ಮನರಂಜನೆ

ತೆಲುಗಿನ ‘ಮೀಕು ಮಾತ್ರಮೆ ಚಪ್ತಾ’ ಕನ್ನಡಕ್ಕೆ ಬಂತು …

ತೆಲುಗಿನಲ್ಲಿ ಕೆಲವು ವರ್ಷಗಳ ಹಿಂದೆ ‘ಮೀಕು ಮಾತ್ರಮೆ ಚಪ್ತಾ’ ಎಂಬ ಕಾಮಿಡಿ ಚಿತ್ರ ಬಂದು ಯಶಸ್ವಿಯಾಗಿತ್ತು. ಈಗ ಆ ಚಿತ್ರವು ಕನ್ನಡದಲ್ಲಿ ಸದ್ದಿಲ್ಲದೆ ರೀಮೇಕ್‍ ಆಗಿ, ಬಿಡುಗಡೆಗೂ ನಿಂತಿದೆ. ಇದೇ ಅಕ್ಟೋಬರ್ 24ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಹೆಸರು ‘ಯಾರಿಗೂ ಹೇಳ್ಬೇಡಿ’.

ಹೆಸರು ಕೇಳುತ್ತಿದ್ದಂತೆಯೇ, ಮೂರು ದಶಕಗಳ ಹಿಂದೆ ಬಿಡುಗಡೆಯಾದ ಅನಂತ್‍ ನಾಗ್ ಅಭಿನಯದ ‘ಯಾರಿಗೂ ಹೇಳ್ಬೇಡಿ’ ನೆನಪಾಗಬಹುದು. ಆ ಚಿತ್ರಕ್ಕೂ, ಈ ಚಿತ್ರಕ್ಕೂ ಸಂಬಂಧವಿಲ್ಲವಂತೆ. ಚಿತ್ರದಲ್ಲಿ ಚೇತನ್‍ ವಿಕ್ಕಿ ನಾಯಕನಾಗಿ ನಟಿಸಿದರೆ, ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಅಪ್ಪಣ್ಣ ಸ್ನೇಹಿತನಾಗಿ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ. ಚೈತ್ರಾ ಆಚಾರ್ ಈ ಚಿತ್ರದಲ್ಲಿ ವೈದ್ಯೆಯಾಗಿ ಕಾಣಿಸಿಕೊಂಡರೆ, ಮಿಕ್ಕಂತೆ ಅಶ್ವಿನಿ ಪೊಲೆಪಲ್ಲಿ, ಶರತ್ ಲೋಹಿತಾಶ್ವ, ಚೈತ್ರಾರಾವ್, ಶಭರೇಶ್, ಕಾರ್ತಿಕ್ ಮುಂತಾದವರು ನಟಿಸಿದ್ದಾರೆ. ಹೈದರಬಾದ್‌ನ ಹರೀಶ್ ಅಮ್ಮಿನೇನಿ ಈ ಚಿತ್ರ ನಿರ್ಮಿಸಿದರೆ, ಶಿವಗಣೇಶ್‍ ನಿರ್ದೇಶನ ಮಾಡಿದ್ದಾರೆ.

ಇದನ್ನು ಓದಿ: ಮೊದಲು ಕನ್ನಡ, ನಂತರ ಬೇರೆ ಭಾಷೆಗಳಲ್ಲಿ ಬರಲಿದ್ದಾನೆ ‘ಬ್ರ್ಯಾಟ್‍’

ಈ ಚಿತ್ರದ ಕುರಿತು ಮಾಹಿತಿ ಹಂಚಿಕೊಂಡ ನಾಯಕ ಚೇತನ್ ವಿಕ್ಕಿ, ‘ಇದೊಂದು ಸಂಪೂರ್ಣ ಹಾಸ್ಯಮಯ ಚಿತ್ರ. ಶುರುವಿನಿಂದ ಕೊನೆವರೆಗೂ ನಗಿಸುತ್ತಲೇ ಸಾಗುತ್ತದೆ. ನಾನಿಲ್ಲಿ ವಿಡಿಯೋ ಜಾಕಿಯಾಗಿ ಕಾಣಿಸಿಕೊಂಡಿದ್ದು, ಮದುವೆ ಮುಂಚಿನ ಒಂದು ಸಂದರ್ಭದಲ್ಲಿ ಸುಳ್ಳು ಹೇಳಿ ಕಷ್ಟಕ್ಕೆ ಸಿಲುಕುತ್ತೇನೆ. ಅದನ್ನು ಯಾರಿಗೂ ಹೇಳ್ಬೇಡಿ ಎಂದು ಸುಳ್ಳಿನ ಸರಮಾಲೆಯನ್ನೆ ಕಟ್ಟುತ್ತೇನೆ. ಕೊನೆಗೆ ಅದನ್ನು ಮುಚ್ಚಿಡಲು ಹೋದಾಗ ಏನೆಲ್ಲಾ ಅವಾಂತರಗಳು ಆಗುತ್ತದೆ, ಅದರಿಂದ ಹೇಗೆ ಹೊರಗೆ ಬರುತ್ತೇನೆ ಎಂಬುದು ಕಾಮಿಡಿ ಮೂಲಕ ಹೇಳಲಾಗಿದೆ’ ಎಂದರು.

ಅಶ್ವಿನಿ ಪೋಲೇಪಲ್ಲಿ ಮಾತನಾಡಿ, ‘ಬಿಗ್‍ ಬಜೆಟ್‍ ಚಿತ್ರಗಳನ್ನು ಹೊರತುಪಡಿಸಿದರೆ, ಮಿಕ್ಕ ಚಿತ್ರಗಳಲ್ಲಿ ಕಂಟೆಂಟ್‍ ಇರುವುದಿಲ್ಲ ಎಂಬ ನಂಬಿಕೆ ಹೆಚ್ಚಾಗುತ್ತಿದೆ. ನಮ್ಮ ಸಿನಿಮಾ ನೋಡಿದರೆ ಅದು ಕಡಿಮೆಯಾಗುತ್ತದೆ. ಈ ಚಿತ್ರ ಎಲ್ಲರಿಗೂ ಇಷ್ಟವಾಗುತ್ತದೆ’ ಎಂದರು.

‘ಯಾರಿಗೂ ಹೇಳ್ಬೇಡಿ’ ಚಿತ್ರಕ್ಕೆ ಶಶಾಂಕ್ ಶೇಷಗಿರಿ ಸಂಗೀತ, ಡೇವಿಡ್‍ ಆನಂದರಾಜ್‍ ಛಾಯಾಗ್ರಹಣವಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

11 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

11 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

11 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

12 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

12 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

15 hours ago