The Raja Saab prabhas
ತೆಲುಗು ನಟ ಪ್ರಭಾಸ್ ಇತ್ತೀಚೆಗೆ ಹೆಚ್ಚಾಗಿಯೇ ಆ್ಯಕ್ಷನ್ ಚಿತ್ರಗಳಲ್ಲೇ ನಟಿಸುತ್ತಿದ್ದರು. ಒಂದು ಕಾಲಕ್ಕೆ ಫ್ಯಾಮಿಲಿ ಚಿತ್ರಗಳಿಗೆ ಹೆಸರಾಗಿದ್ದ ಪ್ರಭಾಸ್, ಈಗ ಬಹಳ ದಿನಗಳ ನಂತರ ಅದೇ ಜಾನರ್ಗೆ ವಾಪಸ್ಸಾಗಿದ್ದಾರೆ. ಈ ಬಾರಿ ಅವರು ‘ ದಿ ರಾಜಾಸಾಬ್’ ಎಂಬ ಹಾರರ್ ಕಾಮಿಡಿ ಚಿತ್ರದಲ್ಲಿ ನಟಿಸಿದ್ದು, ಚಿತ್ರವು ಡಿ.05ರಂದು ಪ್ಯಾನ್ ಇಂಡಿಯಾ ಚಿತ್ರವಾಗಿ ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದೆ.
ಅದಕ್ಕೂ ಮೊದಲು ಸೋಮವಾರ, ಹೈದರಾಬಾದ್ನ ಪ್ರಸಾದ್ ಸಿನಿಮಾಸ್ನಲ್ಲಿ ಚಿತ್ರದಲ್ಲಿ ಚಿತ್ರದ ಟೀಸರ್ ನೂರಾರು ಅಭಿಮಾನಿಗಳ ಸಮ್ಮುಖದಲ್ಲಿ ಬಿಡುಗಡೆಯಾಗಿದೆ. ಐದು ಭಾಷೆಗಳ ಟೀಸರ್ ಏಕಕಾಲಕ್ಕೆ ಬಿಡುಗಡೆಯಾಗಿರುವುದು ವಿಶೇಷ. ಈ ಚಿತ್ರವನ್ನು ತೆಲುಗಿನ ಖ್ಯಾತ ಚಿತ್ರ ನಿರ್ಮಾಣ ಸಂಸ್ಥೆ ಪೀಪಲ್ ಮೀಡಿಯಾ ಫ್ಯಾಕ್ಟರಿ ನಿರ್ಮಿಸಿದೆ. ಟಿ.ಜಿ.ವಿಶ್ವ ಪ್ರಸಾದ್ ಚಿತ್ರದ ನಿರ್ಮಾಣ ಮಾಡಿದರೆ, ಮಾರುತಿ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ.
ವಿಶೇಷವೆಂದರೆ, ಈ ಚಿತ್ರದಲ್ಲಿ ಪ್ರಭಾಸ್ಗೆ ಮೂವರು ನಾಯಕಿಯರಿದ್ದಾರೆ. ಪ್ರಭಾಸ್ ಎಂಟ್ರಿ, ಕಾಮಿಡಿ, ಹಾರರ್ ಅಂಶಗಳು ಇವೆಲ್ಲವೂ ಪ್ರೇಕ್ಷಕರನ್ನು ಸೆಳೆಯುತ್ತಿದೆ. ಪ್ರಭಾಸ್ ಜೊತೆಗೆ ಬಾಲಿವುಡ್ ನಟ ಸಂಜಯ್ ದತ್ ಸಹ ಈ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅವರಿಂದಲೇ ಚಿತ್ರದ ಟೀಸರ್ ಪ್ರಾರಂಭವಾಗುತ್ತದೆ. ಅವರ ಗೆಟಪ್, ರಾಜಮನೆತನದ ಸುತ್ತ ನಡೆಯುವ ಕಥೆ ಮತ್ತು ಹಾರರ್ ಅಂಶಗಳು ಚಿತ್ರದ ಮೇಲಿನ ನಿರೀಕ್ಷೆಯನ್ನು ಹೆಚ್ಚಿಸಿದೆ.
