ಉಪೇಂದ್ರ ಅಭಿನಯದ ‘45’ ಚಿತ್ರ ಡಿ.25ರಂದು ಬಿಡುಗಡೆಯಾಗುತ್ತಿದೆ. ‘ರಕ್ತ ಕಾಶ್ಮೀರ’ ಚಿತ್ರವು ಫೆಬ್ರವರಿಯಲ್ಲಿ ಬಿಡುಗಡೆಯಾಗುವ ಸಾಧ್ಯತೆ ಇದೆ. ಅದಕ್ಕೂ ಮೊದಲು ಉಪೇಂದ್ರ ಅಭಿನಯದ ಇನ್ನೊಂದು ಚಿತ್ರ ಬಿಡುಗಡೆಯಾಗಲಿದೆ. ಅದೇ ‘ಆಂಧ್ರ ಕಿಂಗ್ ತಾಲೂಕ’.
‘UI’ ನಂತರ ಉಪೇಂದ್ರ ಒಪ್ಪಿಕೊಂಡ ಚಿತ್ರ ‘ಆಂಧ್ರ ಕಿಂಗ್ ತಾಲೂಕ’. ಈ ಚಿತ್ರವು ನವೆಂಬರ್ 27ರಂದು ಬಿಡುಗಡೆಯಾಗುತ್ತಿದ್ದು, ಅದಕ್ಕೂ ಮೊದಲು ಇತ್ತೀಚೆಗೆ ಚಿತ್ರದ ಕನ್ನಡದ ಟ್ರೇಲರ್ ಬಿಡುಗಡೆಯಾಗಿದೆ. ಸಿನಿಮಾನಲ್ಲಿ ತೆಲುಗು ನಟ ರಾಮ್ ಪೋತಿನೇನಿ ಮತ್ತು ಉಪೇಂದ್ರ ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ. ನಾಯಕಿಯಾಗಿ ಭಾಗ್ಯಶ್ರೀ ಬೋರ್ಸೆ ಸಾಥ್ ಕೊಟ್ಟಿದ್ದಾರೆ.
ಸಿನಿಮಾನಲ್ಲಿ ಉಪೇಂದ್ರ ಸ್ಟಾರ್ ಹೀರೋ ಆಗಿ ನಟಿಸಿದ್ದಾರೆ. ಅವರ ಅಪ್ಪಟ ಅಭಿಮಾನಿಯ ಪಾತ್ರದಲ್ಲಿ ರಾಮ್ ಪೋತಿನೇನಿ ನಟಿಸಿದ್ದಾರೆ. ಇದು ಅಭಿಮಾನಿ ಮತ್ತು ಸ್ಟಾರ್ ಹೀರೋ ನಡೆಯುವ ಕಥೆ. ಈ ಚಿತ್ರಕ್ಕೆ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ರಾಹುಲ್ ರಾಮಕೃಷ್ಣ, ಮುರಳಿ ಶರ್ಮಾ, ರಾಜೀವ್ ಕನಕಾಲ, ರಾವ್ ರಮೇಶ್ ಮುಂತಾದವರು ನಟಿಸಿರುವ ಈ ಚಿತ್ರವನ್ನು ಮೈತ್ರಿ ಮೂವಿ ಮೇಕರ್ಸ್ ಸಂಸ್ಥೆ ನಿರ್ಮಿಸಿದೆ.
ಈ ಚಿತ್ರದ ಕುರಿತು ಮಾತನಾಡಿದ ಉಪೇಂದ್ರ, ‘ಎಲ್ಲಾ ಸಿನಿಮಾ ಮಾಡೋದಿಕ್ಕೆ ಒಂದೊಂದು ಕಾರಣ ಇರುತ್ತದೆ. ಕಥೆ, ಸಂದೇಶ, ಚಿತ್ರಕಥೆ, ನಮಗೆ ಸಿಗುವ ಸ್ಕೋಪ್ ಇದೆಲ್ಲಾ ಕಾರಣ. ಆದರೆ, ಈ ಸಿನಿಮಾ ಮಾಡಿರುವುದು ಅಭಿಮಾನಿಗಳಿಗೋಸ್ಕರ. ಈ ಚಿತ್ರ ನೋಡಿ ಅಭಿಮಾನಿಗಳು ಎಂಜಾಯ್ ಮಾಡುತ್ತಾರೆ. ನಾನು ಚಿತ್ರ ನೋಡಿ ಮಾತನಾಡುತ್ತೇನೆ’ ಎನ್ನುತ್ತಾರೆ.
ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…
೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…
ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…
ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…
ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…