ಮನರಂಜನೆ

ದಿ ರಾಜಾಸಾಬ್ ಚಿತ್ರದ ಟೀಸರ್‌ ಬಿಡುಗಡೆ: ನಗಿಸುತ್ತಾ, ಹೆದರಿಸುವ ಪ್ರಭಾಸ್‍ ಚಿತ್ರ

ತೆಲುಗು ನಟ ಪ್ರಭಾಸ್‍ ಇತ್ತೀಚೆಗೆ ಹೆಚ್ಚಾಗಿಯೇ ಆ್ಯಕ್ಷನ್‍ ಚಿತ್ರಗಳಲ್ಲೇ ನಟಿಸುತ್ತಿದ್ದರು. ಒಂದು ಕಾಲಕ್ಕೆ ಫ್ಯಾಮಿಲಿ ಚಿತ್ರಗಳಿಗೆ ಹೆಸರಾಗಿದ್ದ ಪ್ರಭಾಸ್‍, ಈಗ ಬಹಳ ದಿನಗಳ ನಂತರ ಅದೇ ಜಾನರ್‍ಗೆ ವಾಪಸ್ಸಾಗಿದ್ದಾರೆ. ಈ ಬಾರಿ ಅವರು ‘ ದಿ ರಾಜಾಸಾಬ್‍’ ಎಂಬ ಹಾರರ್‍ ಕಾಮಿಡಿ ಚಿತ್ರದಲ್ಲಿ ನಟಿಸಿದ್ದು, ಚಿತ್ರವು ಡಿ.05ರಂದು ಪ್ಯಾನ್ ಇಂಡಿಯಾ ಚಿತ್ರವಾಗಿ ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದೆ.

ಅದಕ್ಕೂ ಮೊದಲು ಸೋಮವಾರ, ಹೈದರಾಬಾದ್‍ನ ಪ್ರಸಾದ್ ‍ಸಿನಿಮಾಸ್‍ನಲ್ಲಿ ಚಿತ್ರದಲ್ಲಿ ಚಿತ್ರದ ಟೀಸರ್‌ ನೂರಾರು ಅಭಿಮಾನಿಗಳ ಸಮ್ಮುಖದಲ್ಲಿ ಬಿಡುಗಡೆಯಾಗಿದೆ. ಐದು ಭಾಷೆಗಳ ಟೀಸರ್‍ ಏಕಕಾಲಕ್ಕೆ ಬಿಡುಗಡೆಯಾಗಿರುವುದು ವಿಶೇಷ. ಈ ಚಿತ್ರವನ್ನು ತೆಲುಗಿನ ಖ್ಯಾತ ಚಿತ್ರ ನಿರ್ಮಾಣ ಸಂಸ್ಥೆ ಪೀಪಲ್‌ ಮೀಡಿಯಾ ಫ್ಯಾಕ್ಟರಿ ನಿರ್ಮಿಸಿದೆ. ಟಿ.ಜಿ.ವಿಶ್ವ ಪ್ರಸಾದ್ ಚಿತ್ರದ ನಿರ್ಮಾಣ ಮಾಡಿದರೆ, ಮಾರುತಿ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ.

ವಿಶೇಷವೆಂದರೆ, ಈ ಚಿತ್ರದಲ್ಲಿ ಪ್ರಭಾಸ್‍ಗೆ ಮೂವರು ನಾಯಕಿಯರಿದ್ದಾರೆ. ಪ್ರಭಾಸ್ ಎಂಟ್ರಿ, ಕಾಮಿಡಿ, ಹಾರರ್‍ ಅಂಶಗಳು ಇವೆಲ್ಲವೂ ಪ್ರೇಕ್ಷಕರನ್ನು ಸೆಳೆಯುತ್ತಿದೆ. ಪ್ರಭಾಸ್‍ ಜೊತೆಗೆ ಬಾಲಿವುಡ್‌ ನಟ ಸಂಜಯ್ ದತ್ ಸಹ ಈ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅವರಿಂದಲೇ ಚಿತ್ರದ ಟೀಸರ್‍ ಪ್ರಾರಂಭವಾಗುತ್ತದೆ. ಅವರ ಗೆಟಪ್‌, ರಾಜಮನೆತನದ ಸುತ್ತ ನಡೆಯುವ ಕಥೆ ಮತ್ತು ಹಾರರ್ ಅಂಶಗಳು ಚಿತ್ರದ ಮೇಲಿನ ನಿರೀಕ್ಷೆಯನ್ನು ಹೆಚ್ಚಿಸಿದೆ.

‘ಪ್ರತಿ ರೋಜು ಪಂಡಗ’, ‘ಪ್ರೇಮ ಕಥಾ ಚಿತ್ರಂ’, ‘ಮಹಾನುಭಾವುಡು’ ಸೇರಿ ಹಲವು ಯಶಸ್ವಿ ಚಿತ್ರಗಳನ್ನು ನಿರ್ದೇಶಿಸಿರುವ ಮಾರುತಿ, ಬರೆದು ನಿರ್ದೇಶನ ಮಾಡುತ್ತಿರುವ ಈ ಚಿತ್ರದಲ್ಲಿ ಪ್ರಭಾಸ್‍ ಜೊತೆಗೆ ಸಂಜಯ್‍ ದತ್‍, ನಿಧಿ ಅಗರ್ವಾಲ್‍, ಮಾಳವಿಕಾ ಮೋಹನ್‍, ರಿದ್ಧಿ ಕುಮಾರ್‍, ಯೋಗಿ ಬಾಬು ಮುಂತಾದವರು ನಟಿಸುತ್ತಿದ್ದಾರೆ.

‘ದಿ ರಾಜಸಾಬ್‍’ ಚಿತ್ರಕ್ಕಾಗಿ ಹೈದರಾಬಾದ್‍ನಲ್ಲಿ ಬೃಹತ್‍ ಬಂಗಲೆಯ ಸೆಟ್‍ ನಿರ್ಮಿಸಲಾಗಿದ್ದು, ಆ ಸೆಟ್‍ನಲ್ಲೇ ಚಿತ್ರದ ಬಹುತೇಕ ಚಿತ್ರೀಕರಣ ನಡೆಸಲಾಗಿದೆ. ಮೂರು ಹಾಡು ಮತ್ತು ಸ್ವಲ್ಪ ಮಾತಿನ ಭಾಗದ ಚಿತ್ರೀಕರಣ ಬಾಕಿ ಇದ್ದು, ಸದ್ಯದಲ್ಲೇ ಚಿತ್ರೀಕರಣ ಮುಗಿಸಿ, ಡಿ.05ರಂದು ಚಿತ್ರ ಬಿಡುಗಡೆ ಮಾಡುವುದಕ್ಕೆ ಚಿತ್ರತಂಡ ಸಜ್ಜಾಗಿದೆ.

ಆಂದೋಲನ ಡೆಸ್ಕ್

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

12 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

12 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

13 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

14 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

19 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

19 hours ago