಮ ಕಥಾ ಚಿತ್ರಂ’, ‘ಮಹಾನುಭಾವುಡು’ ಸೇರಿ ಹಲವು ಯಶಸ್ವಿ ಚಿತ್ರಗಳನ್ನು ನಿರ್ದೇಶಿಸಿರುವ ಮಾರುತಿ, ಬರೆದು ನಿರ್ದೇಶನ ಮಾಡುತ್ತಿರುವ ಈ ಚಿತ್ರದಲ್ಲಿ ಪ್ರಭಾಸ್‍ ಜೊತೆಗೆ ಸಂಜಯ್‍ ದತ್‍, ನಿಧಿ ಅಗರ್ವಾಲ್‍, ಮಾಳವಿಕಾ ಮೋಹನ್‍, ರಿದ್ಧಿ ಕುಮಾರ್‍, ಯೋಗಿ ಬಾಬು ಮುಂತಾದವರು ನಟಿಸುತ್ತಿದ್ದಾರೆ.

‘ದಿ ರಾಜಸಾಬ್‍’ ಚಿತ್ರಕ್ಕಾಗಿ ಹೈದರಾಬಾದ್‍ನಲ್ಲಿ ಬೃಹತ್‍ ಬಂಗಲೆಯ ಸೆಟ್‍ ನಿರ್ಮಿಸಲಾಗಿದ್ದು, ಆ ಸೆಟ್‍ನಲ್ಲೇ ಚಿತ್ರದ ಬಹುತೇಕ ಚಿತ್ರೀಕರಣ ನಡೆಸಲಾಗಿದೆ. ಮೂರು ಹಾಡು ಮತ್ತು ಸ್ವಲ್ಪ ಮಾತಿನ ಭಾಗದ ಚಿತ್ರೀಕರಣ ಬಾಕಿ ಇದ್ದು, ಸದ್ಯದಲ್ಲೇ ಚಿತ್ರೀಕರಣ ಮುಗಿಸಿ, ಡಿ.05ರಂದು ಚಿತ್ರ ಬಿಡುಗಡೆ ಮಾಡುವುದಕ್ಕೆ ಚಿತ್ರತಂಡ ಸಜ್ಜಾಗಿದೆ.

ಆಂದೋಲನ ಡೆಸ್ಕ್

Recent Posts

‘ಕೊಲೆ ಬಗ್ಗೆ ನಮಗೆ ಗೊತ್ತೇ ಇರಲಿಲ್ಲ’

ಎಚ್.ಎಸ್.ದಿನೇಶ್ ಕುಮಾರ್ ನಿತ್ಯಾನಂದ ಕೊಲೆ ಪ್ರಕರಣದ ನಾಲ್ವರು ಆರೋಪಿಗಳ ಪಶ್ಚಾತ್ತಾಪದ ಕಣ್ಣೀರು ಮೈಸೂರು: ನಗರದ ಕುವೆಂಪುನಗರದಲ್ಲಿ ಪತ್ನಿಯಿಂದಲೇ ಹತ್ಯೆಯಾದ ನಿತ್ಯಾನಂದ…

5 hours ago

ಕೊಡಗು ಜಿಲ್ಲೆಯಾದ್ಯಂತ ಚುರುಕುಗೊಂಡ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಮುಂಗಾರು ಮಳೆ ಚುರುಕು ಪಡೆದುಕೊಂಡಿದ್ದು, ಹಾರಂಗಿ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು ಏರಿಕೆ ಕಂಡುಬಂದಿದೆ. ಹಾರಂಗಿ ಜಲಾಶಯಕ್ಕೆ…

7 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಮಹಾತ್ಮನ ಚಿಂತನೆಯ ಹಾದಿಯಲ್ಲಿ ನಡೆಯಬೇಕಿದೆ ನಾನು ಕಂಡ ಗಾಂಧಿಜಿಯವರಲ್ಲಿ, ಅವರ ಜೀವನದಲ್ಲಿ ನನ್ನನ್ನು ಅತ್ಯಂತ ಹೆಚ್ಚಾಗಿ ಆಕರ್ಷಿಸಿದ ವಿಷಯ ಎಂದರೆ…

8 hours ago

ಮನುಷ್ಯ ಕುಲದ ಪ್ರಜ್ಞಾವಂತಿಕೆ ವಿಕಾಸಕ್ಕೆ ಗಾಂಧೀಜಿ ಕೈಮರ

ಗಾಂಧಿಜಿಯವರ ಜೀವನ ಚರಿತ್ರೆ ದೇಶ, ಖಂಡಗಳ ಗಡಿ ದಾಟಿ ಮನುಷ್ಯರೆಲ್ಲರ ಒಳಿತನ್ನು ಬಯಸುವ ಬಯಕೆಯನ್ನು ಭಾವಿಸಿ, ಜೀವಿಸಿ ತೋರಿಸಿದವರ ಪುಣ್ಯ…

9 hours ago

ಗಾಂಧಿ ಮೈಮೇಲೆ ಬಂದಂತೆ ಬದುಕಿದ್ದ ಹುಚ್ಚೇಗೌಡರು

ಸ್ವಾಮಿ ಪೊನ್ನಾಚ್ಚಿ ನಾನು ಹುಚ್ಚೇಗೌಡರನ್ನು ನೋಡಿದ್ದು ಇತ್ತೀಚೆಗೆ. ಅದೂ ಅತ್ತಿಖಾನೆ ಎಸ್ಟೇಟ್ ಸ್ಥಾಪಕ ಮಾರಿಸ್ ಬಗ್ಗೆ ತಿಳಿಯಲು ಹೋದಾಗ. ಸಿಕ್ಕ…

9 hours ago

ವಿಲಾಯತಿಗೆ ಹೊರಟವನು ಜಾತಿ ಬಾಹಿರನಾದೆ

ನಮ್ಮ ಜಾತಿಯ ಜನರು ನನ್ನ ವಿದೇಶ ಪ್ರಯಾಣವನ್ನು ಕುರಿತು ಗೊಂದಲವನ್ನು ಎಬ್ಬಿಸಿದರು. ಅಲ್ಲಿಯವರೆಗೆ ಮೋಧ್ ಬನಿಯರ ಪೈಕಿ ಯಾರೂ ವಿಲಾಯತಿಗೆ…

9 hours ago