ಉಪೇಂದ್ರ ಅಭಿನಯದ ‘45’ ಚಿತ್ರ ಡಿ.25ರಂದು ಬಿಡುಗಡೆಯಾಗುತ್ತಿದೆ. ‘ರಕ್ತ ಕಾಶ್ಮೀರ’ ಚಿತ್ರವು ಫೆಬ್ರವರಿಯಲ್ಲಿ ಬಿಡುಗಡೆಯಾಗುವ ಸಾಧ್ಯತೆ ಇದೆ. ಅದಕ್ಕೂ ಮೊದಲು ಉಪೇಂದ್ರ ಅಭಿನಯದ ಇನ್ನೊಂದು ಚಿತ್ರ ಬಿಡುಗಡೆಯಾಗಲಿದೆ. ಅದೇ ‘ಆಂಧ್ರ ಕಿಂಗ್ ತಾಲೂಕ’.
‘UI’ ನಂತರ ಉಪೇಂದ್ರ ಒಪ್ಪಿಕೊಂಡ ಚಿತ್ರ ‘ಆಂಧ್ರ ಕಿಂಗ್ ತಾಲೂಕ’. ಈ ಚಿತ್ರವು ನವೆಂಬರ್ 27ರಂದು ಬಿಡುಗಡೆಯಾಗುತ್ತಿದ್ದು, ಅದಕ್ಕೂ ಮೊದಲು ಇತ್ತೀಚೆಗೆ ಚಿತ್ರದ ಕನ್ನಡದ ಟ್ರೇಲರ್ ಬಿಡುಗಡೆಯಾಗಿದೆ. ಸಿನಿಮಾನಲ್ಲಿ ತೆಲುಗು ನಟ ರಾಮ್ ಪೋತಿನೇನಿ ಮತ್ತು ಉಪೇಂದ್ರ ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ. ನಾಯಕಿಯಾಗಿ ಭಾಗ್ಯಶ್ರೀ ಬೋರ್ಸೆ ಸಾಥ್ ಕೊಟ್ಟಿದ್ದಾರೆ.
ಸಿನಿಮಾನಲ್ಲಿ ಉಪೇಂದ್ರ ಸ್ಟಾರ್ ಹೀರೋ ಆಗಿ ನಟಿಸಿದ್ದಾರೆ. ಅವರ ಅಪ್ಪಟ ಅಭಿಮಾನಿಯ ಪಾತ್ರದಲ್ಲಿ ರಾಮ್ ಪೋತಿನೇನಿ ನಟಿಸಿದ್ದಾರೆ. ಇದು ಅಭಿಮಾನಿ ಮತ್ತು ಸ್ಟಾರ್ ಹೀರೋ ನಡೆಯುವ ಕಥೆ. ಈ ಚಿತ್ರಕ್ಕೆ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ರಾಹುಲ್ ರಾಮಕೃಷ್ಣ, ಮುರಳಿ ಶರ್ಮಾ, ರಾಜೀವ್ ಕನಕಾಲ, ರಾವ್ ರಮೇಶ್ ಮುಂತಾದವರು ನಟಿಸಿರುವ ಈ ಚಿತ್ರವನ್ನು ಮೈತ್ರಿ ಮೂವಿ ಮೇಕರ್ಸ್ ಸಂಸ್ಥೆ ನಿರ್ಮಿಸಿದೆ.
ಈ ಚಿತ್ರದ ಕುರಿತು ಮಾತನಾಡಿದ ಉಪೇಂದ್ರ, ‘ಎಲ್ಲಾ ಸಿನಿಮಾ ಮಾಡೋದಿಕ್ಕೆ ಒಂದೊಂದು ಕಾರಣ ಇರುತ್ತದೆ. ಕಥೆ, ಸಂದೇಶ, ಚಿತ್ರಕಥೆ, ನಮಗೆ ಸಿಗುವ ಸ್ಕೋಪ್ ಇದೆಲ್ಲಾ ಕಾರಣ. ಆದರೆ, ಈ ಸಿನಿಮಾ ಮಾಡಿರುವುದು ಅಭಿಮಾನಿಗಳಿಗೋಸ್ಕರ. ಈ ಚಿತ್ರ ನೋಡಿ ಅಭಿಮಾನಿಗಳು ಎಂಜಾಯ್ ಮಾಡುತ್ತಾರೆ. ನಾನು ಚಿತ್ರ ನೋಡಿ ಮಾತನಾಡುತ್ತೇನೆ’ ಎನ್ನುತ್ತಾರೆ.
ಬೆಂಗಳೂರು: ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ಕಳೆದ 2023 ಡಿಸೆಂಬರ್.4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ, ಪಶುವೈದ್ಯರು,…
ನವದೆಹಲಿ: ದೇಶದ ಗಮನ ಸೆಳೆದಿರುವ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ನಾಳೆ ಹೊರಬೀಳಲಿದ್ದು, ಘಟಾನುಘಟಿ ರಾಜಕೀಯ ನಾಯಕರ ಭವಿಷ್ಯ…
ಹಾಸನ: ಹಳಿ ಮೇಲೆ ಕೆಲಸ ಮಾಡುತ್ತಿದ್ದ ನೌಕರನಿಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ನೌಕರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಕಲೇಶಪುರ…
ಕೆ.ಆರ್.ನಗರ: ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ಮೈಸೂರು ಜಿಲ್ಲೆ ಕೆ.ಆರ್.ನಗರ ತಾಲ್ಲೂಕಿನ ಚೀನರಹಳ್ಳಿ ಗ್ರಾಮದಲ್ಲಿ ನಡೆದಿದೆ.…
ಚುನಾವಣೋತ್ತರ.. ! ಪಂಚರಾಜ್ಯಗಳ ಚುನಾವಣೆ ಮುಗಿಯುತ್ತಿದ್ದಂತೆಯೇ.. ಪ್ರಕಟವಾದವು ಫಲಿತಾಂಶದ ಸಮೀಕ್ಷೆ ಆದರೆ ಯಾರೂ ಮಾಡಿರಲಿಲ್ಲ ಹೀಗೆ ವಾಣಿಜ್ಯ ಸಿಲಿಂಡರ್ ದರ…
ಬೇಸಿಗೆ ತೀವ್ರಗೊಳ್ಳುತ್ತಿದ್ದಂತೆ ರಾಜ್ಯದ ಹಲವೆಡೆ ನೀರಿನ ಕೊರತೆ ಗಂಭೀರವಾಗುತ್ತಿದೆ. ಕೆರೆಗಳು, ಹಳ್ಳಗಳು ಒಣಗುತ್ತಿದ್ದು, ಅಂತರ್ಜಲ ಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ.…