ಮನರಂಜನೆ

ತೆಲುಗಿನ ಸೂಪರ್ ಸ್ಟಾರ್ ಸೂರ್ಯ ಕುಮಾರ್ ಆದ ಉಪೇಂದ್ರ

ಉಪೇಂದ್ರ ಅಭಿನಯದ ‘45’ ಚಿತ್ರ ಡಿ.25ರಂದು ಬಿಡುಗಡೆಯಾಗುತ್ತಿದೆ. ‘ರಕ್ತ ಕಾಶ್ಮೀರ’ ಚಿತ್ರವು ಫೆಬ್ರವರಿಯಲ್ಲಿ ಬಿಡುಗಡೆಯಾಗುವ ಸಾಧ್ಯತೆ ಇದೆ. ಅದಕ್ಕೂ ಮೊದಲು ಉಪೇಂದ್ರ ಅಭಿನಯದ ಇನ್ನೊಂದು ಚಿತ್ರ ಬಿಡುಗಡೆಯಾಗಲಿದೆ. ಅದೇ ‘ಆಂಧ್ರ ಕಿಂಗ್ ತಾಲೂಕ’.

‘UI’ ನಂತರ ಉಪೇಂದ್ರ ಒಪ್ಪಿಕೊಂಡ ಚಿತ್ರ ‘ಆಂಧ್ರ ಕಿಂಗ್ ತಾಲೂಕ’. ಈ ಚಿತ್ರವು ನವೆಂಬರ್‍ 27ರಂದು ಬಿಡುಗಡೆಯಾಗುತ್ತಿದ್ದು, ಅದಕ್ಕೂ ಮೊದಲು ಇತ್ತೀಚೆಗೆ ಚಿತ್ರದ ಕನ್ನಡದ ಟ್ರೇಲರ್‍ ಬಿಡುಗಡೆಯಾಗಿದೆ. ಸಿನಿಮಾನಲ್ಲಿ ತೆಲುಗು ನಟ ರಾಮ್ ಪೋತಿನೇನಿ ಮತ್ತು ಉಪೇಂದ್ರ ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ. ನಾಯಕಿಯಾಗಿ ಭಾಗ್ಯಶ್ರೀ ಬೋರ್ಸೆ ಸಾಥ್ ಕೊಟ್ಟಿದ್ದಾರೆ.

ಸಿನಿಮಾನಲ್ಲಿ ಉಪೇಂದ್ರ ಸ್ಟಾರ್ ಹೀರೋ ಆಗಿ ನಟಿಸಿದ್ದಾರೆ. ಅವರ ಅಪ್ಪಟ ಅಭಿಮಾನಿಯ ಪಾತ್ರದಲ್ಲಿ ರಾಮ್ ಪೋತಿನೇನಿ ನಟಿಸಿದ್ದಾರೆ. ಇದು ಅಭಿಮಾನಿ ಮತ್ತು ಸ್ಟಾರ್ ಹೀರೋ ನಡೆಯುವ ಕಥೆ. ಈ ಚಿತ್ರಕ್ಕೆ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ರಾಹುಲ್ ರಾಮಕೃಷ್ಣ, ಮುರಳಿ ಶರ್ಮಾ, ರಾಜೀವ್ ಕನಕಾಲ, ರಾವ್ ರಮೇಶ್ ಮುಂತಾದವರು ನಟಿಸಿರುವ ಈ ಚಿತ್ರವನ್ನು ಮೈತ್ರಿ ಮೂವಿ ಮೇಕರ್ಸ್ ಸಂಸ್ಥೆ ನಿರ್ಮಿಸಿದೆ.

ಈ ಚಿತ್ರದ ಕುರಿತು ಮಾತನಾಡಿದ ಉಪೇಂದ್ರ, ‘ಎಲ್ಲಾ ಸಿನಿಮಾ ಮಾಡೋದಿಕ್ಕೆ ಒಂದೊಂದು ಕಾರಣ ಇರುತ್ತದೆ. ಕಥೆ, ಸಂದೇಶ, ಚಿತ್ರಕಥೆ, ನಮಗೆ ಸಿಗುವ ಸ್ಕೋಪ್ ಇದೆಲ್ಲಾ ಕಾರಣ. ಆದರೆ, ಈ ಸಿನಿಮಾ ಮಾಡಿರುವುದು ಅಭಿಮಾನಿಗಳಿಗೋಸ್ಕರ. ಈ ಚಿತ್ರ ನೋಡಿ ಅಭಿಮಾನಿಗಳು ಎಂಜಾಯ್ ಮಾಡುತ್ತಾರೆ. ನಾನು ಚಿತ್ರ ನೋಡಿ ಮಾತನಾಡುತ್ತೇನೆ’ ಎನ್ನುತ್ತಾರೆ.

ಆಂದೋಲನ ಡೆಸ್ಕ್

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

46 seconds ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

5 mins ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

10 mins ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

15 mins ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

20 mins ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

22 mins ago