‘ಪ್ರತಿ ರೋಜು ಪಂಡಗ’, ‘ಪ್ರೇಮ ಕಥಾ ಚಿತ್ರಂ’, ‘ಮಹಾನುಭಾವುಡು’ ಸೇರಿ ಹಲವು ಯಶಸ್ವಿ ಚಿತ್ರಗಳನ್ನು ನಿರ್ದೇಶಿಸಿರುವ ಮಾರುತಿ, ಬರೆದು ನಿರ್ದೇಶನ ಮಾಡುತ್ತಿರುವ ಈ ಚಿತ್ರದಲ್ಲಿ ಪ್ರಭಾಸ್ ಜೊತೆಗೆ ಸಂಜಯ್ ದತ್, ನಿಧಿ ಅಗರ್ವಾಲ್, ಮಾಳವಿಕಾ ಮೋಹನ್, ರಿದ್ಧಿ ಕುಮಾರ್, ಯೋಗಿ ಬಾಬು ಮುಂತಾದವರು ನಟಿಸುತ್ತಿದ್ದಾರೆ.
‘ದಿ ರಾಜಸಾಬ್’ ಚಿತ್ರಕ್ಕಾಗಿ ಹೈದರಾಬಾದ್ನಲ್ಲಿ ಬೃಹತ್ ಬಂಗಲೆಯ ಸೆಟ್ ನಿರ್ಮಿಸಲಾಗಿದ್ದು, ಆ ಸೆಟ್ನಲ್ಲೇ ಚಿತ್ರದ ಬಹುತೇಕ ಚಿತ್ರೀಕರಣ ನಡೆಸಲಾಗಿದೆ. ಮೂರು ಹಾಡು ಮತ್ತು ಸ್ವಲ್ಪ ಮಾತಿನ ಭಾಗದ ಚಿತ್ರೀಕರಣ ಬಾಕಿ ಇದ್ದು, ಸದ್ಯದಲ್ಲೇ ಚಿತ್ರೀಕರಣ ಮುಗಿಸಿ, ಡಿ.05ರಂದು ಚಿತ್ರ ಬಿಡುಗಡೆ ಮಾಡುವುದಕ್ಕೆ ಚಿತ್ರತಂಡ ಸಜ್ಜಾಗಿದೆ.
ತುಮಕೂರು: 2023ರಲ್ಲಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ನೇತೃತ್ವದ ಸರ್ಕಾರ ಮೂರು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿ, 4ನೇ ವರ್ಷಕ್ಕೆ ಪಾದಾರ್ಪಣೆ…
ನವದೆಹಲಿ: ಬೀದಿ ನಾಯಿಗಳ ನಿಯಂತ್ರಣಕ್ಕೆ ಅವುಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸಲು ಆದೇಶಿಸಿದ್ದ ಸುಪ್ರೀಂಕೋರ್ಟ್ ತನ್ನ ಆದೇಶವನ್ನು ಹಿಂಪಡೆಯುವುದಿಲ್ಲ ಎಂದು ಹೇಳಿದೆ.…
ಕೊಡಗು: ಜಿಲ್ಲೆಯ ಕುಶಾಲನಗರದ ದುಬಾರೆ ಆನೆ ಶಿಬಿರದಲ್ಲಿ ಸ್ನಾನ ಮಾಡುವ ವೇಳೆ ಕಂಜನ್ ಆನೆ ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ಮಾರ್ತಾಂಡ…
ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದ ಸಾರಿಗೆ ಸಂಘಟನೆಗಳು ಮೇ.20ರಂದು ಕರೆ ನೀಡಿದ್ದ ಮುಷ್ಕರಕ್ಕೆ ಕರ್ನಾಟಕ ಹೈಕೋರ್ಟ್ ಅಂಕುಶ ಹಾಕಿದೆ.…
ಬೆಂಗಳೂರು: ಆನ್ಲೈನ್ ಮೂಲಕ ಔಷಧಿಗಳ ಖರೀದಿ ಮಾರಾಟ ನಿಲ್ಲಿಸುವಂತೆ ಆಗ್ರಹಿಸಿ ನಾಳೆ ರಾಜ್ಯದಾದ್ಯಂತ ಮೆಡಿಕಲ್ ಶಾಪ್ಗಳು ಬಂದ್ ಆಗಲಿವೆ. ಅಖಿಲ…
ನೀಟು.... ಘಾಟು ! ಆಗ, ಎಷ್ಟೊಂದು ಶಿಸ್ತು, ಕ್ರಮವಾಗಿ ನಡೆಯುತ್ತಿತ್ತು? ಪರೀಕ್ಷೆ “ ನೀಟ್ “! ಈಗ, ಇದಕ್ಕೂ ಅಂಟಿಬಿಟ್ಟಿತಲ್ಲ…